AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣ ಹೊಂದಿದ ವ್ಯಕ್ತಿಯ ಮೂಗಿಗೆ ಹತ್ತಿಯನ್ನಿಡುವುದೇಕೆ? ಇದರ ಹಿಂದಿನ ವೈಜ್ಞಾನಿಕ ಕಾರಣವನ್ನು ತಿಳಿಯಿರಿ

ಹುಟ್ಟು ಸಹಜ, ಸಾವು ನಿಶ್ಚಿತ. ಹುಟ್ಟಿದ ಪ್ರತಿಯೊಬ್ಬರೂ ಸಾಯಲೇಬೇಕು. ಹೀಗೆ ಒಬ್ಬ ವ್ಯಕ್ತಿ ಮರಣ ಹೊಂದಿದಾಗ ಆತನ ಅಂತ್ಯಕ್ರಿಯೆಗೂ ಮುನ್ನ ಮೃತ ದೇಹದ ಕಿವಿ ಮತ್ತು ಮೂಗಿಗೆ ಹತ್ತಿಯನ್ನು ಇಡಲಾಗುತ್ತದೆ. ಅಷ್ಟಕ್ಕೂ ಮರಣ ಹೊಂದಿದ ವ್ಯಕ್ತಿಯ ಮೂಗಿಗೆ ಹತ್ತಿಯನ್ನು ಇಡುವುದೇಕೆ, ಅದರ ಹಿಂದಿನ ವೈಜ್ಞಾನಿಕ ಕಾರಣವೇನು ಎಂಬುದನ್ನು ತಿಳಿದುಕೊಳ್ಳಿ.

ಮರಣ ಹೊಂದಿದ ವ್ಯಕ್ತಿಯ ಮೂಗಿಗೆ ಹತ್ತಿಯನ್ನಿಡುವುದೇಕೆ? ಇದರ ಹಿಂದಿನ ವೈಜ್ಞಾನಿಕ ಕಾರಣವನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರImage Credit source: Pinterest
ಮಾಲಾಶ್ರೀ ಅಂಚನ್​
|

Updated on:Jun 22, 2026 | 9:11 PM

Share

ಹುಟ್ಟು-ಸಾವು ಜಗದ ನಿಯಮ. ಹುಟ್ಟಿದ ಪ್ರತಿಯೊಬ್ಬರೂ ಸಾಯಲೇಬೇಕು. ಹೀಗೆ ಸಾವು ಸಂಭವಿಸಿದಾಗ ಪ್ರತಿಯೊಂದು ಧರ್ಮದಲ್ಲೂ ವ್ಯಕ್ತಿಯ ಶವ ಸಂಸ್ಕಾರಕ್ಕೂ ಮುನ್ನ ಹಲವು ವಿಧಿ ವಿಧಾನ, ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಅದೇ ರೀತಿ ಅಂತ್ಯ ಸಂಸ್ಕಾರಕ್ಕೂ ಮುನ್ನ ಮರಣ ಹೊಂದಿದ ವ್ಯಕ್ತಿಯ ಕಿವಿ ಮತ್ತು ಮೂಗಿಗೆ ಹತ್ತಿಯನ್ನು (cotton) ಇಡಲಾಗುತ್ತದೆ. ಮೃತ ವ್ಯಕ್ತಿಗಳ ಅಂತಿಮ ದರ್ಶನದ ವೇಳೆ ನೀವು ಕೂಡ ಇದನ್ನು ಗಮನಿಸಿರಬಹುದಲ್ವಾ. ಅಷ್ಟಕ್ಕೂ ಅಂತ್ಯ ಸಂಸ್ಕಾರಕ್ಕೂ ಮುನ್ನ ಮೃತ ವ್ಯಕ್ತಿಯ ಮೂಗಿಗೆ ಹತ್ತಿಯನ್ನು ಏಕೆ ಇಡಲಾಗುತ್ತದೆ, ಅದರ ಹಿಂದಿನ ವೈಜ್ಞಾನಿಕ ಕಾರಣ ಏನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ.

ಮೃತ ವ್ಯಕ್ತಿಯ ಮೂಗಿಗೆ ಹತ್ತಿಯನ್ನು ಇಡುವುದೇಕೆ?

ನಮ್ಮಲ್ಲಿ ಹಲವರು ಇದನ್ನು ಕೇವಲ ಹಳೆಯ ಆಚರಣೆ ಅಥವಾ ಮೂಢನಂಬಿಕೆ ಎಂದು ಭಾವಿಸುತ್ತಾರೆ, ಆದರೆ ಇದರ ವೈಜ್ಞಾನಿಕ ಕಾರಣಗಳಿವೆ. ವಾಸ್ತವವಾಗಿ, ಸಾವಿನ ಕೆಲವು ಗಂಟೆಗಳಲ್ಲಿ ಮೃತ ದೇಹದಲ್ಲಿ ಅನೇಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಸಾವಿನ ನಂತರ, ಜೀರ್ಣಾಂಗ ವ್ಯವಸ್ಥೆಯ ಅವಶೇಷಗಳು ಮೀಥೇನ್ ಮತ್ತು ಹೈಡ್ರೋಜನ್ ಸಲ್ಫೈಡ್‌ನಂತಹ ವಿವಿಧ ಅನಿಲಗಳು ರೂಪುಗೊಳ್ಳಲು ಪ್ರಾರಂಭಿಸುತ್ತವೆ. ಈ ಅನಿಲಗಳ ಬಿಡುಗಡೆಯು ದೇಹಕ್ಕೆ ಮತ್ತು ಸುತ್ತಮುತ್ತಲಿನ ಪರಿಸರಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಅವುಗಳ ಬಿಡುಗಡೆಯನ್ನು ತಡೆಗಟ್ಟಲು ಕಿವಿ ಮತ್ತು ಮೂಗಿಗೆ ಹತ್ತಿಯನ್ನಿಡಲಾಗುತ್ತದೆ.

ಅಲ್ಲದೆ ಸಾವಿನ ನಂತರ, ದೇಹದೊಳಗೆ ದುರ್ವಾಸನೆಯ ದ್ರವಗಳು ರೂಪುಗೊಳ್ಳುತ್ತವೆ. ಈ ದುರ್ವಾಸನೆಯ ದ್ರವವು ಮೂಗು ಅಥವಾ ಬಾಯಿಯ ಮೂಲಕ ಹೊರಬರಬಹುದು, ಇದರಿಂದಾಗಿ ಬ್ಯಾಕ್ಟೀರಿಯಾಗಳು ಬೇಗನೆ ಹರಡುತ್ತವೆ ಮತ್ತು ದೇಹವು ಊದಿಕೊಳ್ಳಲು ಪ್ರಾರಂಭಿಸುತ್ತದೆ. ಹಾಗಾಗಿ ಮೃತ ದೇಹದಿಂದ ಅನಿಲಗಳು ಮತ್ತು ದುರ್ವಾಸನೆಯ ದ್ರವಗಳು ಹೊರಹೋಗುವುದನ್ನು ತಡೆಯಲು ಕಿವಿ ಮತ್ತು ಮೂಗಿಗೆ ಹತ್ತಿ ಇಡಲಾಗುತ್ತದೆ.

ಇದನ್ನೂ ಓದಿ: ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ? ಅದರ ಪ್ರಯೋಜನಗಳೇನು?

ಇದರೊಂದಿಗೆ, ಒಬ್ಬ ವ್ಯಕ್ತಿಯು ಸತ್ತ ನಂತರ, ಉಸಿರಾಟವು ನಿಲ್ಲುತ್ತದೆ, ಅಂತಹ ಪರಿಸ್ಥಿತಿಯಲ್ಲಿ ಗಾಳಿಯು ಮೂಗು ಮತ್ತು ಕಿವಿಗಳ ಮೂಲಕ ದೇಹವನ್ನು ಸುಲಭವಾಗಿ ಪ್ರವೇಶಿಸಬಹುದು, ಇದರಿಂದಾಗಿ ದೇಹವು ಊದಿಕೊಳ್ಳಬಹುದು. ಈ ಕಾರಣಕ್ಕಾಗಿಯೂ ಮೂಗಿಗೆ ಹತ್ತಿ ಇಡಲಾಗುತ್ತದೆ. ಒಟ್ಟಾರೆಯಾಗಿ ಮೃತ ವ್ಯಕ್ತಿಯ ಮೂಗು ಮತ್ತು ಕಿವಿಗೆ ಹತ್ತಿ ಇಟ್ಟುಕೊಳ್ಳುವುದರಿಂದ ಕೆಟ್ಟ ವಾಸನೆ ಹರಡುವುದನ್ನು ತಡೆಯಬಹುದು ಮತ್ತು ಶವದ ಮೇಲೆ ನೊಣಗಳು, ಕೀಟಗಳು ಮುತ್ತಿಕೊಳ್ಳುವುದನ್ನು, ಮೃತ ದೇಹವನ್ನು ಸೂಕ್ಷ್ಮಜೀವಿಗಳು ಪ್ರವೇಶಿಸುವುದನ್ನು ತಡೆಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Mon, 22 June 26

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!