Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi Wishes: ಈ ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಗಣೇಶ ಚತುರ್ಥಿಯಂದು ನಿಮ್ಮ ಪ್ರೀತಿಪಾತ್ರರಿಗೆ ಶುಭ ಹಾರೈಸಿ

ಗಣೇಶ ಚತುರ್ಥಿಗಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ಗಣೇಶ ಚತುರ್ಥಿಯ ದಿನದಂದು ಜನರು ಬಪ್ಪನನ್ನು ಬಹಳ ವಿಜೃಂಭನೆಯಿಂದ ಪೂಜಿಸುತ್ತಾರೆ. ಅಷ್ಟೇ ಅಲ್ಲ ಜನರು ಈ ಹಬ್ಬದಂದು ತಮ್ಮ ಪ್ರೀತಿಪಾತ್ರರಿಗೆ ವಾಟ್ಸಾಪ್ ಸಂದೇಶಗಳನ್ನು ಕಳುಹಿಸುವ ಮೂಲಕ ಪರಸ್ಪರ ಶುಭಹಾರೈಸುತ್ತಾರೆ. ನೀವೂ ಕೂಡಾ ನಿಮ್ಮ ಪ್ರೀತಿಪಾತ್ರರಿಗೆ ಈ ಕೆಲವು ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಹಬ್ಬಕ್ಕೆ ಶುಭ ಹಾರೈಕೆಯನ್ನು ಕೋರಬಹುದು.

Ganesh Chaturthi Wishes: ಈ ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಗಣೇಶ ಚತುರ್ಥಿಯಂದು ನಿಮ್ಮ ಪ್ರೀತಿಪಾತ್ರರಿಗೆ ಶುಭ ಹಾರೈಸಿ
Ganesh Chaturthi WishesImage Credit source: Pinterest
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Sep 19, 2023 | 10:00 AM

ಪ್ರತಿವರ್ಷ ಗಣೇಶ ಚತುರ್ಥಿ ಹಬ್ಬವನ್ನು ದೇಶಾದ್ಯಂತ ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಜನರು ತಮ್ಮ ಮನೆಯಲ್ಲಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಶ್ರದ್ಧಾ ಭಕ್ತಿಯಿಂದ ಪೂಜಿಸುತ್ತಾರೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಗಣೇಶನನ್ನು ಪೂಜಿಸುವುದರಿಂದ ಸಂತೋಷ, ಸಮೃದ್ಧಿ ಮತ್ತು ಅದೃಷ್ಟ ಲಭಿಸುತ್ತದೆ ಹಾಗೂ ಎಲ್ಲಾ ವಿಘ್ನಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ. ಈ ಹಬ್ಬದಂದು ಮೋದಕ ಸೇರಿದಂತೆ ಗಣೇಶನಿಗೆ ಪ್ರಿಯವಾದ ತಿನಿಸುಗಳನ್ನು ಮನೆಯಲ್ಲಿ ತಯಾರಿಸಿ ನೈವೇದ್ಯ ರೂಪದಲ್ಲಿ ಅರ್ಪಿಸಿ, ಸಕಲ ಕಷ್ಟಗಳನ್ನು ನಿವಾರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಅಷ್ಟೇ ಅಲ್ಲ ಜನರು ಈ ಹಬ್ಬದ ದಿನದಂದು ತಮ್ಮ ಪ್ರೀತಿಪಾತ್ರರಿಗೆ ವಾಟ್ಸಾಪ್ ಸಂದೇಶಗಳನ್ನು ಕಳುಹಿಸುವ ಮೂಲಕ ಪರಸ್ಪರ ಶುಭಹಾರೈಸುತ್ತಾರೆ. ನೀವೂ ಕೂಡಾ ನಿಮ್ಮ ಪ್ರೀತಿಪಾತ್ರರಿಗೆ ಈ ಕೆಲವು ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಹಬ್ಬಕ್ಕೆ ಶುಭ ಹಾರೈಕೆಯನ್ನು ಕೋರಬಹುದು.

ಗಣೇಶ ಚತುರ್ಥಿಯ ಶುಭಹಾರೈಕೆಗಳು:

  • ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ ನಿರ್ವಿಘ್ನಂ ಕುರು ಮೇ ದೇವಾ ಸರ್ವ ಕರ್ಯೇಷು ಸರ್ವದಾ ನಿಮಗೂ ನಿಮ್ಮ ಕುಟುಂಬದವರಿಗೂ ಗಣೇಶ ಚತುರ್ಥಿಯ ಶುಭ ಹಾರೈಕೆಗಳು
  • ಏಕದಂತನ ಆಶೀರ್ವಾದವು ಸದಾ ನಿಮ್ಮ ಮೇಲೆ ಇರಲಿ, ನಿಮ್ಮ ಪ್ರತಿಯೊಂದು ಕಾರ್ಯದಲ್ಲೂ ನಿಮಗೆ ಯಶಸ್ವಿ ಸಿಗಲಿ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
  • ಓಂ ಗಂ ಗಣಪತಯೇ ನಮಃ … ನಿಮ್ಮ ಎಲ್ಲಾ ಕೆಲಸಗಳಲ್ಲಿ ಯಶಸ್ಸು ಸಿಗಲಿ ನಿಮ್ಮ ಎಲ್ಲಾ ಆಸೆಗಳು ಈಡೇರಲಿ, ನಿಮ್ಮ ಮನೆ ಮನದಲ್ಲಿ ಗಣೇಶ ನೆಲೆಸಲಿ ಗಣೇಶ ಚತುರ್ಥಿಯ ಶುಭಾಶಯಗಳು
  • ಈ ಗೌರಿ ಗಣೇಶ ಹಬ್ಬ ಸರ್ವರಿಗೂ ಸಮೃದ್ಧಿ, ಸಂಪತ್ತು, ಆಯುರಾರೋಗ್ಯ, ಸಂತೋಷವನ್ನು ತರಲಿ ಎಂದು ಹಾರೈಸುತ್ತೇನೆ.

ಇದನ್ನೂ ಓದಿ: ಗಣೇಶನ ನೈವೇದ್ಯಕ್ಕಾಗಿ ತಯಾರಿಸಿ ಸಾಂಪ್ರದಾಯಿಕ ಶೈಲಿಯ ಮೋದಕ

  • ಗಜಾನನಂ ಭೂತ ಗಾಣಾಧಿ ಸೇವಿತಂ ಕಪಿಥ ಜಂಬೋ ಫಲ ಸಾರ ಭಕ್ಷಿತಂ ಉಮಾಸುತಂ ಶೋಕ ವಿನಾಶಕಾರಣಂ ನಮಾಮಿ ವಿಘ್ನೇಶ ಪಾದ ಪಂಕಜಂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
  • ಗಣೇಶ ನಿಮಗೂ ನಿಮ್ಮ ಕುಟುಂಬದವರಿಗೂ ಆರೋಗ್ಯ ಸಂಪತ್ತು, ನೆಮ್ಮದಿಯನ್ನು ಕರುಣಿಸಲಿ ಗಣೇಶ ಚತುರ್ಥಿಯ ಶುಭಾಶಯಗಳು
  • ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ ಪ್ರಸನ್ನ ವದನಂ ಧ್ಯಾಯೇ ಸರ್ವ ವಿಘ್ನೋಪ ಶಾಂತಯೇ ಈ ಶುಭ ದಿನ ಏಕದಂತ ನಿಮ್ಮ ಎಲ್ಲಾ ನೋವು ಮತ್ತು ದುಃಖವನ್ನು ದೂರ ಮಾಡಿ ಸಂತೋಷ ಮತ್ತು ಸಮೃದ್ಧಿಯನ್ನು ಕರುಣಿಸಲಿ ಗಣೇಶ ಚತುರ್ಥಿಯ ಶುಭಾಶಯಗಳು
  • ವಿಘ್ನ ನಿವಾರಕನು ಎಲ್ಲರ ಬಾಳಲ್ಲೂ ಸುಖ, ಶಾಂತಿ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಗೌರಿ ಗಣೇಶ ಹಬ್ಬದ ಶುಭಾಶಯಗಳು
  • ಓಂ ಏಕದಂತಾಯ ವಿಧ್ಮಹೆ ವಕ್ರತುಂಡಾಯ ಧೀಮಹಿ ತನ್ನೋದಂತಿ ಪ್ರಚೋದಯತ್ ಗಣೇಶನ ಆಶೀರ್ವಾದ ಸದಾ ನಿಮ್ಮ ಮತ್ತು ನಿಮ್ಮ ಕುಟುಂಬದವರ ಮೇಲಿರಲಿ ಗಣೇಶ ಚತುರ್ಥಿಯ ಶುಭಾಶಯಗಳು
  • ವಿಘ್ನ ನಿವಾರಕ ಗಣೇಶ ನಿಮ್ಮ ಎಲ್ಲಾ ಕಷ್ಟಗಳನ್ನು ದೂರಮಾಡಲಿ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು
  • ಗೌರಿ ಪುತ್ರನ ಜೀವನ ಪಾಠವನ್ನು ನೀವು ಅಳವಡಿಸಿಕೊಳ್ಳುವ ಮೂಲಕ ನಿಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಗಣಪತಿಯ ಆಶೀರ್ವಾದ ಸದಾ ನಿಮ್ಮೊಂದಿಗಿರಲಿ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 6:10 pm, Sat, 16 September 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!