AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಜನರು ಜಿರಳೆಗಳನ್ನು ತಿನ್ನೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಸಾಮಾನ್ಯವಾಗಿ ನಾವೆಲ್ಲರೂ ಜಿರಳೆಗಳನ್ನು ಕಂಡರೆ ಮಾರು ದೂರ ಓಡಿ ಹೋಗ್ತೇವೆ, ಅವುಗಳನ್ನು ಕಂಡು ಅಹಸ್ಯಪಟ್ಟುಕೊಳ್ಳುತ್ತೇವೆ. ಆದರೆ ಚೀನಾದ ಜನ ಮಾತ್ರ ಕೊಳಕು ಮತ್ತು ರೋಗಗಳ ಸಂಕೇತವಾಗಿರುವ ಈ ಜಿರಳೆಗಳನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ, ಅದರಿಂದ ವಿವಿಧ ಭಕ್ಷ್ಯಗಳನ್ನು ತಯಾರಿಸಿ ಸವಿಯುತ್ತಾರೆ. ಅಷ್ಟಕ್ಕೂ ಚೀನಾದ ಜನ ಜಿರಳೆಗಳನ್ನು ತಿನ್ನುವುದೇಕೆ ಎಂಬುದನ್ನು ನೋಡೋಣ ಬನ್ನಿ.

ಚೀನಾದ ಜನರು ಜಿರಳೆಗಳನ್ನು ತಿನ್ನೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?
ಸಾಂದರ್ಭಿಕ ಚಿತ್ರImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 25, 2026 | 5:49 PM

Share

ಪ್ರತಿಯೊಂದು ದೇಶವೂ ತನ್ನದೇ ಆದ ಆಹಾರ ಪದ್ಧತಿಗಳನ್ನು ಪಳಗೊಂಡಿದೆ. ಆದರೆ ಚೀನಾ (China) ತನ್ನ ವಿಚಿತ್ರ ಆಹಾರ ಪದ್ಧತಿಯ ಕಾರಣದಿಂದಲೇ ವಿಶ್ವ ಪ್ರಸಿದ್ಧವಾಗಿದೆ. ಇಲ್ಲಿನ ಜನ ಹಾವಿನ ಸೂಪ್‌, ಬಾವಲಿ ಸೂಪ್, ನಾಯಿ ಮಾಂಸ, ಜೇಡ ಎಲ್ಲವನ್ನೂ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಅದೇ ರೀತಿ ಜಿರಳೆಗಳನ್ನು ಸಹ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಸಾಮಾನ್ಯವಾಗಿ ನಮ್ಮ ಮನೆಗಳಲ್ಲಿ ಜಿರಳೆಗಳನ್ನು ಕಂಡರೆ ಹೊಡೆದು ಸಾಯಿಸುತ್ತೇವೆ. ಚೀನಾದ ಜನ ಮಾತ್ರ ಇದೇ ಜಿರಳೆಯಿಂದ ವಿವಿಧ ಭಕ್ಷ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಅಷ್ಟಕ್ಕೂ ಚೀನಿಯರು ಜಿರಳೆಗಳನ್ನು ತಿನ್ನೋದೇಕೆ, ಈ ಕುರಿತ ಆಸಕ್ತಿದಾಯಕ ಮಾಹಿತಿಯಲ್ಲಿ ತಿಳಿಯಿರಿ.

ಚೀನಾದ ಜನ ಜಿರಳೆಗಳನ್ನು ಏಕೆ ತಿನ್ನುತ್ತಾರೆ?

ಚೀನಾದಲ್ಲಿ ಜಿರಳೆ ಇತ್ಯಾದಿ ಕೀಟಗಳನ್ನು ಪ್ರೋಟೀನ್‌, ಪೋಷಕಾಂಶಗಳ ಉತ್ತಮ ಮತ್ತು ಅಗ್ಗದ ಮೂಲವೆಂದು ಪರಿಗಣಿಸಲಾಗಿರುವುದರಿಂದ, ಅವುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸಲಾಗುತ್ತದೆ ಮತ್ತು ವಿವಿಧ ಭಕ್ಷ್ಯಗಳನ್ನು ತಯಾರಿಸಿ ತಿನ್ನಲಾಗುತ್ತದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್‌ನ ವರದಿಯ ಪ್ರಕಾರ, ಚೀನಾದ ಕ್ಸಿಚಾಂಗ್‌ನಲ್ಲಿರುವ ಒಂದು ಔಷಧ ಕಂಪನಿಯು ಒಂದು ದೊಡ್ಡ ಕಟ್ಟಡದಲ್ಲಿ ವಾರ್ಷಿಕವಾಗಿ ಸುಮಾರು 6 ಬಿಲಿಯನ್ ಜಿರಳೆಗಳನ್ನು ಸಾಕುತ್ತದೆ.  ವಿವಿಧ ಭಕ್ಷ್ಯಗಳು ಮಾತ್ರವಲ್ಲದೆ ಜಿರಳೆಗಳನ್ನು ಪುಡಿಮಾಡಿ ಅವುಗಳ ಸಿರಪ್ ಅನ್ನು ಸಹ ಚೀನಾದ ಜನ ಸೇವನೆ ಮಾಡುತ್ತಾರೆ. ಈ ಜಿರಳೆ ಸಿರಪ್‌ ಅನ್ನು ಸಾಂಪ್ರದಾಯಿಕ ಚೀನೀ ಔಷಧವಾಗಿ ಸೇವಿಸಲಾಗುತ್ತದೆ. ಅಲ್ಲಿ ಇದನ್ನು ಅತಿಸಾರ, ವಾಂತಿ, ಹೊಟ್ಟೆಯ ಹುಣ್ಣು, ಉಸಿರಾಟದ ತೊಂದರೆಗಳು ಮತ್ತು ಇತರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ.

ಒಟ್ಟಾರೆಯಾಗಿ ಜಿರಳೆಗಳು ಪ್ರೋಟೀನ್‌, ಕೊಬ್ಬು ಮತ್ತು ಕಬ್ಬಿಣ, ಸತು ಇತ್ಯಾದಿ ಖನಿಜಗಳಿಂದ ಸಮೃದ್ಧವಾಗಿದ್ದು, ಹಂದಿ, ಕೋಳಿ, ಇತ್ಯಾದಿ ಮಾಂಸಗಳಿಗೆ ಹೋಲಿಸಿದರೆ ಇವುಗಳನ್ನು ಬೆಳೆಸುವುದು ಕೂಡ ಅಗ್ಗ ಮತ್ತು ಸುಲಭವಾಗಿದೆ. ಹಾಗಾಗಿ ಜಿರಳೆಗಳನ್ನು ಪ್ರೋಟೀನ್‌, ಪೋಷಕಾಂಶಗಳ ಉತ್ತಮ ಮತ್ತು ಅಗ್ಗದ ಮೂಲವೆಂದು ಪರಿಗಣಿಸಲಾಗಿರುವುದರಿಂದ ಚೀನಾದ ಜನ ಜಿರಳೆಗಳನ್ನು ಹೆಚ್ಚಾಗಿ ಸೇವನೆ ಮಾಡುತ್ತದೆ.

ಇದನ್ನೂ ಓದಿ: ಇದು ಹಲಸಿನ ಬೀಜದ ಕಾಫಿ; ತಯಾರಿಸೋದು ಬಲು ಸುಲಭ

ಅಲ್ಲದೆ ಚೀನಾದ ಹಲವು ಪ್ರದೇಶಗಳಲ್ಲಿ ನಾಯಿ ಮತ್ತು ಹಾವಿನ ಮಾಂಸವನ್ನು ಸೇವಿಸಲಾಗುತ್ತದೆ, ಒಂದು ವರದಿಯ ಪ್ರಕಾರ, ಚೀನಾದಲ್ಲಿ ಪ್ರತಿ ವರ್ಷ 10,000 ಟನ್‌ಗಳಿಗಿಂತ ಹೆಚ್ಚು ಹಾವುಗಳನ್ನು ತಿನ್ನಲಾಗುತ್ತಿತ್ತು ಮತ್ತು ಅನೇಕ ಪ್ರದೇಶಗಳಲ್ಲಿ, ನಾಯಿಗಳನ್ನು ಬೇಯಿಸಿ ತಿನ್ನಲಾಗುತ್ತಿತ್ತು. ಆದರೆ 2020 ರಲ್ಲಿ COVID-19 ಮಹಾಮಾರಿ ಏಕಾಏಕಿ ಹರಡಿದ ನಂತರ, ಅನೇಕ ಪ್ರಮುಖ ನಗರಗಳಲ್ಲಿ ನಾಯಿ ಮತ್ತು ಬೆಕ್ಕಿನ ಮಾಂಸ ಸೇವನೆಯನ್ನು ನಿಷೇಧಿಸಲಾಯಿತು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ