AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Coconut Day 2023: ವಿಶ್ವ ತೆಂಗು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ವಿಶೇಷ ಆಚರಣೆಯ ಮಾಹಿತಿ ಇಲ್ಲಿದೆ

ತೆಂಗು ಒಂದು ಬಹುಪಯೋಗಿ ವೃಕ್ಷವಾಗಿದ್ದು, ಈ ವೃಕ್ಷದ ಪ್ರತಿಯೊಂದು ಭಾಗವೂ ನಮಗೆ ಉಪಯೋಗಗಕ್ಕೆ ಬರುತ್ತದೆ ಅದಕ್ಕಾಗಿಯೇ ತೆಂಗನ್ನು ಕಲ್ಪವೃಕ್ಷವೆಂದು ಕರೆಯಲಾಗುತ್ತದೆ. ತೆಂಗಿನಕಾಯಿಯ ಪ್ರಾಮುಖ್ಯತೆ ಮತ್ತು ತೆಂಗು ಕೃಷಿಯ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಲುವ ಸಲುವಾಗಿ ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ.

World Coconut Day 2023: ವಿಶ್ವ ತೆಂಗು ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ವಿಶೇಷ ಆಚರಣೆಯ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 01, 2023 | 4:46 PM

Share

ತೆಂಗು ಒಂದು ಬಹುಪಯೋಗಿ ವೃಕ್ಷವಾಗಿದ್ದು, ಈ ವೃಕ್ಷದ ಪ್ರತಿಯೊಂದು ಭಾಗವೂ ನಮಗೆ ಉಪಯೋಗಕ್ಕೆ ಬರುತ್ತದೆ. ತೆಂಗಿನ ಮರದ ನಾರಿನಿಂದ ಹಗ್ಗ ತಯಾರಿಸಲಾಗುತ್ತದೆ. ಅವುಗಳ ಗರಿಗಳಿಂದ ಪೊರಕೆ ಮತ್ತು ಶುಭ ಸಮಾರಂಭದಲ್ಲಿ ಚಪ್ಪರ ತಯಾರಿಸಲಾಗುತ್ತದೆ. ಕೊಬ್ಬರಿಯಿಂದ ಎಣ್ಣೆಯನ್ನು ತೆಗೆಯಲಾಗುತ್ತದೆ. ಇಷ್ಟು ಮಾತ್ರವಲ್ಲದೆ ತೆಂಗನ್ನು ದೇವರ ಪೂಜೆಯಿಂದ ಹಿಡಿದು, ಅಡುಗೆ, ಔಷಧಿ ಮತ್ತು ಸೌಂದರ್ಯ ವರ್ಧಕಗಳಲ್ಲಿಯೂ ಬಳಸಲಾಗುತ್ತದೆ.ಅದಕ್ಕಾಗಿಯೇ ತೆಂಗನ್ನು ಕಲಿಯುವ ಕಲ್ಪವೃಕ್ಷ ಎಂದು ಕರೆಯಲಾಗುತ್ತದೆ. ತೆಂಗು ಕೃಷಿಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಜನರಲ್ಲಿ ಅರಿವು ಮೂಡಿಸುವು ಹಾಗೂ ತೆಂಗು ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 2ನೇ ತಾರಿಕಿನಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯನ್ನು ಯಾವಾಗ ಪ್ರಾರಂಭಿಸಲಾಯಿತು, ಅದರ ಹಿನ್ನೆಲೆ ಏನೆಂಬುವುದನನು ನೋಡೋಣ.

ವಿಶ್ವ ತೆಂಗು ದಿನದ ಇತಿಹಾಸ:

ವಿಶ್ವ ತೆಂಗು ದಿನವನ್ನು ಮೊದಲ ಬಾರಿಗೆ ಸೆಪ್ಟೆಂಬರ್ 2, 2009 ರಲ್ಲಿ ಆಚರಿಸಲಾಯಿತು. ಏಷ್ಯನ್ ಪೆಸಿಫಿಕ್ ತೆಂಗು ಸಮುದಾಯದ (APCC) ವತಿಯಿಂದ ಈ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು. ಇದನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಜಾಗತಿಕವಾಗಿ ತೆಂಗು ಕೃಷಿಯ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಮತ್ತು ತೆಂಗು ಕೃಷ್ಟಿಗೆ ಉತ್ತೇಜನ ನೀಡುವುದಾಗಿದೆ.

ಯುನೈಟೆಡ್ ನೇಷನ್ಸ್ ಎಕನಾಮಿಕ್ ಆಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಆಂಡ್ ಪೆಸಿಫಿಕ್ (UN-ESCAP) ಆಶ್ರಯದಲ್ಲಿ 1969, ಸೆಪ್ಟೆಂಬರ್ 2ರಂದು ಅಂತರಾಷ್ಟ್ರೀಯ ತೆಂಗು ಸಮುದಾಯವನ್ನು (ICC) ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ ಸೆಪ್ಟೆಂಬರ್ 2ರಂದು ವಿಶ್ವ ತೆಂಗು ದಿನವನ್ನು ಸ್ಥಾಪನೆ ಮಾಡಲಾಯಿತು. ಅಂತರಾಷ್ಟ್ರೀಯ ತೆಂಗು ಸಮುದಾಯವನ್ನು ನಂತರಲ್ಲಿ ಏಷ್ಯನ್ ಫೆಸಿಫಿಕ್ ತೆಂಗು ಸಮುದಾಯ ಎಂದು ಹೆಸರಿಸಲಾಯಿತು. ಇದರ ಪ್ರಧಾನ ಕಛೇರಿ ಇಂಡೋನೇಷ್ಯಾದ ಜಕಾರ್ತಾದಲ್ಲಿದೆ ಮತ್ತು ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಈ ಸಂಸ್ಥೆಯ ಸದಸ್ಯತ್ವವನ್ನು ಹೊಂದಿದೆ.

ಇದನ್ನೂ ಓದಿ:ಅಂತಾರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನದ ಇತಿಹಾಸ, ಮಹತ್ವ ಇಲ್ಲಿದೆ

ವಿಶ್ವ ತೆಂಗು ದಿನದ ಆಚರಣೆಯಯ ಮಹತ್ವವೇನು?

ಆರೋಗ್ಯ ದೃಷ್ಟಿಯಿಂದ ಮಾತ್ರವಲ್ಲದೆ ಆರ್ಥಿಕವಾಗಿಯೂ ತೆಂಗಿನ ಮಹತ್ವವನ್ನು ಸಾರಲು ಪ್ರತಿವರ್ಷ ವಿಶ್ವ ತೆಂಗಿನಕಾಯಿ ದಿನವನ್ನು ಆಚರಿಸಲಾಗುತ್ತದೆ. ತೆಂಗು ಕೃಷಿ ಮತ್ತು ಉದ್ಯಮದ ಬಗ್ಗೆ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ. ಈ ದಿನದಂದು ತೆಂಗಿನಕಾಯಿ ಉತ್ಪಾದನೆಯಲ್ಲಿ ತೊಡಗಿರುವ ರೈತರು ಮತ್ತು ಉದ್ಯಮಿಗಳಿಗಾಗಿ ವಿವಿಧ ವಿಚಾರ ಸಂಕಿರಣಗಳು ಮತ್ತು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ. ಇದು ಅವರ ತೆಂಗು ಉತ್ಪಾದನೆಯನ್ನು ಹೆಚ್ಚಿಸಲು ಅನುವು ಮಾಡಿಕೊಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!