AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Handloom Day 2023: ರಾಷ್ಟ್ರೀಯ ಕೈಮಗ್ಗ ದಿನವನ್ನು ಏಕೆ ಆಚರಿಸಲಾಗುತ್ತದೆ? ಕೈ ಮಗ್ಗದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳಾವುವು?

ಕೈಮಗ್ಗ ಉದ್ಯಮವು ನಮ್ಮ ದೇಶದ ಪರಂಪರೆಯಾಗಿದೆ. ಭಾರತದ ಈ ಶ್ರೀಮಂತ ಪರಂಪರೆಯನ್ನು ಉಳಿಸಲು ಮತ್ತು ಕೈಮಗ್ಗದ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸಲು ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಹಾಗೂ ಅದರ ಇತಿಹಾಸ ಏನು ಎಂಬುದರ ಮಾಹಿತಿ ಇಲ್ಲಿದೆ.

National Handloom Day 2023: ರಾಷ್ಟ್ರೀಯ ಕೈಮಗ್ಗ ದಿನವನ್ನು ಏಕೆ ಆಚರಿಸಲಾಗುತ್ತದೆ? ಕೈ ಮಗ್ಗದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳಾವುವು?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 05, 2023 | 7:01 PM

Share

ನಮ್ಮ ದೇಶದಲ್ಲಿ ಕೈಮಗ್ಗದ ಇತಿಹಾಸವು ಶತಮಾನಗಳಿಗೂ ಹಿಂದಿನದು. ಕೈಮಗ್ಗ ಉದ್ಯಮವು ಭಾರತದ ಸಾಂಸ್ಕೃತಿಕ ಪರಂಪರೆಯ ಪ್ರಮುಖ ಭಾಗವಾಗಿದೆ. ಕೈಮಗ್ಗ ಎಂದಾಗ ಮೊದಲಿಗೆ ನೆನಪಿಗೆ ಬರುವಂತಹದ್ದೇ ಕೈಮಗ್ಗದ ಸೀರೆಗಳು. ಆಂಧ್ರಪ್ರದೇಶದ ಕಲಮಕಾರಿ, ಕರ್ನಾಟಕದ ಮೈಸೂರು ರೇಶ್ಮೆ ಸೀರೆ, ಗುಜರಾತ್​ನ ಬಂಧನಿ, ತಮಿಳುನಾಡಿನ ಕಾಂಜೀವರಂ, ಮಹರಾಷ್ಟ್ರದ ಪೈಥಾನಿ, ಮಧ್ಯಪ್ರೇಶದ ಚಮದೇರಿ, ಬಿಹಾರದ ಭಾಗಲ್ಪುರಿ ರೇಷ್ಮೆ ಇಂತಹ ಕೆಲವು ಕೈಮಗ್ಗದ ಉತ್ಪನ್ನಗಳು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಕೈಮಗ್ಗ ಉದ್ಯಮವು ಹೆಚ್ಚಿನ ಸಂಖ್ಯೆಯ ಜನರಿಗೆ ಉದ್ಯೋಗನ್ನು ಒದಗಿಸಿಕೊಡುತ್ತದೆ. ಅಲ್ಲದೆ ಇದು ಮಹಿಳಾ ಸಬಲೀಕರಣವನ್ನು ಬಿಂಬಿಸುವ ಕ್ಷೇತ್ರವಾಗಿದೆ. ಇಂತಹ ಅದ್ಭುತ ಇತಿಹಾಸವಿರುವ ಕೈಮಗ್ಗ ಕ್ಷೇತ್ರವು ಇಂದು ತಂತ್ರಜ್ಞಾನದ ಕಾರಣದಿಂದ ಹಾಗೂ ಪಾಶ್ಚಿಮಾತ್ಯ ಉಡುಗೆಗಳ ಪ್ರಭಾವದ ಕಾರಣದಿಂದ ಕುಂಠಿತಗೊಳ್ಳುತ್ತಿದೆ. ಹಾಗಾಗಿ ದೇಶದಲ್ಲಿ ಕೈಮಗ್ಗ ಉದ್ಯಮವನ್ನು ಬಲಪಡಿಸಲು ಮತ್ತು ಕೈಮಗ್ಗದ ಉತ್ಪನ್ನಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಕೈಮಗ್ಗ ದಿನದ ಆಚರಣೆಯ ಹಿಂದಿನ ಇತಿಹಾಸ:

1905, ಆಗಸ್ಟ್ 7 ರಂದು ನಡೆದ ಸ್ವದೇಶಿ ಚಳುವಳಿಯು ಭಾರತದ ಸ್ವಾತಂತ್ರ್ಯ ಹೋರಾಟದ ಅನೇಕ ಚಳುವಳಿಗಳಲ್ಲಿ ಒಂದಾಗಿದೆ. ಕಲ್ಕತ್ತಾ ಟೌನ್ ಹಾಲ್​​​ನಲ್ಲಿ ಪ್ರಾರಂಭವಾದ ಈ ಚಳುವಳಿಯು ಬಂಗಾಳವನ್ನು ವಿಭಜಿಸುವ ಬ್ರಿಟೀಷ್ ಸರ್ಕಾರದ ನಿರ್ಧಾರದ ವಿರುದ್ಧದ ಪ್ರತಿಭಟನೆಯಾಗಿತ್ತು. ಅಲ್ಲದೆ ಮುಖ್ಯವಾಗಿ ಬ್ರಿಟೀಷರ ಹಾಗೂ ವಿದೇಶಿ ಉತ್ಪನ್ನಗಳನ್ನು ನಿಷೇಧಿಸಿ ಸ್ಥಳೀಯ ಕೈಗಾರಿಕೆಗಳನ್ನು ಉತ್ತೇಜಿಸಲು ಮತ್ತು ಜನರಲ್ಲಿ ಸ್ವದೇಶಿ ಉತ್ಪನ್ನಗಳ ಭಾವನೆಗಳನ್ನು ಜಾಗೃತಗೊಳಿಸಲು ಈ ಚಳುವಳಿಯನ್ನು ಪ್ರಾರಂಭಿಸಲಾಯಿತು. ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯ ಕೈಮಗ್ಗ ನೇಕಾರರು ಪ್ರಮುಖ ಪಾತ್ರ ವಹಿಸಿದ್ದರು. ಈ ಒಂದು ಸ್ವದೇಶಿ ಆಂದೋಲನದ ಗೌರವಾರ್ಥವಾಗಿ ಮೊದಲ ಬಾರಿಗೆ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಗಸ್ಟ್ 7, 2015 ರಂದು ಆಚರಿಸಲಾಯಿತು. ನಂತರದಲ್ಲಿ ಪ್ರತಿವರ್ಷ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಕೈ ಮಗ್ಗ ದಿನವನ್ನು ಆಚರಿಸುವ ಉದ್ದೇಶ:

ಕೈಮಗ್ಗ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಉತ್ತೇಜಿಸುವುದು. ಹಾಗೂ ನೇಕಾರರ ಸಮುದಾಯವನ್ನು ಗೌರವಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಗುರುತಿಲು ಕೈಮಗ್ಗದ ದಿನವನ್ನು ಆಚರಿಸಲಾಗುತ್ತದೆ.

ಕೈ ಮಗ್ಗದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳು:

ಸಮಗ್ರ ಕೈಮಗ್ಗ ಕ್ಲಸ್ಟರ್ ಅಭಿವೃದ್ಧಿ ಯೋಜನೆ (CHCDS)

ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ (NHDP)

ಕೈಮಗ್ಗ ನೇಕಾರರ ಸಮಗ್ರ ಕಲ್ಯಾಣ ಯೋಜನೆ (HWCWS)

ನೂಲು ಸರಬರಾಜು ಯೋಜನೆ (YSS)

ಇದನ್ನೂ ಓದಿ: ಆ.7ರಂದು 8ನೇ ರಾಷ್ಟ್ರೀಯ ಕೈಮಗ್ಗ ದಿನದ ಆಚರಣೆ: ಸಚಿವ ದರ್ಶನಾ ಜರ್ದೋಶ್

ಕೈ ಮಗ್ಗ ಉದ್ಯಮ ಬಹಳ ಹಳೆಯದು:

ಭಾರತದಲ್ಲಿ ಕೈಮಗ್ಗ ಉದ್ಯಮದ ಇತಿಹಾಸವು ಬಹಳ ಹಳೆಯದು. ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಈ ಉದ್ಯಮವು ನೇಕಾರರಿಗೆ ಜೀವನೋಪಾಯವನ್ನು ಒದಗಿಸುತ್ತಿದೆ. ಕೈಮಗ್ಗದ ಉತ್ಪನ್ನಗಳು ದೊಡ್ಡ ಪ್ರಮಾಣದಲ್ಲಿ ವಿದೇಶಗಳಿಗೂ ರಫ್ತಾಗುತ್ತವೆ. ಈ ಉದ್ಯಮದಿಂದ ಲಕ್ಷಾಂತರ ಜನರು ತಮ್ಮ ಜೀವನೋಪಾಯವನ್ನು ಕಂಡುಕೊಂಡಿದ್ದಾರೆ. ಜೊತೆಗೆ ಪ್ರಸ್ತುತ ದಿನಗಳಲ್ಲಿ ತಂತ್ರಜ್ಞಾನದ ಕ್ಷಿಪ್ರ ಬೆಳವಣಿಗೆಯಿಂದ ಕೈಮಗ್ಗದ ಉತ್ಪನ್ನಗಳು ಕಡಿಮೆಯಾಗುತ್ತಿವೆ. ಹಾಗಾಗಿ ರಾಷ್ಟ್ರೀ ಯ ಕೈಮಗ್ಗ ದಿನದ ಮೂಲಕ ಕೈಮಗ್ಗದಿಂದ ತಯಾರಿಸಿದ ಉತ್ಪನ್ನಗಳ ಪ್ರಾಮುಖ್ಯತೆಯ ಬಗ್ಗೆ ದೇಶದ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಇದರಿಂದ ಗರಿಷ್ಟ ಮಟ್ಟದಲ್ಲಿ ಕೈಮಗ್ಗದಿಂದ ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ನೇಕಾರರ ಉದ್ಯೋಗಕ್ಕೂ ಸಹಾಯವಾಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಮತ್ತಷ್ಟು ಲೇಖನಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?