AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Tiger Day 2023: ಅಂತರಾಷ್ಟ್ರೀಯ ಹುಲಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ಜಗತ್ತಿನಲ್ಲಿ ಅತೀ ವೇಗವಾಗಿ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯ ರಕ್ಷಣೆಗಾಗಿ ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆ ಪ್ರಾರಂಭವಾಯಿತು ಎಂಬ ಕುರಿತ ಮಾಹಿತಿಯನ್ನು ತಿಳಿಯಿರಿ.

International Tiger Day 2023: ಅಂತರಾಷ್ಟ್ರೀಯ ಹುಲಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2023 | 5:36 AM

Share

ದಿನದಿಂದ ದಿನಕ್ಕೆ ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಕ್ರಮ ಬೇಟೆ, ಹವಾಮಾನ ಬದಲಾವಣೆ ಮತ್ತು ಕಾಡುಗಳ ನಾಶ ಮುಂತಾದ ಕಾರಣಗಳಿಂದ ಹುಲಿಗಳ ಸಂತತಿ ನಶಿಸಿಹೋಗುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, 20 ನೇ ಶತಮಾನದ ಆರಂಭದ ವೇಳೆಯಲ್ಲಿ ಶೇಕಡಾ 95% ರಷ್ಟು ಹುಲಿಗಳ ಸಂಖ್ಯೆಯು ನಾಶವಾಗಿದೆ. ಕೇವಲ 5% ಶೇಕಡದಷ್ಟು, ಅಂದರೆ ಕೇವಲ 3900 ಹುಲಿಗಳು ಮಾತ್ರ ಕಾಡುಗಳಲ್ಲಿವೆ. ಇಂತಹ ಪರಿಸ್ಥಿತಿಯಲ್ಲಿ ಹುಲಿಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಇದು ಹುಲಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ನಿರಂತರವಾಗಿ ಕಡಿಮೆಯಾಗುತ್ತಿರುವ ಹುಲಿಗಳ ಸಂತತಿಯನ್ನು ಉಳಿಸುವ ಗುರಿಯನ್ನು ಹೊಂದಿದೆ.

ಅಂತರಾಷ್ಟ್ರೀಯ ಹುಲಿ ದಿನದ ಇತಿಹಾಸ:

2010ರಲ್ಲಿ ಹುಲಿಗಳ ಸಂಖ್ಯೆ ಕ್ಷಿಪ್ರವಾಗಿ ಕಡಿಮೆಯಾಗುತ್ತಿರುವ ಕುರಿತು ವರದಿಯೊಂದು ಹೊರಬಿದ್ದಿತ್ತು. ಕಳೆದ ಶತಮಾನಕ್ಕೆ ಹೋಲಿಸಿದರೆ ಹುಲಿಗಳ ಸಂಖ್ಯೆಯಲ್ಲಿ ಶೇಕಡಾ 97% ರಷ್ಟು ಇಳಿಕೆಯಾಗಿವೆ ಎಂದು ಅದರಲ್ಲಿ ಉಲ್ಲೇಖಿಸಲಾಗಿತ್ತು. ಅಂದರೆ 2010 ರ ವೇಳೆಗೆ ಪ್ರಪಂಚದಾದ್ಯಂತ ಕೇವಲ 3,000 ಹುಲಿಗಳು ಮಾತ್ರ ಇದ್ದವು. ಈ ನಿಟ್ಟಿನಲ್ಲಿ ವೇಗವಾಗಿ ಅವನತಿಯತ್ತ ಸಾಗುತ್ತಿರುವ ಹುಲಿಗಳ ಸಂತತಿಯನ್ನು ಸಂರಕ್ಷಿಸಲು ಅಭಿಯಾನವನ್ನು ಪ್ರಾರಂಭಿಸಲಾಯಿತು. 2010 ರಲ್ಲಿ ರಷ್ಯಾದ ಸೇಂಟ್ ಪೀಟ್ಸ್ ಬರ್ಗ್ ನಲ್ಲಿ ಹುಲಿಗಳ ರಕ್ಷಣೆಗಾಗಿ ಸಮಾವೇಶವನ್ನು ನಡೆಸಲಾಯಿತು. ಮತ್ತು ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ನಿಯಂತ್ರಿಸಲು ಪ್ರತಿವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿಗಳ ದಿನವನ್ನು ಆಚರಿಸಲು ನಿರ್ಧರಿಸಲಾಯಿತು.

ಇದನ್ನೂ ಓದಿ:ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಇತಿಹಾಸ, ಮಹತ್ವ ಇಲ್ಲಿದೆ

ಅಂತರಾಷ್ಟ್ರೀಯ ಹುಲಿ ದಿನಾಚರಣೆಯ ಮಹತ್ವ:

ಕಳೆದ ಶತಮಾನದಲ್ಲಿ ಶೇಕಡಾ 97% ರಷ್ಟು ಹುಲಿಗಳು ಕಣ್ಮರೆಯಾಗಿ ಕೇವಲ 3,000 ಹುಲಿಗಳು ಮಾತ್ರ ಉಳಿದಿವೆ ಎಂದು ಕಂಡುಹಿಡಿದ ನಂತರ 2010 ರಲ್ಲಿ ಹುಲಿಗಳ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಹುಲಿ ದಿನವನ್ನು ಪರಿಚಯಿಸಲಾಯಿತು. ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವು ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂರಕ್ಷಣೆಗಾಗಿ ಜಾಗೃತಿ ಕಾರ್ಯಗಳನ್ನು ರೂಪಿಸುವುದು ಮತ್ತು ಹುಲಿಗಳ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಉಳಿಸುವುದು. ಈ ದಿನದ ಉದ್ದೇಶ ಹುಲಿಗಳ ಸಂತತಿಯನ್ನು ರಕ್ಷಿಸುವುದು ಮಾತ್ರವಲ್ಲದೆ, ಅವುಗಳ ಆವಾಸಸ್ಥಾನವಾದ ಕಾಡಿನ ಸಂರಕ್ಷಣೆಯನ್ನು ಕೂಡಾ ಮಾಡುವುದಾಗಿದೆ. ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್, ಇಂಟರ್ ನ್ಯಾಷನಲ್ ಫಂಡ್ ಫಾರ್ ಅನಿಮಲ್ ವೆಲ್ಫೇರ್ ಸೇರಿದಂತೆ ಅನೇಕ ಅಂತರಾಷ್ಟ್ರೀಯ ಸಂಸ್ಥೆಗಳು ವಿಶ್ವ ಹುಲಿ ದಿನವನ್ನು ಆಚರಿಸುತ್ತದೆ. ವರ್ಲ್ಡ್ ಫಂಡ್ ಫಾರ್ ನೇಚರ್ ಪ್ರಕಾರ ಹುಲಿಗಳ ಪ್ರಸ್ತುತ ಸಂಖ್ಯೆಯು 3,900 ರಷ್ಟಿದೆ. ವಿಶ್ವದಲ್ಲಿಯೇ ಸುಮಾರು 70% ಶೇಕಡದಷ್ಟು ಹುಲಿಗಳು ಭಾರತದಲ್ಲಿ ನೆಲೆಯಾಗಿವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!