AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಮಕ್ಕಳು ಹಿಂಜರಿಯುತ್ತಾರೆ ಏಕೆ?

ಸಾಕಷ್ಟು ಬಾರಿ ಮಕ್ಕಳು ಪೋಷಕರ ಬಳಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ ಏಕೆ ಎನ್ನುವ ಪ್ರಶ್ನೆ ಪೋಷಕರನ್ನು ಕಾಡದೇ ಇರುವುದಿಲ್ಲ.

ಪೋಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಮಕ್ಕಳು ಹಿಂಜರಿಯುತ್ತಾರೆ ಏಕೆ?
Parents
TV9 Web
| Updated By: ನಯನಾ ರಾಜೀವ್|

Updated on: Jul 25, 2022 | 11:29 AM

Share

ಸಾಕಷ್ಟು ಬಾರಿ ಮಕ್ಕಳು ಪೋಷಕರ ಬಳಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಾರೆ ಏಕೆ ಎನ್ನುವ ಪ್ರಶ್ನೆ ಪೋಷಕರನ್ನು ಕಾಡದೇ ಇರುವುದಿಲ್ಲ. ಪ್ರತಿಯೊಂದು ಸಂಬಂಧದಲ್ಲೂ ಸಂವಹನ ಎಂಬುದು ಪ್ರಮುಖ ಪಾತ್ರವಹಿಸುತ್ತದೆ. ನೀವು ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಹಂಚಿಕೊಳ್ಳದಿದ್ದರೆ ಬೇರೆಯವರಿಗೆ ಅರ್ಥವಾಗುವುದು ಹೇಗೆ?.

ಮಕ್ಕಳು ಪೋಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಳ್ಳದೆ ಇರಲು ಸಾಕಷ್ಟು ಕಾರಣಗಳಿರಬಹುದು. ಪೋಷಕರು ಅದಕ್ಕೆ ಹೇಗೆ ಪ್ರತಿಕ್ರಿಯಿಸಬಹುದು ಎನ್ನುವ ಭಯವೂ ಅವರನ್ನು ಕಾಡುತ್ತಿರಬಹುದು. ಪೋಷಕರು ಕೂಡ ತಮ್ಮ ಮಕ್ಕಳ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನವನ್ನು ಮಾಡಬೇಕು, ತಮ್ಮ ಭಾವನೆ ಆಸೆಗಳನ್ನು ಮಕ್ಕಳ ಮೇಲೆ ಹೊರಿಸಬಾರದು.

ಪೋಷಕರು ಈಗಾಗಲೇ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ: ಪೋಷಕರು ಈಗಾಗಲೇ ತಮ್ಮ ವೈಯಕ್ತಿಕ ವ್ಯವಹಾರಗಳಲ್ಲಿ ಹೆಚ್ಚಿನ ಹೊರೆ ಎದುರಿಸುತ್ತಿದ್ದಾರೆ, ಈಗ ನಾವು ನಮ್ಮ ಭಾವನೆಗಳನ್ನು ಹೇಳಿಕೊಳ್ಳುವುದರಿಂದ ಅವರ ಮನಸ್ಸಿಗೆ ನೋವುಂಟಾಗಬಹುದು ಎಂದು ಕೆಲ ಮಕ್ಕಳು ಅಂದುಕೊಳ್ಳುತ್ತಾರೆ.

ಪೋಷಕರೊಂದಿಗೆ ಮಾತನಾಡಲು ಸಮಯವೇ ಸಿಗುವುದಿಲ್ಲ: ಕೆಲವು ಪೋಷಕರು ಯಾವಾಗಲೂ ತಮ್ಮ ಮಕ್ಕಳಿಗಾಗಿ ದುಡಿಯುತ್ತಿರುತ್ತಾರೆ, ಆದರೆ ಮಕ್ಕಳೊಂದಿಗೆ ಕುಳಿತು ಮಾತನಾಡಲು ಸಮಯವಿರುವುದಿಲ್ಲ. ಪೋಷಕರೊಂದಿಗೆ ಮಾತನಾಡಲು ಇದು ಸೂಕ್ತ ಸಮಯ ಎಂದು ಮಕ್ಕಳು ಎಂದಿಗೂ ಯೋಚಿಸುವುದಿಲ್ಲ. ಇದು ಸಂವಹನದ ಅಂತರವನ್ನು ಮತ್ತಷ್ಟು ಸೃಷ್ಟಿಸುತ್ತದೆ.

ಮಗುವಿನ ಮಾತನ್ನು ಸಂಪೂರ್ಣವಾಗಿ ಕೇಳುವುದೇ ಇಲ್ಲ: ಕೆಲವು ಪೋಷಕರು ಮಕ್ಕಳು ಮಾತನಾಡುತ್ತಿರುವಾಗ ಸಂಪೂರ್ಣವಾಗಿ ಮಾತನ್ನು ಆಲಿಸಲು ಪ್ರಯತ್ನಿಸುವುದಿಲ್ಲ, ತಾವೇ ಮಧ್ಯೆ ಮಾತನಾಡಿ ಆ ಮಾತನ್ನು ಅಲ್ಲಿಯೇ ನಿಲ್ಲಿಸಿಬಿಡುತ್ತಾರೆ. ಮಕ್ಕಳ ಆಯ್ಕೆಯ ತಿರಸ್ಕಾರ: ಬಹಳಷ್ಟು ಪೋಷಕರು ಮಕ್ಕಳ ಆಯ್ಕೆಯನ್ನು ತಿರಸ್ಕರಿಸಿ ತಾವು ಅಂದುಕೊಂಡಂತೆಯೇ ನಡೆದುಕೊಳ್ಳಬೇಕು ಎಂದು ಬಯಸುತ್ತಾರೆ. ಇದು ಮಕ್ಕಳು ಪೋಷಕರ ಬಳಿ ಸಹಾಯ ಕೇಳಲು ಹಿಂಜರಿಯುವಂತೆ ಮಾಡುತ್ತದೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?