AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸ್ಟೋರೆಂಟ್​​​ನಲ್ಲಿ ನೀಡುವ ಈರುಳ್ಳಿ ರುಚಿಕರವಾಗಿರುವುದು ಯಾಕೆ? ಇದೆ ಕಾರಣವಂತೆ

ಅಡುಗೆಯ ರುಚಿ ಹೆಚ್ಚಿಸುವ ಈ ಈರುಳ್ಳಿಯಿಲ್ಲದೇ ಯಾವುದೇ ಆಹಾರ ಪದಾರ್ಥವು ಪೂರ್ಣವಾಗುವುದೇ ಇಲ್ಲ. ದಿನನಿತ್ಯ ಬಳಸುವ ಈ ಈರುಳ್ಳಿಯಲ್ಲೂ ಹತ್ತಾರು ಆರೋಗ್ಯ ಪ್ರಯೋಜನಗಳಿವೆ. ಆದರೆ ಮನೆಯಲ್ಲಿ ಕತ್ತರಿಸಿದ ಈರುಳ್ಳಿಗಿಂತ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ನೀಡುವ ಈರುಳ್ಳಿ ಬಹಳ ರುಚಿಕರವಾಗಿರುತ್ತದೆ. ಆದರೆ ಇದು ಯಾಕೆ ಎನ್ನುವ ಬಗ್ಗೆ ಹೆಚ್ಚಿನವರು ಯೋಚಿಸುವುದೇ ಇಲ್ಲ. ಈರುಳ್ಳಿ ಅಷ್ಟು ಟೇಸ್ಟಿಯಾಗಿರಲು ಕಾರಣವಿದ್ದು, ಆ ಕುರಿತಾದ ಕುತೂಹಲಕಾರಿ ಸಂಗತಿ ಇಲ್ಲಿದೆ.

ರೆಸ್ಟೋರೆಂಟ್​​​ನಲ್ಲಿ ನೀಡುವ ಈರುಳ್ಳಿ ರುಚಿಕರವಾಗಿರುವುದು ಯಾಕೆ? ಇದೆ ಕಾರಣವಂತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Sep 20, 2024 | 2:39 PM

Share

ರೆಸ್ಟೋರೆಂಟ್ ಅಥವಾ ಹೋಟೆಲ್ ಹೋದರೆ ತಿನ್ನಲು ಈರುಳ್ಳಿ ನೀಡುತ್ತಾರೆ. ಅದರಲ್ಲಿಯು ನಾನ್ ವೆಜ್ ರೆಸ್ಟೋರೆಂಟ್ ಗಳಲ್ಲಿ ಈ ಈರುಳ್ಳಿ ಇದ್ದೆ ಇರುತ್ತದೆ. ಈ ಈರುಳ್ಳಿ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಕೆಲವರು ಇದರ ರುಚಿಯನ್ನು ಉಪ್ಪು ಹಾಗೂ ನಿಂಬೆರಸವನ್ನು ಹಿಂಡಿ ಸವಿಯುತ್ತಾರೆ. ಅದೇ ಮನೆಯಲ್ಲಿ ಕತ್ತರಿಸಿದ ಈರುಳ್ಳಿಯನ್ನು ತಿಂದರೆ ಖಾರದೊಂದಿಗೆ, ಅದರ ಘಾಟು ಮೂಗಿಗೆ ಬಡಿಯುತ್ತದೆ. ಹೆಚ್ಚು ತಿಂದರೆ ಕಣ್ಣಲ್ಲಿ ನೀರು ಕೂಡ ಬರುತ್ತದೆ. ರೆಸ್ಟೋರೆಂಟ್ ನಲ್ಲಿ ನೀಡುವ ಈರುಳ್ಳಿ ರುಚಿ ಹೆಚ್ಚಾಗಲು ಈ ವಸ್ತುಗಳನ್ನು ಬೆರೆಸುವುದೇ ಕಾರಣ ಎನ್ನಲಾಗಿದೆ.

* ಐಸ್ ನೀರು : ಸಾಮಾನ್ಯವಾಗಿ ಈ ಈರುಳ್ಳಿಯಲ್ಲಿ ಸಲ್ಫರ್ ಅಂಶವು ಇರುತ್ತದೆ . ಇದನ್ನು ಚೆನ್ನಾಗಿ ಬಿಸಿ ಮಾಡಿದಾಗ, ತೀವ್ರತೆ ಕಡಿಮೆಯಾಗುತ್ತದೆ. ಅದಲ್ಲದೆ ಈ ಈರುಳ್ಳಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಹತ್ತು ನಿಮಿಷಗಳ ಐಸ್ ನೀರಿನಲ್ಲಿ ಅದ್ದಿ ಇಡುವುದರಿಂದ ಘಾಟು ಹಾಗೂ ಕುರುಕಲನ್ನು ಕಡಿಮೆ ಮಾಡಿ ರುಚಿಯನ್ನು ಹೆಚ್ಚಿಸುತ್ತದೆ.

* ಮಜ್ಜಿಗೆ : ಕತ್ತರಿಸಿದ ಈರುಳ್ಳಿಯನ್ನು ಬಾಣಸಿಗರು ಮಜ್ಜಿಗೆಯಲ್ಲಿ ನೆನೆಸಿಡುತ್ತಾರೆ. ಇದು ಈರುಳ್ಳಿಯಲ್ಲಿರುವ ಸಲ್ಫರನ್ನು ಹೀರಿಕೊಂಡು ರುಚಿಯನ್ನು ಹೆಚ್ಚಿಸುತ್ತದೆ. ಮಜ್ಜಿಗೆಯಲ್ಲಿ ನೆನೆಯುವ ಕಾರಣ ಹೆಚ್ಚು ಸುವಾಸನೆಭರಿತವಾಗಿರುತ್ತದೆ.

* ವಿನೆಗರ್ : ಈರುಳ್ಳಿ ತುಂಡುಗಳನ್ನು ವಿನೆಗರ್ ನಲ್ಲಿ ಐದು ನಿಮಿಷಗಳ ಕಾಲ ನೆನೆಸಿ ನಂತರ ನೀರಿನಿಂದ ತೊಳೆಯಲಾಗುತ್ತದೆ. ಹೀಗಾಗಿ ಇದರಲ್ಲಿ ಕುರುಕಲು ಕಡಿಮೆಯಾಗಿರುವುದಲ್ಲದೇ ಹೆಚ್ಚು ರಸಭರಿತವಾಗಿರುತ್ತವೆ.

ಇದನ್ನೂ ಓದಿ: ಕಡಿಮೆ ನಿರ್ವಹಣೆಯಲ್ಲಿ ಮನೆಗೆ ಹಸಿರು ಸ್ಪರ್ಶ ನೀಡುವ ಸಸ್ಯಗಳಿವು

* ಉಪ್ಪು : ಈರುಳ್ಳಿ ತುಂಡುಗಳ ಮೇಲೆ ಉಪ್ಪನ್ನು ಸಿಂಪಡಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಬಿಡುತ್ತಾರೆ. ಆ ಬಳಿಕ ಈರುಳ್ಳಿ ಮೇಲೆ ಇರುವ ಉಪ್ಪನ್ನು ಕೈಯಿಂದ ಒರೆಸಲಾಗುತ್ತದೆ.

* ನಿಂಬೆ ರಸ : ಕತ್ತರಿಸಿಟ್ಟ ಈರುಳ್ಳಿಗೆ ನಿಂಬೆ ರಸವನ್ನು ಸಿಂಪಡಿಸಿ ಹತ್ತು ನಿಮಿಷಗಳ ಕಾಲ ಇಡಲಾಗುತ್ತದೆ. ಈ ಸಿಟ್ರಸ್ ಆಮ್ಲವು ಈರುಳ್ಳಿಯ ತೀವ್ರತೆಯನ್ನು ಕಡಿಮೆ ಮಾಡಿ, ರುಚಿಯನ್ನು ಹೆಚ್ಚಿಸುತ್ತದೆ. ಇದನ್ನು ಸಲಾಡ್ ಗಳಲ್ಲಿ ಬಳಸುವುದರಿಂದಲೇ ಸಲಾಡ್ ಕೂಡ ಅಷ್ಟೇ ಟೇಸ್ಟಿಯಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​