National Youth Day 2022 ಸ್ವಾಮಿ ವಿವೇಕಾನಂದ ಜಯಂತಿಯನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸಲು ಕಾರಣವೇನು? ಇಲ್ಲಿದೆ ಮಾಹಿತಿ

2022 ರ ರಾಷ್ಟ್ರೀಯ ಯುವ ದಿನವನ್ನು ಆಚರಿಸಲು ನಾವು ತಯಾರಿ ನಡೆಸುತ್ತಿರುವಾಗ ವಿವೇಕಾನಂದ ಜಯಂತಿಯ ಮಹತ್ವದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಸಂಗತಿಗಳು ಇಲ್ಲಿವೆ.

National Youth Day 2022 ಸ್ವಾಮಿ ವಿವೇಕಾನಂದ ಜಯಂತಿಯನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸಲು ಕಾರಣವೇನು? ಇಲ್ಲಿದೆ ಮಾಹಿತಿ
ಸ್ವಾಮಿ ವಿವೇಕಾನಂದ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 12, 2022 | 10:15 AM

ರಾಷ್ಟ್ರೀಯ ಯುವ ದಿನವು (National Youth Day) ಈ ದೇಶದ ಯುವ ಶಕ್ತಿಯ ಆಚರಣೆಯಾಗಿದೆ.ದೇಶದ ಯುವ ಜನತೆ ಆರೋಗ್ಯಕರ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರಾಷ್ಟ್ರೀಯ ಯುವ ದಿನವೆಂದರೆ ಸ್ವಾಮಿ ವಿವೇಕಾನಂದರ ಜನ್ಮದಿನ (Swami Vivekananda Jayanti). ಜನವರಿ 12 ರಂದು ವಿವೇಕಾನಂದ ಜಯಂತಿ, ಅದೇ ದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸಲಾಗುತ್ತದೆ. 2022 ರ ರಾಷ್ಟ್ರೀಯ ಯುವ ದಿನವನ್ನು ಆಚರಿಸಲು ನಾವು ತಯಾರಿ ನಡೆಸುತ್ತಿರುವಾಗ ವಿವೇಕಾನಂದ ಜಯಂತಿಯ ಮಹತ್ವದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಸಂಗತಿಗಳು ಇಲ್ಲಿವೆ. ರಾಷ್ಟ್ರೀಯ ಯುವ ದಿನವನ್ನು ಸ್ವಾಮಿ ವಿವೇಕಾನಂದರ ಜನ್ಮದಿನ ಅಂದರೆ ಪ್ರತಿ ವರ್ಷ ಜನವರಿ 12 ರಂದು ಆಚರಿಸಲಾಗುತ್ತದೆ. ಜನವರಿ 12, 1863 ರಂದು ಜನಿಸಿದ ಸ್ವಾಮಿ ವಿವೇಕಾನಂದರು ವಿಶ್ವಾದ್ಯಂತ ಭಾರತವನ್ನು ಗ್ರಹಿಸುವ ವಿಧಾನವನ್ನು ಬದಲಾಯಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು.

ಸ್ವಾಮಿ ವಿವೇಕಾನಂದ ಜಯಂತಿಯನ್ನು ರಾಷ್ಟ್ರೀಯ ಯುವ ದಿನ ಎಂದು ಏಕೆ ಆಚರಿಸಲಾಗುತ್ತದೆ?

ಸ್ವಾಮಿ ವಿವೇಕಾನಂದರ ಜೀವನ ಮತ್ತು ಕಾರ್ಯ ಹಲವಾರು ವರ್ಷಗಳಿಂದ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ. 1985 ರಲ್ಲಿ ಭಾರತ ಸರ್ಕಾರವು ವಿವೇಕಾನಂದರ ವಿಚಾರಧಾರೆಗಳು ವಿಶೇಷವಾಗಿ ಯುವಕರನ್ನು ಪ್ರೇರೇಪಿಸುತ್ತದೆ ಮತ್ತು ಅವರ ಜೀವನವನ್ನು ರೂಪಿಸಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಅವರ ಜನ್ಮದಿನವನ್ನು ಅಂದಿನಿಂದ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಯುವ ದಿನದ ಆಚರಣೆ

ಪ್ರತಿ ವರ್ಷ  ರಾಷ್ಟ್ರೀಯ ಯುವ ದಿನವು ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳು, ಸಮ್ಮೇಳನಗಳು, ಭಾಷಣಗಳು ಮತ್ತು ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಭಾರತದ ಯುವಕರಲ್ಲಿರುವ ಪ್ರತಿಭೆಯನ್ನು ಬಳಸಿಕೊಳ್ಳಲು ಸಹಾಯ ಮಾಡುವುದು ಮತ್ತು ವಿವಿಧ ಸಮಸ್ಯೆಗಳ ಬಗ್ಗೆ ಅವರು ಹೇಗೆ ಭಾವಿಸುತ್ತಾರೆ ಎಂಬುದನ್ನು ವ್ಯಕ್ತಪಡಿಸಲು ವೇದಿಕೆಯನ್ನು ನೀಡುವುದು ಇದರ ಉದ್ದೇಶವಾಗಿದೆ. ರಾಷ್ಟ್ರೀಯ ಯುವ ದಿನದ ಆಚರಣೆಯು ಭಾರತದ ಯುವಜನರು ಭಾಗವಹಿಸುವ, ಹಂಚಿಕೊಳ್ಳುವ ಮತ್ತು ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಮತ್ತು ಸ್ವಾಮಿ ವಿವೇಕಾನಂದರ ಜೀವನ ಮತ್ತು ಕಾರ್ಯಗಳನ್ನು ಆಚರಿಸುವ ವಿವಿಧ ಸಮ್ಮೇಳನಗಳು ಮತ್ತು ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.

ರಾಷ್ಟ್ರೀಯ ಯುವ ದಿನ 2022 ರಾಷ್ಟ್ರೀಯ ಯುವ ಉತ್ಸವ 2022 ರ ಉದ್ಘಾಟನೆಯೊಂದಿಗೆ ಪ್ರಾರಂಭವಾಗುತ್ತದೆ. ಆರಂಭದಲ್ಲಿ ಪುದುಚೇರಿಯಲ್ಲಿ ಆನ್-ಗ್ರೌಂಡ್ ಈವೆಂಟ್ ಎಂದು ಯೋಜಿಸಲಾಗಿತ್ತು, ಭಾರತದಲ್ಲಿ ಕೊವಿಡ್ ಮೂರನೇ ಅಲೆಯ ಆತಂಕವಿರುವ ಕಾರಣ ಆ ಬಾರಿ ಆಚರಣೆಯು ವರ್ಚುವಲ್ ಆಗಿರುತ್ತದೆ.

ಸ್ವಾಮಿ ವಿವೇಕಾನಂದರ ಬಗ್ಗೆ ನಿಮಗೆ ತಿಳಿದಿರದ 10 ಸಂಗತಿಗಳು

1. ಸ್ವಾಮಿ ವಿವೇಕಾನಂದರ ಪೂರ್ವಾಶ್ರಮದ ಹೆಸರು ನರೇಂದ್ರ ನಾಥ ದತ್ತ. ಅವರು ಯೋಗಿಗಳ ಮನೋಧರ್ಮದಿಂದ ಜನಿಸಿದರು ಮತ್ತು ಚಿಕ್ಕ ವಯಸ್ಸಿನಲ್ಲಿಯೇ ಧ್ಯಾನ ಮಾಡುತ್ತಿದ್ದರು.

2. ಸ್ವಾಮಿ ವಿವೇಕಾನಂದರು ತಮ್ಮ ಪದವಿ ದಿನದಲ್ಲಿ ಬಹಳ ಕಳಪೆ ಇಂಗ್ಲಿಷ್ ಗ್ರಾಮರ್ ಕೌಶಲ್ಯವನ್ನು ಹೊಂದಿದ್ದರು ಮತ್ತು ಅವರು ಆಗ ಕೇವಲ ಶೇ 50 ಅಂಕ ಗಳಿಸಿದರು. ಈ ವ್ಯಕ್ತಿ ನಂತರ ಅಮೆರಿಕದಲ್ಲಿ ನಲ್ಲಿ ಇಂಗ್ಲಿಷ್‌ನಲ್ಲಿ ಅತ್ಯುತ್ತಮ ಭಾಷಣ ನೀಡಿದ್ದರು.

3. ವಿವೇಕಾನಂದರು ಮಹಿಳೆಯರನ್ನು ಗೌರವಿಸುತ್ತಿದ್ದರೂ ಅವರ ಮಠದಲ್ಲಿ ಅವರಿಗೆ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿತ್ತು. ಒಮ್ಮೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ಶಿಷ್ಯರು ಅವರ ತಾಯಿಯನ್ನು ಕರೆತಂದರು. ಆಶ್ರಮದಲ್ಲಿದ್ದ ತಾಯಿಯನ್ನು ನೋಡಿ ಅವರು  “ಯಾಕೆ ಮಹಿಳೆಯನ್ನು ಒಳಗೆ ಬರಲು ಅನುಮತಿಸಿದ್ದೀರಿ? ನಾನು ನಿಯಮವನ್ನು ಮಾಡಿದ್ದೇನೆ ಮತ್ತು ನನಗಾಗಿ ನಿಯಮವನ್ನು ಮುರಿಯುತ್ತಿರುವುದೇಕೆ” ಎಂದು ಹೇಳಿದರು.

4. ಸ್ವಾಮಿ ವಿವೇಕಾನಂದರಿಗೆ ಚಿಕ್ಕಂದಿನಿಂದಲೂ ಸಂಗೀತದ ಬಗ್ಗೆ ಒಲವು ಇತ್ತು. ಅವರು ಶಾಸ್ತ್ರೀಯ ಸಂಗೀತಗಾರರಾಗಿದ್ದರು, ದ್ರುಪದ (ಭಾರತೀಯ ಉಪಖಂಡದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಪ್ರಕಾರ) ತರಬೇತಿ ಪಡೆದರು.

5. ಅವರು ಅಮೆರಿಕ ಮತ್ತು ಇಂಗ್ಲೆಂಡ್ ಸುತ್ತಲೂ ಪ್ರಯಾಣಿಸಿದರು. ಅವರು ಇಲಿನಾಯ್ಸ್‌ನ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿಗೆ ಹಾಜರಿದ್ದರು.

6. ಅವರ ಜೀವನದ ಅವಧಿಯಲ್ಲಿ, ಸ್ವಾಮಿ ವಿವೇಕಾನಂದರು 31 ಕಾಯಿಲೆಗಳಿಂದ ಬಳಲುತ್ತಿದ್ದರು.

7. ವಿವೇಕಾನಂದರು ವೇದಾಂತ ತತ್ತ್ವಶಾಸ್ತ್ರವನ್ನು ಪಶ್ಚಿಮಕ್ಕೆ ತೆಗೆದುಕೊಂಡು ಹಿಂದೂ ಧರ್ಮವನ್ನು ತೀವ್ರವಾಗಿ ಸುಧಾರಿಸಿದ ವ್ಯಕ್ತಿ.

8. ಸ್ವಾಮಿ ವಿವೇಕಾನಂದರು ಅವರು 40 ವರ್ಷಗಳಿಗಿಂತ ಹೆಚ್ಚು ಬದುಕುವುದಿಲ್ಲ ಎಂದು ಭವಿಷ್ಯ ನುಡಿದಿದ್ದರು.

9. ಅವರನ್ನು ಚಹಾದ ರಸಿಕ ಎಂದು ಕರೆಯಲಾಗುತ್ತಿತ್ತು. ಭಾರತದಲ್ಲಿ ಬ್ರಿಟಿಷ್ ವಸಾಹತುಶಾಹಿಗಳು ಚಹಾ ಕುಡಿಯಲು ಅನುಮತಿಸಲಿಲ್ಲ ಎಂಬ ಅಂಶಕ್ಕಾಗಿ ಅವರು ತಮ್ಮ ಮಠಕ್ಕೆ ಚಹಾವನ್ನು ಪರಿಚಯಿಸಿದರು.

10. ಸ್ವಾಮೀಜಿಯವರು ಗ್ರಂಥಾಲಯದಿಂದ ಪುಸ್ತಕಗಳನ್ನು ಎರವಲು ಪಡೆದು ಮರುದಿನ ಹಿಂದಿರುಗಿಸುತ್ತಿದ್ದರು.

ಇದನ್ನೂ ಓದಿ:  Kuvempu Death Anniversary : ‘ಆಗ ಸ್ವಾಮಿ ವಿವೇಕಾನಂದರ ಬೆಂಕಿ ಹೊತ್ತಿಕೊಂಡು ನನ್ನಾತ್ಮ ಉರಿಯುತ್ತಿತ್ತು!’

Published On - 10:14 am, Wed, 12 January 22

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್