AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವ್ಯಾವತ್ತಾದರೂ ಸೋಲೊ ಟ್ರಿಪ್ ಹೋಗಿದ್ದೀರಾ? ಒಂಟಿ ಪ್ರಯಾಣದಿಂದ ಏನೇನು ಲಾಭ ಇದೆ ಗೊತ್ತಾ?

ಪ್ರತಿಯೊಬ್ಬರೂ ಏಕಾಂಗಿಯಾಗಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಯಾವಾಗ ಹೋಗಬೇಕು ಮತ್ತು ಹೇಗೆ ಹೋಗಬೇಕು ಎಂಬ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದ ಕಾರಣ ಅವರು ಒಂದು ಹೆಜ್ಜೆ ಹಿಂದೆ ಸರಿಯುತ್ತಾರೆ.

ನೀವ್ಯಾವತ್ತಾದರೂ ಸೋಲೊ ಟ್ರಿಪ್ ಹೋಗಿದ್ದೀರಾ? ಒಂಟಿ ಪ್ರಯಾಣದಿಂದ ಏನೇನು ಲಾಭ ಇದೆ ಗೊತ್ತಾ?
Solo Trip
TV9 Web
| Edited By: |

Updated on: Sep 04, 2022 | 6:00 AM

Share

ಪ್ರತಿಯೊಬ್ಬರೂ ಏಕಾಂಗಿಯಾಗಿ ಪ್ರಯಾಣಿಸಲು ಬಯಸುತ್ತಾರೆ. ಆದರೆ ಯಾವಾಗ ಹೋಗಬೇಕು ಮತ್ತು ಹೇಗೆ ಹೋಗಬೇಕು ಎಂಬ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದ ಕಾರಣ ಅವರು ಒಂದು ಹೆಜ್ಜೆ ಹಿಂದೆ ಸರಿಯುತ್ತಾರೆ. ಆದರೆ ಸೋಲೊ ಪ್ರಯಾಣವು ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಪ್ರಯಾಣ ಮಾಡುವಾಗ ಕಲಿತ ಕೌಶಲ್ಯಗಳು ಮತ್ತು ಅನುಭವಗಳು ಭವಿಷ್ಯದಲ್ಲಿ ಉಪಯುಕ್ತವೆಂದು ಹೇಳಲಾಗುತ್ತದೆ.

ಒಂಟಿ ಪ್ರಯಾಣದ ಪ್ರಯೋಜನಗಳು: ಏಕಾಂಗಿಯಾಗಿ ಪ್ರಯಾಣಿಸುವುದು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಹೆಚ್ಚಿನ ಸ್ವಾತಂತ್ರ್ಯವನ್ನು ನೀಡುತ್ತದೆ. ನಾವು ಯಾವುದೇ ಸಮಯದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದರ ಅರಿವು ನಮಗಾಗುತ್ತದೆ. ನಿಮ್ಮ ಬಗ್ಗೆ ನೀವು ಇನ್ನಷ್ಟು ತಿಳಿದುಕೊಳ್ಳುವಿರಿ.

ಏನು ಮಾಡಬೇಕು, ಎಲ್ಲಿಯವರೆಗೆ ಎಲ್ಲಿ ಉಳಿಯಬೇಕು ಮತ್ತು ಹತ್ತಿರದ ಪ್ರದೇಶಗಳಲ್ಲಿ ಎಷ್ಟು ಸಮಯ ಕಳೆಯಬೇಕು ಎಲ್ಲವೂ ನಿಮ್ಮ ಕೈಯಲ್ಲಿರುತ್ತದೆ ಆದ್ದರಿಂದ ನೀವು ಸಂಪೂರ್ಣ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿರುತ್ತೀರಿ. ಏಕಾಂಗಿಯಾಗಿ ಪ್ರಯಾಣಿಸುವುದು ಅಗ್ಗವಾಗಿದೆ. ಇದರಿಂದ ಹಣ ಉಳಿತಾಯವಾಗುತ್ತದೆ. ಏಕಾಂಗಿಯಾಗಿ ಪ್ರಯಾಣಿಸುವಾಗ ಮುಂದಿನದು ಸಂಪೂರ್ಣವಾಗಿ ನಿಮಗೆ ಬಿಟ್ಟದ್ದು.

ಸಾಮಾನ್ಯವಾಗಿ ನಾವು ಏಕಾಂಗಿ ಪ್ರಯಾಣವನ್ನು ಮಾಡಲು ಬಯಸಿದರೆ ನಾವು ಮುಂಚಿತವಾಗಿ ಯೋಜಿಸುತ್ತೇವೆ. ಎಲ್ಲಿಗೆ ಹೋಗಬೇಕು ಮತ್ತು ಎಷ್ಟು ದಿನ ಉಳಿಯಬೇಕು ಎಂಬುದು ಸಂಪೂರ್ಣವಾಗಿ ನಮಗೆ ಬಿಟ್ಟದ್ದು. ಹಾಗಾಗಿ ನಾವು ಏನೆಂದು ಅರ್ಥ ಮಾಡಿಕೊಳ್ಳುವ ಪ್ರವಾಸ ಎಂದು ಹೇಳಬಹುದು. ಏಕಾಂಗಿಯಾಗಿ ಪ್ರಯಾಣಿಸುವಾಗ, ಬಸ್ಸುಗಳು ಮತ್ತು ರೈಲುಗಳಲ್ಲಿ, ನೀವು ನಿಮ್ಮ ಪಕ್ಕದಲ್ಲಿರುವ ಜನರನ್ನು ಭೇಟಿಯಾಗುತ್ತೀರಿ.

ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು ಮತ್ತು ನಮ್ಮ ಮಾತುಗಳನ್ನು ಹಂಚಿಕೊಳ್ಳುವುದು ಹೇಗೆ ವರ್ತಿಸಬೇಕು ಎಂಬುದನ್ನು ಕಲಿಯಲು ನಮಗೆ ಸಹಾಯ ಮಾಡುತ್ತದೆ. ಅದರ ಹೊರತಾಗಿ ಭಾಷೆ ಮತ್ತು ಸಂವಹನ ಸುಧಾರಿಸುತ್ತದೆ. ಏಕೆಂದರೆ ಪ್ರಯಾಣದಲ್ಲಿ ಭೇಟಿಯಾದವರು ಗೆಳೆಯರಾಗಿ ಗಂಡ ಹೆಂಡತಿಯಾದ ಘಟನೆಗಳು ಸಾಕಷ್ಟಿವೆ.

ಗೊತ್ತಿಲ್ಲದ ಜಾಗಕ್ಕೆ ಹೋದರೆ ಆಹಾರ ಪದ್ಧತಿಯಿಂದ ಹಿಡಿದು ಉಡುಗೆ-ತೊಡುಗೆ, ಭಾಷೆ ಎಲ್ಲವೂ ವಿಭಿನ್ನವಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಸಂವಹನವು ಬಹಳ ಮುಖ್ಯವಾಗಿದೆ. ಇದು ಮೊದಲಿಗೆ ವಿಚಿತ್ರವಾಗಿ ಮತ್ತು ಆಶ್ಚರ್ಯಕರವಾಗಿ ಕಾಣಿಸಬಹುದು, ಆದರೆ ಇನ್ನೊಂದು ಭಾಷೆಯನ್ನು ಕಲಿಯಲು ಇದು ಒಂದು ಅವಕಾಶವಾಗಿದೆ. ಮತ್ತೊಂದೆಡೆ.. ಒಂದೇ ಒಂದು ಪ್ರವಾಸವು ಜೀವನದಲ್ಲಿ ಮರೆಯಲಾಗದ ಅನುಭವವಾಗಿ ಉಳಿಯುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು