AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rose Day 2023: ವಿಶ್ವ ಗುಲಾಬಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯ ಈ ಆಚರಣೆ

ಮಾನವರಿಗೆ ಬಾಧಿಸುವಂತಹ ಗಂಭೀರ ಕಾಯಿಲೆಗಳಲ್ಲಿ ಕ್ಯಾನ್ಸರ್ ರೋಗವೂ ಒಂದು.  ಈ ರೋಗವು ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಹಾಗಾಗಿ ಬದುಕುವ ಭರವಸೆ ಮತ್ತು ಸಕರಾತ್ಮಕತೆಯನ್ನು ಬೆಳೆಸಿಕೊಳ್ಳುವ ಮೂಲಕ ಈ ರೋಗದ ವಿರುದ್ಧ ಜಯಿಸಬಹುದು ಎಂದು ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯವನ್ನು ತುಂಬುವ ಸಲುವಾಗಿ  ಪ್ರತಿವರ್ಷ ಸೆಪ್ಟೆಂಬರ್ 22 ರಂದು ವಿಶ್ವ ಗುಲಾಬಿ ದಿನವನ್ನು (World Rose Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

World Rose Day 2023: ವಿಶ್ವ ಗುಲಾಬಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯ ಈ ಆಚರಣೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 21, 2023 | 4:59 PM

Share
ಸಾಮಾನ್ಯವಾಗಿ ಫೆಬ್ರವರಿ ತಿಂಗಳ ಪ್ರೇಮಿಗಳ ವಾರದಂದು ಒಂದು ದಿನ ರೋಸ್ ಡೇಯನ್ನು (Rose Day) ಆಚರಿಸಲಾಗುತ್ತದೆ ಎಂದು ಬಹುತೇಕ ಎಲ್ಲರಿಗೂ ತಿಳಿದಿದೆ.  ಪ್ರೇಮಿಗಳ ದಿನದಂದು ಮಾತ್ರವಲ್ಲದೆ, ಸೆಪ್ಟೆಂಬರ್ 22ನೇ ತಾರೀಕು ಕ್ಯಾನ್ಸರ್ ರೋಗಿಗಳಿಗಾಗಿ ಕೂಡಾ ರೋಸ್ ಡೇಯನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿ ಕುಗ್ಗಿಸುತ್ತದೆ. ಮತ್ತು ಕ್ಯಾನ್ಸರ್ ಎಂದರೆ ಜೀವನದ  ಅಂತ್ಯ ಎಂದು ಅನೇಕರು ಭಾವಿಸುತ್ತಾರೆ. ಹೀಗಿರುವಾಗ ದೃತಿಗೆಡದೆ, ಈ ಮಾರಣಾಂತಿಕ ರೋಗದ ವಿರುದ್ಧ ಧೈರ್ಯವಾಗಿ ಹೋರಾಡಿ ಜಯಿಸಬಹುದು ಎಂದು ಕ್ಯಾನ್ಸರ್ ರೋಗಿಗಳಿಗೆ ಬದುಕಿನ ಭರವಸೆಯನ್ನು ಮೂಡಿಸಲು ಹಾಗೂ ಮನೋಸ್ಥೈರ್ಯವನ್ನು ತುಂಬಲು ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಗುಲಾಬಿ ದಿನದ ಇತಿಹಾಸ:

ಕೆನಡಾದ ಮೆಲಿಂಡಾ ರೋಸ್ ಎಂಬ ಹುಡುಗಿಯ ನೆನಪಿಗಾಗಿ ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ. 1994ರಲ್ಲಿ 12 ವರ್ಷದ ಪುಟ್ಟ  ಬಾಲಕಿಯಾಗಿದ್ದ ಮೆಲಿಂಡಾ ಆಸ್ಕಿನ್ ಟ್ಯೂಮರ್ ಎಂಬ ಮಾರಣಾಂತಿಕ ರಕ್ತದ ಕ್ಯಾನ್ಸರ್ ಕಾಯಿಲೆಗೆ ತುತ್ತಾದಳು.  ಕ್ಯಾನ್ಸರ್ ಆಕೆಯನ್ನು ಭಾದಿಸಿದೆ ಎಂದು ಪತ್ತೆ ಮಾಡಿದ ನಂತರ ಈಕೆ ಕೇಲವ  ಎರಡು ವಾರಗಳ ಕಾಲ ಮಾತ್ರ ಬದುಕುಳಿಯಲು ಸಾಧ್ಯ ಎಂದು ವೈದ್ಯರು ಹೇಳುತ್ತಾರೆ.  ಆದರೆ ಮೆಲಿಂಡಾ  ಛಲ ಮತ್ತು ಬದುಕುವ ಭರವಸೆಯಿಂದ ಆರು ತಿಂಗಳುಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಡಿ ಇಹಲೋಕ ತ್ಯಜಿಸಿದಳು. ಮತ್ತು ಈ ಆರು ತಿಂಗಳುಗಳ ಕಾಲ ಕ್ಯಾನ್ಸರ್ ರೋಗವಿದೆ ಎಂದು ಮಾನಸಿಕವಾಗಿ ಕುಗ್ಗದೆ ಸಕರಾತ್ಮಕ ಆಲೋಚನೆಗಳನ್ನು ಮೈಗೂಡಿಸಿಕೊಂಡು ಈಕೆ   ಕವನಗಳು ಮತ್ತು ಪತ್ರಗಳನ್ನು ಬರೆಯುತ್ತಿದ್ದಳು. ಮತ್ತು ಕ್ಯಾನ್ಸರ್ ರೋಗಿಗಳ ಜೊತೆಗೆ ಸಮಯ ಕಳೆಯುತ್ತಾ ಅವರ ನೋವನ್ನು ಮರೆಸಲು ಪ್ರಯತ್ನಿಸುತ್ತಿದ್ದಳು. ಇದಲ್ಲದೆ ಇ-ಮೇಲ್  ಸಂದೇಶಗಳನ್ನು ಕಳುಹಿಸುವ ಮೂಲಕ ಕ್ಯಾನ್ಸರ್ ರೋಗಿಗಳನ್ನು ಸಂತೋಷವಾಗಿಡಲು ಪ್ರಯತ್ನಿಸಿದಳು.
ಹೀಗೆ ಆರು ತಿಂಗಳುಗಳ ಕಾಲ ಆಕೆ ಕ್ಯಾನ್ಸರ್  ವಿರುದ್ಧ ಹೋರಾಡಿದ ರೀತಿ, ಬದುಕು ಹುಮ್ಮಸ್ಸು ಇವೆಲ್ಲವೂ ಇತರ ಕ್ಯಾನ್ಸರ್ ರೋಗಿಗಳಿಗೆ ಮಾದರಿಯಾಗುವಂತಿತ್ತು. ಇದೇ ಕಾರಣದಿಂದ  ಮೆಲಿಂಡಾ ಎಂಬ ಧೈರ್ಯವಂತ ಬಾಲಕಿಯ ನೆನಪಿಗಾಗಿ ಪ್ರತಿವರ್ಷ ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಕ್ಯಾನ್ಸರ್ ರೋಗಿಗಳಿಗೆ ಗುಲಾಬಿ ಹೂವುಗಳನ್ನು ನೀಡುವ ಮೂಲಕ ಅವರ ನೋವನ್ನು ಮರೆಸಿ, ಬದುಕುವ ಛಲ ಮತ್ತು ಹುಮ್ಮಸ್ಸನ್ನು ತುಂಬಲಾಗುತ್ತದೆ.

ವಿಶ್ವ ಗುಲಾಬಿ ದಿನದ ಮಹತ್ವ:

ಇದು ಕ್ಯಾನ್ಸರ್  ರೋಗದ ವಿರುದ್ಧ ಹೋರಾಡುವ ಜನರಲ್ಲಿ ಬದುಕಿನ ಭರವಸೆ ಮತ್ತು ಉತ್ಸಾಹವನ್ನು ಹರಡಲು ಮೀಸಲಾಗಿರುವ ದಿನವಾಗಿದೆ. ಈ ದಿನದಂದು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕ್ಯಾನ್ಸರ್ ಪೀಡಿತರಿಗೆ ಕ್ಯಾನ್ಸರ್ ರೋಗವು ಜೀವನದ ಅಂತ್ಯವಲ್ಲ ಎಂಬ ಸಂದೇಶವನ್ನು ಸಾರಲಾಗುತ್ತದೆ. ಮತ್ತು ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ವಿರುದ್ಧ ಧೈರ್ಯದಿಂದ ಹೋರಾಡಿ, ಜೀವನವನ್ನು ಜಯಿಸಬಹುದು ಎಂಬ ಭರವಸೆಯನ್ನು ಮೂಡಿಸಲಾಗುತ್ತದೆ.  ಇದಲ್ಲದೆ ಈ ವಿಶೇಷ ದಿನವು ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ