AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ರಾತ್ರಿಯಲ್ಲಿ ಒಂದು ಲೋಟ ಹಾಲು ಏಕೆ ನೀಡುತ್ತಾರೆ? ಈ ಪದ್ಧತಿಯ ಹಿಂದಿರುವ ಆರೋಗ್ಯ ಕಾರಣ ಏನು?

ಮದುವೆಯ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿ ಒಂದು ಲೋಟ ಹಾಲನ್ನು ಕೊಟ್ಟು ಪ್ರಸ್ಥದ ಕೋಣೆಗೆ ಕಳುಹಿಸುವ ಆಚರಣೆಯಿದೆ. ಈ ಪದ್ಧತಿಯನ್ನು ಆಚರಿಸುವುದರ ಹಿಂದಿನ ಕಾರಣವೇನೆಂಬುವುದು ನಿಮಗೆ ತಿಳಿದಿದೆಯೇ. ಈ ಕುರಿತ ಮಾಹಿತಿ ಇಲ್ಲಿದೆ.

ಮೊದಲ ರಾತ್ರಿಯಲ್ಲಿ ಒಂದು ಲೋಟ ಹಾಲು ಏಕೆ ನೀಡುತ್ತಾರೆ? ಈ ಪದ್ಧತಿಯ ಹಿಂದಿರುವ ಆರೋಗ್ಯ ಕಾರಣ ಏನು?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 29, 2023 | 6:35 PM

Share

ವಿವಾಹವನ್ನು ಒಂದು ಪವಿತ್ರ ಕಾರ್ಯವೆಂದು ಹೇಳಲಾಗುತ್ತದೆ. ವಿವಾಹ ಕಾರ್ಯಕ್ರಮದ ಸಮಯದಲ್ಲಿ ಹಲವು ವಿಧಿವಿಧಾನಗಳು ನಡೆಯುತ್ತದೆ. ವಿವಾಹದ ಬಳಿಕ ಮೊದಲ ರಾತ್ರಿ ಆಚರಣೆಯ ಪದ್ಧತಿಯೂ ಇದೆ. ನಾವು ಸಾಮಾನ್ಯವಾಗಿ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ಮದುವೆಯ ಬಳಿಕ ವಧು ಒಂದು ದೊಡ್ಡ ಲೋಟದಲ್ಲಿ ಹಾಲನ್ನು ಹಿಡಿದುಕೊಂಡು ಹೋಗಿ ಪ್ರಸ್ಥದ ಕೋಣೆ ಪ್ರವೇಶಿಸುವ ದೃಶ್ಯವನ್ನು ನೋಡಿರುತ್ತೇವೆ. ನಿಜ ಜೀವನದಲ್ಲೂ ಈ ಸಂಪ್ರದಾಯ ಆಚರಣೆಯಲ್ಲಿದೆ. ಆದರೆ ಈ ಸಂಪ್ರದಾಯವನ್ನು ಏಕೆ ಪಾಲಿಸಲಾಗುತ್ತದೆ ಅದರ ಹಿಂದಿನ ಕಾರಣವೇನು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಿದ್ದರೆ ಮದುವೆಯ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿ ಒಂದು ಲೋಟ ಹಾಲನ್ನು ಕೊಟ್ಟು ಪ್ರಸ್ಥದ ಕೋಣೆಗೆ ಕಳುಹಿಸುವ ಪದ್ಧತಿಯ ಹಿಂದಿನ ಹಿನ್ನೆಲೆ ಏನೆಂಬುದನ್ನು ನೋಡೋಣ.

ಮೊದಲ ರಾತ್ರಿಯಲ್ಲಿ ಒಂದು ಲೋಟ ಹಾಲನ್ನು ಏಕೆ ನೀಡಲಾಗುತ್ತದೆ:

ಮದುವೆಯು ಒಂದು ಪವಿತ್ರ ಕಾರ್ಯವಾಗಿದೆ. ಅನೇಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡ ಅನೇಕ ಸಂಪ್ರದಾಯಗಳಿವೆ. ಅವುಗಳಲ್ಲಿ ಮೊದಲ ರಾತ್ರಿಯೂ ಒಂದು. ಮೊದಲ ರಾತ್ರಿ ಆನಂದಮಯ ವೈವಾಹಿಕ ಜೀವನಕ್ಕೆ ಅಡಿಪಾಯ ಎಂದು ನಂಬಲಾಗಿದೆ. ಸಂಪ್ರದಾಯಗಳ ಪ್ರಕಾರ, ಒಂದು ಲೋಟ ಹಾಲಿನೊಂದಿಗೆ ವೈವಾಹಿಕ ಜೀವನವನ್ನು ಪ್ರಾರಂಭಿಸುವುದು ಸತಿ ಪತಿ ಸಂಬಂಧಕ್ಕೆ ಮಾಧುರ್ಯವನ್ನು ನೀಡುವ ಸಂಕೇತವಾಗಿದೆ. ಮಾತ್ರವಲ್ಲದೆ ನವವಿವಾಹಿತರಿಗೆ ಮೊದಲ ರಾತ್ರಿಯಲ್ಲಿ ನೀಡುವ ಹಾಲಿಗೆ ಕೇಸರಿ, ಬಾದಮಿ, ಸೋಂಪುಕಾಳುಗಳ ಮಿಶ್ರಣವನ್ನು ಹಾಕಿ ಚೆನ್ನಾಗಿ ಕುದಿಸಿ ಕೊಡಲಾಗುತ್ತದೆ.

ನೀವು ಈ ಮಿಶ್ರಣವನ್ನು ಸೇವಿಸಿದಾಗ ಏನಾಗುತ್ತದೆ:

ಹಿಂದಿನಿಂದಲೂ ಕೇಸರಿಯನ್ನು ಕಾಮೋತ್ತೇಜಕ ಎಂದು ಪರಿಗಣಿಸಲಾಗಿದೆ. ವೈಜ್ಞಾನಿಕವಾಗಿ ಕೇಸರಿಯು ಉತ್ತಮವಾದ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಮನಸ್ಥಿತಿಯನ್ನು ಸುಧಾರಿಸಲು, ಮಾನಸಿಕ ಆರೋಗ್ಯವನ್ನು ಸುಧಾರಿಸಿಕೊಳ್ಳಲು, ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಇದನ್ನು ಹಾಲಿನೊಂದಿಗೆ ಬೆರೆಸಿ ನಿಯಮಿತವಾಗಿ ಸೇವಿಸುವುದರರಿಂದ ಖಿನ್ನತೆಯ ಆರಂಭಿಕ ಚಿಹ್ನೆಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

ಮೊದಲ ರಾತ್ರಿಯಲ್ಲಿ ಏಕೆ ಕೇಸರಿ ಮಿಶ್ರಿತ ಹಾಲನ್ನು ನೀಡಲಾಗುತ್ತದೆ:

ವಿವಾಹದ ಸಮಯದಲ್ಲಿ ನವವಧುವರರು ಅನೇಕ ಪೂಜಾ ಕೈಂಕರ್ಯಗಳಲ್ಲಿ, ಸಂಪ್ರದಾಯಗಳಲ್ಲಿ ಭಾಗಿಯಾಗಿರುತ್ತಾರೆ. ಸಹಜವಾಗಿಯೇ ಈ ಸಮಯದಲ್ಲಿ ಅವರಿಗೆ ದಣಿದ ಭಾವನೆ ಮೂಡುತ್ತದೆ. ಹಾಗಾಗಿ ದಣಿದ ದಂಪತಿಗಳಿಗೆ ವಿಶ್ರಾಂತಿ ಸಿಗಲೆಂದೇ ಒಂದು ಲೋಟ ಹಾಲನ್ನು ಮೊದಲ ರಾತ್ರಿಯಲ್ಲಿ ನೀಡಲಾಗುತ್ತದೆ. ಹಾಲು ಟ್ರಿಟೊಫಾನ್ ಎಂಬ ನಿದ್ರೆಯನ್ನು ಉಂಟುಮಾಡುವ ಅಂಶವನ್ನು ಹೊಂದಿರುತ್ತದೆ. ಆದ್ದರಿಂದ ಹಾಲು ಕುಡಿಯುವುದು ವಿಶ್ರಾಂತಿಗೆ ಉತ್ತಮ ಮಾರ್ಗವಾಗಿದೆ. ಇದು ದೇಹಕ್ಕೆ ವಿಶ್ರಾಂತಿ ನೀಡುತ್ತದೆ ಮತ್ತು ಉತ್ತಮ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ.

ಶಕ್ತಿಯುತ ಕಾಮೋತ್ತೇಜಕವಾಗಿ ಕಾರ್ಯನಿರ್ವಹಿಸುತ್ತದೆ ಸಾಮಾನ್ಯವಾಗಿ ಮೊದಲ ರಾತ್ರಿಯಲ್ಲಿ ವಧು ವರರಿಗೆ, ಹಾಲಿಗೆ ಕೇಸರಿ, ಮೆಣಸು, ಬಾದಾಮಿಗಳನ್ನು ಸೇರಿಸಿ ಚೆನ್ನಾಗಿ ಕುದಿಸಿ ಕೊಡಲಾಗುತ್ತದೆ. ಈ ಮಿಶ್ರಣವನ್ನು ಕುದಿಸಿದಾಗ ಆ ಪದಾರ್ಥಗಳು ಕಾಮಾಸಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವ ರಾಸಾಯನಿಕ ಸಂಯುಕ್ತಗಳನ್ನು ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ನೀವು 6 ಗಂಟೆಗಿಂತ ಕಡಿಮೆ ನಿದ್ರೆ ಮಾಡುತ್ತೀರಾ? ಈ ಆರೋಗ್ಯ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ

ಆತಂಕವನ್ನು ಹೋಗಲಾಡಿಸುತ್ತದೆ:

ಹೊಸದಾಗಿ ಮದುವೆಯಾದ ದಂಪತಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಒತ್ತಡಕ್ಕೆ ಒಳಗಾಗಿರುತ್ತಾರೆ. ಈ ಒತ್ತಡವನ್ನು ಹೋಗಲಾಡಿಸಲು ಕೇಸರಿ ಮಿಶ್ರಿತ ಹಾಲು ತುಂಬಾ ಉಪಯುಕ್ತವಾಗಿದೆ. ಕೇಸರಿಯು ಟ್ರಿಪ್ಟೊಫಾನ್ ಎಂಬ ಸಂಯುಕ್ತವನ್ನು ಹೊಂದಿದೆ, ಈ ಅಂಶ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಮನಸ್ಸನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೆ ಅರ್ಧದಷ್ಟು ಹಾಲನ್ನು ಸತಿ ಪತಿ ಹಂಚಿಕೊಂಡು ಕುಡಿಯುವುದರಿಂದ ಇಬ್ಬರ ನಡುವೆ ಭಾಂದವ್ಯ ಉತ್ತಮವಾಗುತ್ತದೆ. ಹಾಲಿಗೆ ಕೇಸರಿ ಮತ್ತು ಸೋಂಪನ್ನು ಮಿಶ್ರಣ ಮಾಡಿ ನೀಡಲಾಗುತ್ತದೆ ಈ ಮಿಶ್ರಣದ ಪರಿಮಳವು ಎಂಡಾರ್ಫಿನ್ ಎಂಬ ಸಂತೋಷದ ಹಾರ್ಮೋನನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ನೀವು ಸಂತೋಷ ಮತ್ತು ಶಾಂತತೆಯ ಭಾವನೆಯನು ಅನುಭವಿಸಬಹುದು.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ:

ಕೇಸರಿ ಮಿಶ್ರಿತ ಹಾಲು ಪ್ರಬಲವಾದ ಬ್ಯಾಕ್ಟೀರಿಯಾ ವಿರೋಧಿ ಮತ್ತು ರೋಗನಿರೋಧಕ ವರ್ಧಕ ಗುಣಗಳನ್ನು ಹೊಂದಿದೆ. ಹಾಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮೊದಲ ರಾತ್ರಿಯಲ್ಲಿ ಕೇಸರಿ ಮಿಶ್ರಿತ ಹಾಲನ್ನು ನೀಡಲಾಗುತ್ತದೆ.

ಈ ಆಚರರಣೆಯ ಮೂಲ:

ಪುರಾತನ ಗ್ರಂಥಗಳ ಪ್ರಕಾರ, ಕಾಮಸೂತ್ರದಲ್ಲಿ ಈ ಹಾಲಿನ ಮಿಶ್ರಣವನ್ನು ಕುಡಿಯುವ ಪರಿಕಲ್ಪನೆಯನ್ನು ಪರಿಚಯಿಸಲಾಯಿತು. ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಆ ಕಾರಣದಿಂದ ಮೊದಲ ರಾತ್ರಿಯಲ್ಲಿ ಒಂದು ಲೋಟ ಹಾಲನ್ನು ನವ ವಧುವರರಿಗೆ ಕೊಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:32 pm, Sat, 29 July 23

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!