AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Breastfeeding Week 2023: ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಏಕೆ ಆಚರಿಸಲಾಗುತ್ತದೆ? ಇದರ ಮಹತ್ವವೇನು?

ಸ್ತನ್ಯಪಾನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಮತ್ತು ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸುವ ಉದ್ದೇಶದಿಂದ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಪ್ರತಿ ವರ್ಷ ಆಗಸ್ಟ್ 1 ರಿಂದ ಅಂದರೆ ಇಂದಿನಿಂದ ಆಗಸ್ಟ್ 7ರ ವರೆಗೆ ಆಚರಿಸಲಾಗುತ್ತದೆ. ಈ ಸ್ತನ್ಯಪಾನ ವಾರ ಹೇಗೆ ಪ್ರಾರಂಭವಾಯಿತು, ಈ ಸಪ್ತಾಹದ ಮಹತ್ವವೇನು ಎಂಬುದನ್ನು ತಿಳಿಯೋಣ.

World Breastfeeding Week 2023: ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಏಕೆ ಆಚರಿಸಲಾಗುತ್ತದೆ? ಇದರ ಮಹತ್ವವೇನು?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 01, 2023 | 6:21 PM

Share

ನವಜಾತ ಶಿಶುವಿನ ಬೆಳವಣಿಗೆಯ ಪ್ರಯಾಣದಲ್ಲಿ ಸ್ತನ್ಯಪಾನವು ಅತ್ಯಂತ ಅವಶ್ಯಕ ಭಾಗವಾಗಿದೆ. ಮಗು ತನ್ನ ತಾಯಿಯ ಎದೆಹಾಲಿನ ಸೇವನೆಯಿಂದ ರೋಗಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಪಡೆಯುತ್ತದೆ, ಜೊತೆಗೆ ಸ್ತನ್ಯಪಾನದಿಂದ ಹಲವಾರು ಆರೋಗ್ಯ ಪ್ರಯೋಜನಗಳು ತಾಯಿ ಮತ್ತು ಮಗು ಇಬ್ಬರಿಗೂ ಲಭಿಸುತ್ತದೆ. ಆದ್ದರಿಂದಲೇ ತಾಯಿ ಎದೆಹಾಲು ಅಮೃತವಿದ್ದಂತೆ ಎಂದು ಹೇಳಲಾಗುತ್ತದೆ. ತಾಯಿಯ ಎದೆಹಾಲಿಗೆ ಸಂಬಂಧಿಸಿದ ಈ ವಿಶೇಷತೆಗಳನ್ನು ಜಗತ್ತಿಗೆ ತಿಳಿಸಲು ಮತ್ತು ಈ ವಿಷಯದ ಬಗ್ಗೆ ಜಾಗೃತಿ ಮೂಡಿಸಲು ಆಗಸ್ಟ್ ಮೊದಲ ವಾರವನ್ನು ವಿಶ್ವಸ್ತನ್ಯಪಾನ ಸಪ್ತಾಹವನ್ನಾಗಿ ಆಚರಿಸಲಾಗುತ್ತದೆ. ಆಗಸ್ಟ್ 1 ರಿಂದ ಅಂದರೆ ಇಂದಿನಿಂದ ಆಗಸ್ಟ್ 7ರ ವರೆಗೆ ನಡೆಯುವ ಈ ಸಪ್ತಾಹದಲ್ಲಿ ತಾಯಿಯ ಎದೆಹಾಲಿನ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಮತ್ತು ಮಗುವಿನ ಆರೋಗ್ಯಕ್ಕೆ ತಾಯಿಯ ಹಾಲು ಎಷ್ಟೊಂದು ಪ್ರಾಮುಖ್ಯ ಎಂಬುದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ವಿಶೇಷ ಸಪ್ತಾಹಕ್ಕೆ ಸಂಬಂಧಿಸಿದ ವಿಶೇಷ ವಿಷಯಗಳನ್ನು ತಿಳಿದುಕೊಳ್ಳೋಣ

ವಿಶ್ವ ಸ್ತನ್ಯಪಾನ ಸಪ್ತಾಹ ಹೇಗೆ ಪ್ರಾರಂಭವಾಯಿತು?

ಸ್ತನ್ಯಪಾನದ ಪ್ರಯೋಜನಗಳು ಮತ್ತು ಮಗುವಿಗೆ ಹಾಲುಣಿಸಲು ತಾಯಂದಿರನ್ನು ಪ್ರೇರೇಪಿಸುವ ಸಲುವಾಗಿ 1991ರಲ್ಲಿ ವರ್ಲ್ಡ್ ಅಲೈಯನ್ಸ್ ಫಾರ್ ಬ್ರೆಸ್ಟ್ ಫೀಡಿಂಗ್ ಆಕ್ಷನ್ (WABA) ಅನ್ನು ರಚಿಸಲಾಯಿತು. ಆರಂಭದಲ್ಲಿ ವರ್ಷಕ್ಕೆ ಒಂದು ದಿನ ಸ್ತನ್ಯಪಾನ ದಿನವನ್ನು ಆಚರಿಸಲು ನಿರ್ಧರಿಸಲಾಗಿತ್ತು. ಆದರೆ ಈ ವಿಷಯವು ಸಾಮಾನ್ಯ ಜೀವನ ಮತ್ತು ಮಕ್ಕಳ ಆರೋಗ್ಯದಂತಹ ಸಮಸ್ಯೆಗಳಿಗೆ ಸಂಬಂಧಿಸಿರುವುದರಿಂದ ಅದರ ಉಪಯುಕ್ತತೆ ಮತ್ತು ಅಗತ್ಯವನ್ನು ಪರಿಗಣಿಸಿ, ಒಂದು ವಾರಗಳ ಕಾಲ ಈ ಜಾಗೃತಿ ಕಾರ್ಯವನ್ನು ಆಚರಿಸಲು ನಿರ್ಧರಿಸಲಾಯಿತು. ಇದಕ್ಕೆ ವಿಶ್ವ ಸ್ತನ್ಯಪಾನ ಸಪ್ತಾಹ (World Breastfeeding Week) ಎಂದು ಹೆಸರಿಡಲಾಯಿತು. ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಮೊದಲ ಬಾರಿಗೆ 1992ರಲ್ಲಿ ಆಯೋಜಿಸಲಾಯಿತು. ಶಿಶುಗಳಿಗೆ ಹಾಲುಣಿಸಲು ತಾಯಂದಿರನ್ನು ಉತ್ತೇಜಿಸುವುದು ಮತ್ತು ಪ್ರಪಂಚದಾದ್ಯಂತ ಮಕ್ಕಳ ಆರೋಗ್ಯವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇಂದು ನೂರಕ್ಕೂ ಹೆಚ್ಚು ದೇಶಗಳು ಈ ಸಾಪ್ತಾಹಿಕ ಜಾಗೃತಿ ಕಾರ್ಯವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಪ್ರಸವಾನಂತರದ ಖಿನ್ನತೆ ಸ್ಯನ್ಯಪಾನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ?

ವಿಶ್ವ ಸ್ತನ್ಯಪಾನ ಸಪ್ತಾಹದ ಮಹತ್ವ:

ವಿಶ್ವ ಸ್ತನ್ಯಪಾನ ಸಪ್ತಾಹವು ಸ್ತನ್ಯಪಾನದ ಪ್ರಾಮುಖ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಪ್ರಪಂಚದಾದ್ಯಂತ ಮಹಿಳೆಯರಿಗೆ ತಮ್ಮ ಶಿಶುಗಳಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಪ್ರೋತ್ಸಾಹಿಸುತ್ತದೆ. ನವಜಾತ ಶಿಶುಗಳಿಗೆ ಮತ್ತು ಮಕ್ಕಳ ತಾಯಂದಿರಿಗೆ ಸ್ತನ್ಯಪಾನ ಏಕೆ ಅಗತ್ಯ ಎಂಬುದನ್ನು ತಿಳಿಸುವುದು ಈ ಸಪ್ತಾಹವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಪ್ರತಿ ಮೂರು ಮಕ್ಕಳಲ್ಲಿ ಇಬ್ಬರು ಮಕ್ಕಳು ಎದೆಹಾಲು ಕುಡಿಯುತ್ತಿಲ್ಲ. ಹೀಗಾಗಿ ಈ ಜಾಗೃತಿ ಕಾರ್ಯವನ್ನು ಆಚರಿಸುವುದು ಹೆಚ್ಚು ಮಹತ್ವದ್ದಾಗಿದೆ.

ಸ್ತನ್ಯಪಾನದ ಪ್ರಾಮುಖ್ಯತೆ:

ತಾಯಿಯ ಹಾಲು ಶಿಶುಗಳಿಗೆ ಅಮೃತವಿದ್ದಂತೆ. ಇದು ಬಾಲ್ಯದಲ್ಲಿ ಬರುವ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ. ಇದು ಮಗುವಿಗೆ ಹುಟ್ಟಿದ ಮೊದಲ ಕೆಲವು ತಿಂಗಳುಗಳಿಗೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಎದೆಹಾಲು ಕುಡಿಯುವ ಮಕ್ಕಳು ಆರೊಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಕಡಿಮೆ. ಹಾಗೂ ವೈದ್ಯರ ಪ್ರಕಾರ ಸ್ತನ್ಯಪಾನ ಮಾಡುವ ಮಹಿಳೆಯರು ಸ್ತನ ಮತ್ತು ಅಂಡಾಶಯದ ಕ್ಯಾನ್ಸರ್ ಗಳ ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಕಡಿಮೆ. ಹೀಗೆ ಸ್ತನ್ಯಪಾನದಿಂದ ತಾಯಿ ಮತ್ತು ಮಗುವಿಗೆ ಹಲವಾರು ಆರೋಗ್ಯ ಪ್ರಯೋಜನಗಳು ದೊರೆಯುತ್ತದೆ. ಈ ಎಲ್ಲದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ