AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rose Day 2023: ವಿಶ್ವ ಗುಲಾಬಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯ ಈ ಆಚರಣೆ

ಮಾನವರಿಗೆ ಬಾಧಿಸುವಂತಹ ಗಂಭೀರ ಕಾಯಿಲೆಗಳಲ್ಲಿ ಕ್ಯಾನ್ಸರ್ ರೋಗವೂ ಒಂದು.  ಈ ರೋಗವು ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಕುಗ್ಗಿಸುತ್ತದೆ. ಹಾಗಾಗಿ ಬದುಕುವ ಭರವಸೆ ಮತ್ತು ಸಕರಾತ್ಮಕತೆಯನ್ನು ಬೆಳೆಸಿಕೊಳ್ಳುವ ಮೂಲಕ ಈ ರೋಗದ ವಿರುದ್ಧ ಜಯಿಸಬಹುದು ಎಂದು ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯವನ್ನು ತುಂಬುವ ಸಲುವಾಗಿ  ಪ್ರತಿವರ್ಷ ಸೆಪ್ಟೆಂಬರ್ 22 ರಂದು ವಿಶ್ವ ಗುಲಾಬಿ ದಿನವನ್ನು (World Rose Day) ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

World Rose Day 2023: ವಿಶ್ವ ಗುಲಾಬಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಕ್ಯಾನ್ಸರ್ ರೋಗಿಗಳಿಗೆ ಮನೋಸ್ಥೈರ್ಯ ಈ ಆಚರಣೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 21, 2023 | 4:59 PM

Share
ಸಾಮಾನ್ಯವಾಗಿ ಫೆಬ್ರವರಿ ತಿಂಗಳ ಪ್ರೇಮಿಗಳ ವಾರದಂದು ಒಂದು ದಿನ ರೋಸ್ ಡೇಯನ್ನು (Rose Day) ಆಚರಿಸಲಾಗುತ್ತದೆ ಎಂದು ಬಹುತೇಕ ಎಲ್ಲರಿಗೂ ತಿಳಿದಿದೆ.  ಪ್ರೇಮಿಗಳ ದಿನದಂದು ಮಾತ್ರವಲ್ಲದೆ, ಸೆಪ್ಟೆಂಬರ್ 22ನೇ ತಾರೀಕು ಕ್ಯಾನ್ಸರ್ ರೋಗಿಗಳಿಗಾಗಿ ಕೂಡಾ ರೋಸ್ ಡೇಯನ್ನು ಆಚರಿಸಲಾಗುತ್ತದೆ. ಕ್ಯಾನ್ಸರ್ ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ವ್ಯಕ್ತಿಯನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿ ಕುಗ್ಗಿಸುತ್ತದೆ. ಮತ್ತು ಕ್ಯಾನ್ಸರ್ ಎಂದರೆ ಜೀವನದ  ಅಂತ್ಯ ಎಂದು ಅನೇಕರು ಭಾವಿಸುತ್ತಾರೆ. ಹೀಗಿರುವಾಗ ದೃತಿಗೆಡದೆ, ಈ ಮಾರಣಾಂತಿಕ ರೋಗದ ವಿರುದ್ಧ ಧೈರ್ಯವಾಗಿ ಹೋರಾಡಿ ಜಯಿಸಬಹುದು ಎಂದು ಕ್ಯಾನ್ಸರ್ ರೋಗಿಗಳಿಗೆ ಬದುಕಿನ ಭರವಸೆಯನ್ನು ಮೂಡಿಸಲು ಹಾಗೂ ಮನೋಸ್ಥೈರ್ಯವನ್ನು ತುಂಬಲು ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಗುಲಾಬಿ ದಿನದ ಇತಿಹಾಸ:

ಕೆನಡಾದ ಮೆಲಿಂಡಾ ರೋಸ್ ಎಂಬ ಹುಡುಗಿಯ ನೆನಪಿಗಾಗಿ ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ. 1994ರಲ್ಲಿ 12 ವರ್ಷದ ಪುಟ್ಟ  ಬಾಲಕಿಯಾಗಿದ್ದ ಮೆಲಿಂಡಾ ಆಸ್ಕಿನ್ ಟ್ಯೂಮರ್ ಎಂಬ ಮಾರಣಾಂತಿಕ ರಕ್ತದ ಕ್ಯಾನ್ಸರ್ ಕಾಯಿಲೆಗೆ ತುತ್ತಾದಳು.  ಕ್ಯಾನ್ಸರ್ ಆಕೆಯನ್ನು ಭಾದಿಸಿದೆ ಎಂದು ಪತ್ತೆ ಮಾಡಿದ ನಂತರ ಈಕೆ ಕೇಲವ  ಎರಡು ವಾರಗಳ ಕಾಲ ಮಾತ್ರ ಬದುಕುಳಿಯಲು ಸಾಧ್ಯ ಎಂದು ವೈದ್ಯರು ಹೇಳುತ್ತಾರೆ.  ಆದರೆ ಮೆಲಿಂಡಾ  ಛಲ ಮತ್ತು ಬದುಕುವ ಭರವಸೆಯಿಂದ ಆರು ತಿಂಗಳುಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಡಿ ಇಹಲೋಕ ತ್ಯಜಿಸಿದಳು. ಮತ್ತು ಈ ಆರು ತಿಂಗಳುಗಳ ಕಾಲ ಕ್ಯಾನ್ಸರ್ ರೋಗವಿದೆ ಎಂದು ಮಾನಸಿಕವಾಗಿ ಕುಗ್ಗದೆ ಸಕರಾತ್ಮಕ ಆಲೋಚನೆಗಳನ್ನು ಮೈಗೂಡಿಸಿಕೊಂಡು ಈಕೆ   ಕವನಗಳು ಮತ್ತು ಪತ್ರಗಳನ್ನು ಬರೆಯುತ್ತಿದ್ದಳು. ಮತ್ತು ಕ್ಯಾನ್ಸರ್ ರೋಗಿಗಳ ಜೊತೆಗೆ ಸಮಯ ಕಳೆಯುತ್ತಾ ಅವರ ನೋವನ್ನು ಮರೆಸಲು ಪ್ರಯತ್ನಿಸುತ್ತಿದ್ದಳು. ಇದಲ್ಲದೆ ಇ-ಮೇಲ್  ಸಂದೇಶಗಳನ್ನು ಕಳುಹಿಸುವ ಮೂಲಕ ಕ್ಯಾನ್ಸರ್ ರೋಗಿಗಳನ್ನು ಸಂತೋಷವಾಗಿಡಲು ಪ್ರಯತ್ನಿಸಿದಳು.
ಹೀಗೆ ಆರು ತಿಂಗಳುಗಳ ಕಾಲ ಆಕೆ ಕ್ಯಾನ್ಸರ್  ವಿರುದ್ಧ ಹೋರಾಡಿದ ರೀತಿ, ಬದುಕು ಹುಮ್ಮಸ್ಸು ಇವೆಲ್ಲವೂ ಇತರ ಕ್ಯಾನ್ಸರ್ ರೋಗಿಗಳಿಗೆ ಮಾದರಿಯಾಗುವಂತಿತ್ತು. ಇದೇ ಕಾರಣದಿಂದ  ಮೆಲಿಂಡಾ ಎಂಬ ಧೈರ್ಯವಂತ ಬಾಲಕಿಯ ನೆನಪಿಗಾಗಿ ಪ್ರತಿವರ್ಷ ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಕ್ಯಾನ್ಸರ್ ರೋಗಿಗಳಿಗೆ ಗುಲಾಬಿ ಹೂವುಗಳನ್ನು ನೀಡುವ ಮೂಲಕ ಅವರ ನೋವನ್ನು ಮರೆಸಿ, ಬದುಕುವ ಛಲ ಮತ್ತು ಹುಮ್ಮಸ್ಸನ್ನು ತುಂಬಲಾಗುತ್ತದೆ.

ವಿಶ್ವ ಗುಲಾಬಿ ದಿನದ ಮಹತ್ವ:

ಇದು ಕ್ಯಾನ್ಸರ್  ರೋಗದ ವಿರುದ್ಧ ಹೋರಾಡುವ ಜನರಲ್ಲಿ ಬದುಕಿನ ಭರವಸೆ ಮತ್ತು ಉತ್ಸಾಹವನ್ನು ಹರಡಲು ಮೀಸಲಾಗಿರುವ ದಿನವಾಗಿದೆ. ಈ ದಿನದಂದು ಗುಲಾಬಿ ಹೂವುಗಳನ್ನು ನೀಡುವ ಮೂಲಕ ಕ್ಯಾನ್ಸರ್ ಪೀಡಿತರಿಗೆ ಕ್ಯಾನ್ಸರ್ ರೋಗವು ಜೀವನದ ಅಂತ್ಯವಲ್ಲ ಎಂಬ ಸಂದೇಶವನ್ನು ಸಾರಲಾಗುತ್ತದೆ. ಮತ್ತು ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ವಿರುದ್ಧ ಧೈರ್ಯದಿಂದ ಹೋರಾಡಿ, ಜೀವನವನ್ನು ಜಯಿಸಬಹುದು ಎಂಬ ಭರವಸೆಯನ್ನು ಮೂಡಿಸಲಾಗುತ್ತದೆ.  ಇದಲ್ಲದೆ ಈ ವಿಶೇಷ ದಿನವು ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ