AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ತೂಕ ಇಳಿಸುವ ಭರದಲ್ಲಿ ಈ ವಿಷಯಗಳನ್ನು ಕಡೆಗಣಿಸಬೇಡಿ

ತೂಕ (Weight) ಇಳಿಸಲು ಪೌಷ್ಠಿಕಾಂಶಯುಕ್ತ ಆಹಾರ, ಸರಿಯಾದ ಸಮಯಕ್ಕೆ ವ್ಯಾಯಾಮ ಇಷ್ಟಿದ್ದರೆ ಸಾಕು. ಇದು ಕ್ರಮೇಣವಾಗಿ ತೂಕವನ್ನು ಇಳಿಕೆ ಮಾಡುತ್ತದೆ. ಆದರೆ ತೂಕವನ್ನು ಬೇಗ ಇಳಿಸಿಕೊಳ್ಳುವ ಭರದಲ್ಲಿ ನಮ್ಮ ದೇಹದ ಮೇಲಾಗುವ ಕೆಲವು ದುಷ್ಪರಿಣಾಮಗಳನ್ನು ಕಡೆಗಣಿಸಿರುತ್ತೇವೆ.

Weight Loss: ತೂಕ ಇಳಿಸುವ ಭರದಲ್ಲಿ ಈ ವಿಷಯಗಳನ್ನು ಕಡೆಗಣಿಸಬೇಡಿ
Weight Loss
TV9 Web
| Edited By: |

Updated on: Jun 11, 2022 | 9:00 AM

Share

ತೂಕ (Weight) ಇಳಿಸಲು ಪೌಷ್ಠಿಕಾಂಶಯುಕ್ತ ಆಹಾರ, ಸರಿಯಾದ ಸಮಯಕ್ಕೆ ವ್ಯಾಯಾಮ ಇಷ್ಟಿದ್ದರೆ ಸಾಕು. ಇದು ಕ್ರಮೇಣವಾಗಿ ತೂಕವನ್ನು ಇಳಿಕೆ ಮಾಡುತ್ತದೆ. ಆದರೆ ತೂಕವನ್ನು ಬೇಗ ಇಳಿಸಿಕೊಳ್ಳುವ ಭರದಲ್ಲಿ ನಮ್ಮ ದೇಹದ ಮೇಲಾಗುವ ಕೆಲವು ದುಷ್ಪರಿಣಾಮಗಳನ್ನು ಕಡೆಗಣಿಸಿರುತ್ತೇವೆ. ಏಕಾಏಕಿ ತೂಕ ಇಳಿಸಿಕೊಂಡರೆ ಇದು ನಿಮ್ಮ ಹೃದಯದ ಮೇಲೂ ಪರಿಣಾಮ ಬೀರಬಲ್ಲದು, ಇದರಿಂದ ಒಳ್ಳೆಯದಕ್ಕಿಂತ ಕೆಟ್ಟದ್ದೇ ಹೆಚ್ಚು.

ಬೆಲ್ಲ ಸೇವಿಸುವದರಿಂದಲೂ ತೂಕ ಕಡಿಮೆ ಮಾಡಬಹುದು ಬೆಲ್ಲದಲ್ಲಿ ಸೆಲೆನಿಯಮ್, ಮ್ಯಾಂಗನೀಸ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸತುವುಗಳಿವೆ ಸಕ್ಕರೆಗಿಂತ ಭಿನ್ನವಾಗಿ, ಬೆಲ್ಲವು ಕ್ಯಾಲೊರಿಗಳನ್ನು ಮಾತ್ರ ಒಳಗೊಂಡಿರುವುದಿಲ್ಲ, ಇದು ವಿಟಮಿನ್ಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ, ಅದು ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ.

ಬೆಲ್ಲವು 20 ಗ್ರಾಂ ಬೆಲ್ಲದಲ್ಲಿ 38 ಕ್ಯಾಲೋರಿಗಳಿವೆ. ನೈಸರ್ಗಿಕ ಸಿಹಿಕಾರಕವು ಎಲೆಕ್ಟ್ರೋಲೈಟ್ ಮಟ್ಟವನ್ನು ಸಮತೋಲನಗೊಳಿಸಲು ಮತ್ತು ದೇಹದಲ್ಲಿ ನೀರಿನ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ.

ನಿಮ್ಮ ಆಹಾರ ಕ್ರಮ ಹೇಗೆ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು?

ಆಹಾರವನ್ನು ಬಿಡುವುದು: ತೂಕವನ್ನು ಕಡಿಮೆ ಮಾಡುವುದಕ್ಕಾಗಿ ಆಹಾರವನ್ನು ಬಿಡುವುದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಬಹುದು, ಆಹಾರ ಬಿಟ್ಟು ಡಯೆಟ್ ಮಾಡುವುದಕ್ಕಿಂತ ದೇಹಕ್ಕೆ ಯಾವ ಆಹಾರಗಳ ಅಗತ್ಯವಿದೆ ಎಂಬುದನ್ನು ಅರಿತು ಆ ಆಹಾರಗಳನ್ನು ತಿನ್ನುವ ಮೂಲಕವೂ ಡಯೆಟ್ ಮಾಡಬಹುದು.

ಗ್ಲುಟೆನ್ ಫ್ರೀ ಆಹಾರ ಸೇವನೆ: ಗ್ಲುಟೆನ್ ಫ್ರೀ ಆಹಾರವನ್ನು ಸೇವಿಸುವುದರಿಂದ ಕ್ಯಾಲೊರಿ ಕಡಿಮೆಯಾಗುತ್ತದೆ ಎಂಬುದು ಸುಳ್ಳು ಎಂದು ವಿಶ್ಲೇಷಕರು ಹೇಳುತ್ತಾರೆ.

ಕಾರ್ಬೋಹೈಡ್ರೇಟ್ ಆಹಾರ ಕಡಿಮೆ ಮಾಡುವುದು: ಕಾರ್ಬೋ ಹೈಡ್ರೇಟ್ ಆಹಾರಗಳ ಬಳಕೆಯನ್ನು ಕಡಿಮೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಕಾರ್ಬೋಹೈಡ್ರೇಟ್​ಗಳು ನಿಮ್ಮ ಸ್ನಾಯು ಹಾಗೂ ಮೆದುಳಿಗೆ ಇಂಧನವಿದ್ದಂತೆ.

ಕೊಬ್ಬು ರಹಿತ ಆಹಾರ: ನೀವು ಕೊಬ್ಬು ರಹಿತ ಆಹಾರವನ್ನು ಸೇವಿಸುವುದರಿಂದ ತೂಕ ಕಡಿಮೆಯಾಗುತ್ತದೆ ಎಂಬುದು ಸುಳ್ಳು, ಕೊಬ್ಬು ರಹಿತ ಆಹಾರದಿಂದ ಹೃದಯ, ಮೆದುಳಿಗೆ ತೊಂದರೆಯಾಗಲಿದ್ದು, ಸಂಧಿನೋವು ಕೂಡ ಕಾಣಿಸಿಕೊಳ್ಳಬಹುದು, ದೇಹಕ್ಕೆ ಆರೋಗ್ಯಕರ ಕೊಬ್ಬಿನ ಅಗತ್ಯವಿದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು