AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ಬೆಂಗಳೂರಿನಲ್ಲಿ ನಿಮ್ಮ ನೆರಳು ನಿಮಗೆ ಕಾಣಲ್ಲ!

ಜೀರೋ ಶ್ಯಾಡೋ ಡೇ: ಏಪ್ರಿಲ್ 24ರಂದು ಮಧ್ಯಾಹ್ನ 12:17ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಸಂಭವಿಸಲಿದೆ. ಸೂರ್ಯ ನೇರವಾಗಿ ತಲೆಯ ಮೇಲಿರುವುದರಿಂದ ನೆರಳು ಕಾಣಿಸುವುದಿಲ್ಲ. ಈ ವಿದ್ಯಮಾನ +23.5 ಮತ್ತು -23.5 ಅಕ್ಷಾಂಶಗಳ ನಡುವೆ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ. ಬೆಂಗಳೂರು, ಚೆನ್ನೈ, ಮಂಗಳೂರು ಮುಂತಾದ ನಗರಗಳಲ್ಲಿ ಇದು ಕಂಡುಬರುತ್ತದೆ. IIA ವಿಜ್ಞಾನಿಗಳು ಈ ಘಟನೆಯನ್ನು ವಿವರಿಸಿದ್ದಾರೆ.

Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ಬೆಂಗಳೂರಿನಲ್ಲಿ ನಿಮ್ಮ ನೆರಳು ನಿಮಗೆ ಕಾಣಲ್ಲ!
Witness Bangalore's Zero Shadow Day
ಅಕ್ಷತಾ ವರ್ಕಾಡಿ
|

Updated on:Apr 22, 2025 | 11:19 AM

Share

ಏಪ್ರಿಲ್ 24 ರಂದು ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ(Zero Shadow Day)  ಅಥವಾ ಲಹೈನಾ ನೂನ್ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ (IIA) ವಿಜ್ಞಾನಿಗಳು ದೃಢಪಡಿಸಿದ್ದಾರೆ.

IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ (SCOPE) ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ ಮೋಹನ್ ರಾಮಾನುಜಂ, ಸೂರ್ಯನು ಆಕಾಶದಲ್ಲಿ ತನ್ನ ಅತ್ಯುನ್ನತ ಬಿಂದುವನ್ನು ತಲುಪಿದಾಗ ಈ ವಿದ್ಯಮಾನ ಸಂಭವಿಸುತ್ತದೆ. ಪರಿಣಾಮವಾಗಿ, ನೆರಳುಗಳು ನೇರವಾಗಿ ವಸ್ತುಗಳ ಕೆಳಗೆ ಬೀಳುತ್ತವೆ ಮತ್ತು ಮಾನವ ಕಣ್ಣಿಗೆ ಅಗೋಚರವಾಗಿರುತ್ತವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣವಾಗಿರುವ ಶಿವ ದೇವಾಲಯ!

ವಾಸ್ತವವಾಗಿ, ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ (ASI) ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಎಲ್ಲಾ ಸ್ಥಳಗಳಿಗೆ ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ. ಶೂನ್ಯ ನೆರಳು ದಿನವು ಬೆಂಗಳೂರಿಗೆ ಮಾತ್ರ ವಿಶಿಷ್ಟವಲ್ಲ. ಇದು ಚೆನ್ನೈ ಮತ್ತು ಮಂಗಳೂರಿನಂತಹ ಸ್ಥಳಗಳನ್ನು ಒಳಗೊಂಡಂತೆ ಸಮಭಾಜಕ ವೃತ್ತ ಮತ್ತು ಕರ್ಕಾಟಕ ವೃತ್ತದ ನಡುವೆ ಇರುವ ಎಲ್ಲಾ ನಗರಗಳಲ್ಲಿ ನಡೆಯುತ್ತದೆ. ಬೆಂಗಳೂರಿನಲ್ಲಿ, ಈ ವಿದ್ಯಮಾನವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 22 April 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ