AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid-ul-Adha 2023: ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಷೇರು ಮಾರುಕಟ್ಟೆಗೆ ರಜೆ, ಇನ್ನು ಯಾವೆಲ್ಲ ಹಬ್ಬಕ್ಕೆ ರಜೆ ಇದೆ? ಇಲ್ಲಿದೆ ಮಾಹಿತಿ

ಬಕ್ರೀದ್ ಹಬ್ಬದ ಪ್ರಯುಕ್ತ ಭಾರತೀಯ ಷೇರು ಮಾರುಕಟ್ಟೆಗಳಾದ ಬಾಂಬೆ ಸ್ಟಾಕ್ ಎಕ್ಸೆಂಜ್ ಹಾಗೂ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಗಳಿಗೆ ಜೂನ್ 29 ರಂದು ರಜೆ ಘೋಷಿಸಲಾಗಿದೆ.

Eid-ul-Adha 2023: ಬಕ್ರೀದ್ ಹಬ್ಬದ ಪ್ರಯುಕ್ತ ಇಂದು ಷೇರು ಮಾರುಕಟ್ಟೆಗೆ ರಜೆ, ಇನ್ನು ಯಾವೆಲ್ಲ ಹಬ್ಬಕ್ಕೆ ರಜೆ ಇದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 29, 2023 | 12:28 PM

ಸಾವಿರಾರು ಕೋಟಿ ವ್ಯವಹಾರ ನಡೆಯುವ ಭಾರತದ ಷೇರು ಮಾರುಕಟ್ಟೆಗಳಲ್ಲಿ ಶನಿವಾರ ಮತ್ತು ಭಾನುವಾರದ ರಜೆಗಳ ಹೊರತಾಗಿಯೂ ಕೆಲವೊಂದು ಧಾರ್ಮಿಕ ಹಬ್ಬ ಮತ್ತು ರಾಷ್ಟ್ರೀಯ ಹಬ್ಬಗಳ ದಿನದಂದು ಕೂಡಾ ರಜೆ ಇರುತ್ತದೆ. ಹಾಗಾಗಿ ಬಕ್ರೀದ್ ಹಬ್ಬದ ಪ್ರಯುಕ್ತ ಜೂನ್ 29 ರಂದು ಭಾರತೀಯ ಷೇರು ಮಾರುಕಟ್ಟೆಗಳಾದ ಬಾಂಬೆ ಸ್ಟಾಕ್ ಎಕ್ಸೆಂಜ್ ಹಾಗೂ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರವು ತನ್ನ ಅಧಿಕೃತ ವೈಬ್ಸೈಟ್​​​ನಲ್ಲಿ ಜೂನ್ 28ರ ಬದಲಿಗೆ ಜೂನ್ 29, 2023 ರಂದು ರಜೆ ಎಂದು ತಿಳಿಸಿದೆ.

ಬಕ್ರೀದ್ ಹಬ್ಬದ ನಿಮಿತ್ತ ಭಾರತೀಯ ಷೇರು ಮಾರುಕಟ್ಟೆ ಬುಧವಾರದ ಬದಲು ಗುರುವಾರ ಮುಚ್ಚಲಿದೆ. ಗುರುವಾರ ಷೇರು ಮಾರುಕಟ್ಟೆಯಲ್ಲಿ ಯಾವುದೇ ವಹಿವಾಟು ನಡೆಯುವುದಿಲ್ಲ” ಎಂದು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್.ಎಸ್.ಇ) ಮಂಗಳವಾರ ತನ್ನ ಸುತ್ತೋಲೆಯಲ್ಲಿ ಈ ಮಾಹಿತಿಯನ್ನು ನೀಡಿದೆ.

2023ರ ಆರಂಭದಲ್ಲಿ ವ್ಯಾಪಾರ ರಜಾದಿನಗಳನ್ನು ಘೋಷಿಸುವಾಗ, ಒಟ್ಟು 15 ವ್ಯಾಪಾರ ರಜಾದಿನಗಳನ್ನು ಘೋಷಿಸಲಾಗಿದೆ. ಅದರಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಜೂನ್ 28ರಂದು ರಜೆ ನೀಡಲಾಗಿತ್ತು. ಇದೀಗ ಮಹಾರಾಷ್ಟ್ರ ಸರ್ಕಾರವು ಜೂನ್ 29ರಂದು ಬಕ್ರೀದ್ ಹಬ್ಬಕ್ಕೆ ಸಾರ್ವಜನಿಕ ರಜೆ ಘೋಷಿಸಿದ ನಂತರ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಈ ಹಿಂದೆ ಜೂನ್ 28, 2023ರಂದು ಘೋಷಿಸಲಾದ ರಜೆಯನ್ನು ಹಿಂಪಡೆದು, ಜೂನ್ 29 ರಂದು ರಜೆ ಘೋಷಿಸಿದೆ.

ಇದನ್ನೂ ಓದಿ: Stock Market Holiday: 2023ರಲ್ಲಿ ಷೇರು ಮಾರುಕಟ್ಟೆ ರಜಾದಿನಗಳ ವಿವರ ಇಲ್ಲಿದೆ ನೋಡಿ

ನಿಫ್ಟಿ ಮತ್ತು ನಿಫ್ಟಿ ಬ್ಯಾಂಕ್ ಒಪ್ಪಂದಗಳ ಅಸ್ತಿತ್ವದಲ್ಲಿರುವ ಎಲ್ಲಾ ಒಪ್ಪಂದಗಳ ಮುಕ್ತಾಯವು ಗುರುವಾರದ ಬದಲಿಗೆ ಬುಧವಾರ ನಡೆದಿದೆ. ಆದರೆ ನಿಫ್ಟಿ ಮಿಡ್ ಕ್ಯಾಪ್ ಉತ್ಪನ್ನಗಳ ಒಪ್ಪಂದಗಳು ಎಂದಿನಂತೆ ಬುಧವಾರದಂದು ಮುಕ್ತಾಯಗೊಳ್ಳುತ್ತದೆ. ಹಾಗೂ ಹೊಸ ಸರಣಿಯ ಒಪ್ಪಂದಗಳು ಶುಕ್ರವಾರದಿಂದ ಪ್ರಾರಂಭವಾಗಲಿದೆ.

ಷೇರು ಮಾರುಕಟ್ಟೆಯ 2023ರ ಮುಂಬರುವ ರಜಾದಿನಗಳು:

ಆಗಸ್ಟ್ 15 ರಂದು ಸ್ವಾತಂತ್ರ್ಯ ರಜಾದಿನದ ಪ್ರಯುಕ್ತ

ಸಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಪ್ರಯುಕ್ತ

ಅಕ್ಟೋಬರ್ 2 ರಂದು ಗಾಂಧಿ ಜಯಂತಿಯ ಪ್ರಯುಕ್ತ

ಅಕ್ಟೋಬರ್ 24 ದಸರಾ ಪ್ರಯುಕ್ತ

ದೀಪಾವಳಿಯ ಪ್ರಯುಕ್ತ ನವೆಂಬರ್ 14

ಗುರು ನಾನಕ್ ಜಯಂತಿಯ ಪ್ರಯುಕ್ತ ನವೆಂಬರ್ 27

ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Thu, 29 June 23

ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್