AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanteras 2023: ಧನತ್ರಯೋದಶಿ ಹಬ್ಬದ ಶುಭ ಮುಹೂರ್ತ ಯಾವಾಗ? ಯಾವ ಸಮಯದಲ್ಲಿ ಚಿನ್ನ ಬೆಳ್ಳಿ ಖರೀದಿಸಿದರೆ ಸೂಕ್ತ 

ಐದು ದಿನಗಳ  ದೀಪಾವಳಿ ಹಬ್ಬದ ಆಚರಣೆಯು ಧನತ್ರಯೋದಶಿ ದಿನದಂದು ಪ್ರಾರಂಭವಾಗುತ್ತದೆ.  ಈ ದಿನ  ಲಕ್ಷ್ಮೀ ದೇವಿ ಹಾಗೂ ಸಂಪತ್ತಿನ ದೇವ ಕುಬೇರನನ್ನು ಪೂಜಿಸುವುದರಿಂದ ಸಂಪತ್ತು ಮತ್ತು ಸಮೃದ್ಧಿ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಅಲ್ಲದೆ ಈ ಶುಭ ದಿನದಂದು  ಚಿನ್ನ ಬೆಳ್ಳಿಯನ್ನು ಖರೀದಿಸುವುದು ಕೂಡಾ ತುಂಬಾ ಒಳ್ಳೆಯದು ಎಂಬ ನಂಬಿಕೆಯಿದೆ. ಅದಕ್ಕಾಗಿಯೇ ಹೆಚ್ಚಿನವರು ಈ ದಿನದನ್ನು ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ಖರೀದಿಸುತ್ತಾರೆ.  ನೀವು ಕೂಡ ಚಿನ್ನವನ್ನು ಖರೀದಿಸುವ ಯೋಜನೆಯಲ್ಲಿದ್ದರೆ,  ಈ ಬಾರಿಯ ಧನತ್ರಯೋದಶಿಯ ಶುಭ ಮುಹೂರ್ತ, ಮತ್ತು  ಚಿನ್ನ , ಬೆಳ್ಳಿ ಖರೀದಿಸಲು ಸೂಕ್ತ ಸಮಯ ಯಾವುದು ಎಂಬುದನ್ನು ತಿಳಿಯಿರಿ.

Dhanteras 2023: ಧನತ್ರಯೋದಶಿ ಹಬ್ಬದ ಶುಭ ಮುಹೂರ್ತ ಯಾವಾಗ? ಯಾವ ಸಮಯದಲ್ಲಿ ಚಿನ್ನ ಬೆಳ್ಳಿ ಖರೀದಿಸಿದರೆ ಸೂಕ್ತ 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Nov 07, 2023 | 6:55 PM

Share

ಪವಿತ್ರ ದೀಪಾವಳಿ ಹಬ್ಬವನ್ನು ಪ್ರತಿ ವರ್ಷ ಕಾರ್ತಿಕ ಮಾಸದ ಅಮವಾಸ್ಯೆಯಂದು ಆಚರಿಸಲಾಗುತ್ತದೆ. ಈ ವರ್ಷ ಈ ಹಬ್ಬವನ್ನು ನವೆಂಬರ್ 12 ರಂದು ಆಚರಿಸಲಾಗುತ್ತಿದೆ. ಐದು ದಿನಗಳ ದೀಪಾವಳಿ ಹಬ್ಬದ ಆಚರಣೆಯು ಧನತ್ರಯೋದಶಿ ದಿನದಂದು ಪ್ರಾರಂಭವಾಗುತ್ತದೆ. ಧನತ್ರಯೋದಶಿಯ ಶುಭ ದಿನದಂದು ಸಂಪತ್ತಿನ ಅಧಿದೇವತೆ ಲಕ್ಷ್ಮೀ ದೇವಿ ಹಾಗೂ ಕುಬೇರರನ್ನು ಪೂಜಿಸುವುದರಿಂದ ಸಂಪತ್ತು, ಸಮೃದ್ಧಿ ಮತ್ತು ಸುಖ, ಶಾಂತಿ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಸಮುದ್ರ ಮಂಥನದ ಸಮಯದಲ್ಲಿ ಸಾಗರದಿಂದ ಲಕ್ಷ್ಮೀ ದೇವಿಯು ಹೊರಬಂದ ದಿನವೇ ಧನತ್ರಯೋದಶಿ ಎಂದು ಪುರಾಣಗಳು ಹೇಳುತ್ತವೆ. ಆದ್ದರಿಂದ ಈ ದಿನ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀ ದೇವಿಯನ್ನು ಹಾಗೂ ಸಂಪತ್ತಿನ ದೇವರು ಕುಬೇರನನ್ನು ಪೂಜಿಸಲಾಗುತ್ತದೆ. ಅಲ್ಲದೆ ಈ ದಿನದಂದು ಚಿನ್ನ ಮತ್ತ ಬೆಳ್ಳಿಯ ವಸ್ತುಗಳನ್ನು  ಖರೀದಿಸುವುದರಿಂದಲೂ ಮನೆಗೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂಬ ನಂಬಿಕೆಯಿದೆ. ಅದಕ್ಕಾಗಿಯೇ ಹೆಚ್ಚಿನ ಜನರು ಈ ದಿನ ಚಿನ್ನ ಬೆಳ್ಳಿಯನ್ನು ಖರೀದಿಸುತ್ತಾರೆ.  ಈ ಬಾರಿ  ಧನತ್ರಯೋದಶಿಯ ದಿನ ಚಿನ್ನ ಬೆಳ್ಳಿ ಖರೀದಿಸಲು ಯೋಜಿಸುತ್ತಿದ್ದರೆ,  ಧನತ್ರಯೋದಶಿಯ ಶುಭ ಮುಹೂರ್ತ ಮತ್ತು ಚಿನ್ನವನ್ನು ಖರೀದಿಸಲು ಸೂಕ್ತ ಸಮಯ ಯಾವುದೆಂದು ತಿಳಿಯಿರಿ.

ಧನತ್ರಯೋದಶಿ ಯಾವಾಗ?

ಈ ಬಾರಿಯ ಧನತ್ರಯೋದಶಿ ದಿನವನ್ನು ನವೆಂಬರ್ 10 ರಂದು ಆಚರಿಸಲಾಗುತ್ತಿದೆ. ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯ ಶುಭ ದಿನದಂದು ಧನತ್ರಯೋದಶಿ ಹಬ್ಬವನ್ನು ಆಚರಿಸಲಾಗುತ್ತದೆ.

ಧನತ್ರಯೋದಶಿ ಮುಹೂರ್ತ:

ಕಾರ್ತಿಕ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯ ತಿಥಿಯು ನವೆಂಬರ್ 10 ರಂದು ಮಧ್ಯಾಹ್ನ 02:35 ಕ್ಕೆ ಪ್ರಾರಂಭವಾಗಿ ಮತ್ತು ನವೆಂಬರ್ 11 ರಂದು ಮಧ್ಯಾಹ್ನ  01:57 ಕ್ಕೆ ಕೊನೆಗೊಳ್ಳಲಿದೆ. ಧನತ್ರಯೋದಶಿ ದಿನದಂದು ಪ್ರದೋಷ ಕಾಲದಲ್ಲಿ ದೇವರನ್ನು ಪೂಜಿಸುವುದು ಶ್ರೇಷ್ಠ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ದೀಪಾವಳಿಯ ಧನತ್ರಯೋದಶಿ ವೇಳೆ ಚಿನ್ನ ಖರೀದಿಸುತ್ತಿದ್ದೀರಾ? ಅದಕ್ಕೆ ಮುಂಚೆ ಈ ಸಲಹೆ ತಿಳಿದಿರಿ

ನವೆಂಬರ್ 10, 2023 ರಂದು ಧನ ತ್ರಯೋದಶಿ ಪೂಜಾ ಮುಹೂರ್ತವು  ಸಂಜೆ 05:47 ರಿಂದ  ಸಂಜೆ 07:43 ರವೆರೆಗೆ ಇರುತ್ತದೆ.

ಪ್ರದೋಷ ಕಾಲ – ಸಂಜೆ 05:30 ರಿಂದ 08:08 ರ ವರೆಗೆ

ವೃಷಭ ಕಾಲ – ಸಂಜೆ 05:47 ರಿಂದ 07:43 ರವರೆಗೆ

ತ್ರಯೋದಶಿ ತಿಥಿ ಪ್ರಾರಂಭ – ನವೆಂಬರ್ 10 ಮಧ್ಯಾಹ್ನ 12:35 ಕ್ಕೆ

ತ್ರಯೋದಶಿ ತಿಥಿ ಮುಕ್ತಾಯ ನವೆಂಬರ್ 11 ಮಧ್ಯಾಹ್ನ 01:57 ಕ್ಕೆ

ಚಿನ್ನ ಬೆಳ್ಳಿ ಖರೀದಿಸಲು ಉತ್ತಮ ಸಮಯ ಯಾವುದು?

ಧನತ್ರಯೋದಶಿ ಹಬ್ಬದ ದಿನದಂದು  ಚಿನ್ನ, ಬೆಳ್ಳಿ ವಸ್ತುಗಳನ್ನು ಖರೀದಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಧನತ್ರಯೋದಶಿಯ ಶುಭದಿನದಂದು ಹೆಚ್ಚಿನ ಭಾರತೀಯರು ಚಿನ್ನ ಬೆಳ್ಳಿಯ ವಸ್ತುಗಳನ್ನು  ಖರೀದಿಸುತ್ತಾರೆ. ಈ ಬಾರಿ ಧನತ್ರಯೋದಶಿಯಂದು ಚಿನ್ನವನ್ನು ಖರೀದಿಸಲು  ನವೆಂಬರ್ 10 ರಂದು ಮಧ್ಯಾಹ್ನ 02:35 ರಿಂದ ನವೆಂಬರ್ 11 ರ ಮಧ್ಯಾಹ್ನ 1:57 ರವರೆಗೆ ಚಿನ್ನ ಬೆಳ್ಳಿ ಖರೀದಿಸಲು ಅತ್ಯಂತ ಮಂಗಳಕರ ಸಮಯವಾಗಿದೆ.

ಚಿನ್ನ, ಬೆಳ್ಳಿಯ ಹೊರತಾಗಿ ಧನತ್ರಯೋದಶಿ ದಿನದಂದು ಪಾತ್ರೆಗಳು, ವಾಹನ ಮತ್ತು ಕುಬೇರ ಯಂತ್ರವನ್ನು ಖರೀದಿಸುವುದು ಸಹ ಒಳ್ಳೆಯದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 5:54 pm, Mon, 6 November 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ