AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Teacher’s Day 2023: ವಿಶ್ವ ಶಿಕ್ಷಕರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿದೆ 

ಪ್ರಪಂಚದಾದ್ಯಂತ ಶಿಕ್ಷಕರ ಪ್ರಾಮುಖ್ಯತೆ, ಶಿಕ್ಷಣಕ್ಕೆ  ಅವರ ವಿಶೇಷ ಕೊಡುಗೆಗಳನ್ನು ಶ್ಲಾಘಿಸಲು ಮತ್ತು ಶಿಕ್ಷಕರ ಪರಿಸ್ಥಿತಿಗಳನ್ನು ಸುಧಾರಿಸುವ ಸಲುವಾಗಿ ಪ್ರತಿವರ್ಷ ಅಕ್ಟೋಬರ್ 5 ರಂದು ಜಾಗತಿಕ ಮಟ್ಟದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.  

World Teacher's Day 2023: ವಿಶ್ವ ಶಿಕ್ಷಕರ ದಿನವನ್ನು ಏಕೆ ಆಚರಿಸಲಾಗುತ್ತದೆ? ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿದೆ 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 03, 2023 | 5:49 PM

ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಏಕೆಂದರೆ ಶಿಕ್ಷಕರು ನಮಗೆ  ಕೇವಲ ಪುಸ್ತಕದ ವಿಷಯಗಳನ್ನು ಕಲಿಸುವುದು ಮಾತ್ರವಲ್ಲದೆ ನೈತಿಕ ಮೌಲ್ಯಗಳನ್ನು ಕಲಿಸುವ ಮೂಲಕ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗಿ ಬದುಕಲು ಮಾರ್ಗದರ್ಶನ ನೀಡುತ್ತಾರೆ. ತಂದೆತಾಯಿಯ ನಂತರ ನಮಗೆ ತಿದ್ದಿಬುದ್ಧಿ ಹೇಳಿ, ನಮ್ಮ ಏಳಿಗೆಯನ್ನು ಬಯಸುವವರೆಂದರೆ ಅದು ಶಿಕ್ಷಕರು. ಅಂತಹ  ಶ್ರೇಷ್ಠ ಶಿಕ್ಷಕರನ್ನು ಗೌರವಿಸುವ  ಸಲುವಾಗಿ ಭಾರತದಲ್ಲಿ  ಪ್ರತಿವರ್ಷ ಸೆಪ್ಟೆಂಬರ್ 5 ರಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಅದೇ ರೀತಿ ಶಿಕ್ಷಕರ ಸಾಧನೆಗಳು, ಸಮಾಜವನ್ನು ಮತ್ತು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಕೊಡುಗೆಗಳನ್ನು ಗೌರವಿಸಲು ಮತ್ತು ಶಿಕ್ಷಕರ ಪರಿಸ್ಥಿತಿಗಳನ್ನು ಸುಧಾರಿಸುವ ಸಲುವಾಗಿ ಅಕ್ಟೋಬರ್ 5 ರಂದು ವಿಶ್ವ ಮಟ್ಟದಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ತಿಳಿದುಕೊಳ್ಳೋಣ.

ವಿಶ್ವ ಶಿಕ್ಷಕರ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು?

1966 ರಲ್ಲಿ ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) ಮತ್ತು ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ (ILO) ಪ್ಯಾರಿಸ್ನಲ್ಲಿ   ಶಿಕ್ಷಕರ ಸ್ಥಾನಮಾನದ ಕುರಿತು ಒಂದು ಅಂತರ್ ಸರ್ಕಾರಿ ಸಮ್ಮೇಳನವನ್ನು  ಆಯೋಜಿಸಿತ್ತು.  ಈ ಸಭೆಯಲ್ಲಿ ಶಿಕ್ಷಕರ ಹಕ್ಕುಗಳು, ಜವಬ್ದಾರಿಗಳು ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ  UNESCO/ILO ಶಿಫಾರಸನ್ನು  ಪ್ರಸ್ತಾವನೆ ಮಾಡಲಾಯಿತು.

1966 ರಲ್ಲಿ ನಡೆದ ಈ ಸಮ್ಮೇಳನದ 30 ನೇ ವಾರ್ಷಿಕೋತ್ಸವದ ನೆನಪಿಗಾಗಿ 1994 ರಲ್ಲಿ ಮೊದಲ ಬಾರಿಗೆ ವಿಶ್ವ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಅಕ್ಟೋಬರ್ 5 ರಂದು ಸಮಾಜಕ್ಕೆ ಶಿಕ್ಷಕರ ಗಮನಾರ್ಹ ಕೊಡುಗೆಗಳನ್ನು ಗುರುತಿಸುವ ಮತ್ತು ಗೌರವಿಸಲು ಸಲುವಾಗಿ ವಿಶ್ವ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಶಿಕ್ಷಕರ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಹಿಂದಿನ ಇತಿಹಾಸ ಏನು?

ಶಿಕ್ಷಕರ ದಿನದ ಮಹತ್ವ:

ವಿಶ್ವ ಶಿಕ್ಷಕರ ದಿನವು ಜ್ಞಾನವನ್ನು ನೀಡುವ ಮೂಲಕ  ಮತ್ತು  ಸ್ಪೂರ್ತಿ ನೀಡುವ ಮೂಲಕ  ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವ  ಶಿಕ್ಷಕರಿಗೆ ಹೃದಯಪೂರ್ವಕ ಗೌರವವನ್ನು ಸಲ್ಲಿಸುವ ದಿನವಾಗಿದೆ.  ಈ ಜಾಗತಿಕ ಆಚರಣೆಯು ಶಿಕ್ಷಕರ ಅಮೂಲ್ಯ ಕೊಡುಗೆಗಳನ್ನು ಮತ್ತು ಸುಸಂಸ್ಕೃತ ಸಮಾಜವನ್ನು ರೂಪಿಸುವಲ್ಲಿ ಅವರ ಪಾತ್ರವನ್ನು ಗೌರವಿಸುತ್ತದೆ.  ಇದಲ್ಲದೆ ಶಿಕ್ಷಕರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು, ಶಿಕ್ಷಕರ ಹಕ್ಕುಗಳು ಮತ್ತು ಜವಬ್ದಾರಿಗಳನ್ನು ಗುರುತಿಸಲು ಈ ದಿನವು ಒಂದು ವೇದಿಕೆಯಾಗಿದೆ.

ಈ ದಿನದಂದು ಶಿಕ್ಷಣ ನಿರೂಪಕರು ಮತ್ತು ತಜ್ಞರು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಲು ಸಮ್ಮೇಳನಗಳು ಮತ್ತು ಸಭೆಗಳನ್ನು ಆಯೋಜಿಸುತ್ತಾರೆ. ಮತ್ತು ಪ್ರಪಂಚದಾದ್ಯಂತ ಹಲವಾರು ಶಾಲೆಗಳು ಶಿಕ್ಷಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ