AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ಬೆಂಗಳೂರಿನಲ್ಲಿ ನಿಮ್ಮ ನೆರಳು ನಿಮಗೆ ಕಾಣಲ್ಲ!

ಜೀರೋ ಶ್ಯಾಡೋ ಡೇ: ಏಪ್ರಿಲ್ 24ರಂದು ಮಧ್ಯಾಹ್ನ 12:17ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಸಂಭವಿಸಲಿದೆ. ಸೂರ್ಯ ನೇರವಾಗಿ ತಲೆಯ ಮೇಲಿರುವುದರಿಂದ ನೆರಳು ಕಾಣಿಸುವುದಿಲ್ಲ. ಈ ವಿದ್ಯಮಾನ +23.5 ಮತ್ತು -23.5 ಅಕ್ಷಾಂಶಗಳ ನಡುವೆ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ. ಬೆಂಗಳೂರು, ಚೆನ್ನೈ, ಮಂಗಳೂರು ಮುಂತಾದ ನಗರಗಳಲ್ಲಿ ಇದು ಕಂಡುಬರುತ್ತದೆ. IIA ವಿಜ್ಞಾನಿಗಳು ಈ ಘಟನೆಯನ್ನು ವಿವರಿಸಿದ್ದಾರೆ.

Zero Shadow Day: ಏ. 24 ಶೂನ್ಯ ನೆರಳು ದಿನ; ಈ ದಿನ ಬೆಂಗಳೂರಿನಲ್ಲಿ ನಿಮ್ಮ ನೆರಳು ನಿಮಗೆ ಕಾಣಲ್ಲ!
Witness Bangalore's Zero Shadow Day
Follow us
ಅಕ್ಷತಾ ವರ್ಕಾಡಿ
|

Updated on:Apr 22, 2025 | 11:19 AM

ಏಪ್ರಿಲ್ 24 ರಂದು ಮಧ್ಯಾಹ್ನ 12.17 ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ(Zero Shadow Day)  ಅಥವಾ ಲಹೈನಾ ನೂನ್ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ (IIA) ವಿಜ್ಞಾನಿಗಳು ದೃಢಪಡಿಸಿದ್ದಾರೆ.

IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ (SCOPE) ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ ಮೋಹನ್ ರಾಮಾನುಜಂ, ಸೂರ್ಯನು ಆಕಾಶದಲ್ಲಿ ತನ್ನ ಅತ್ಯುನ್ನತ ಬಿಂದುವನ್ನು ತಲುಪಿದಾಗ ಈ ವಿದ್ಯಮಾನ ಸಂಭವಿಸುತ್ತದೆ. ಪರಿಣಾಮವಾಗಿ, ನೆರಳುಗಳು ನೇರವಾಗಿ ವಸ್ತುಗಳ ಕೆಳಗೆ ಬೀಳುತ್ತವೆ ಮತ್ತು ಮಾನವ ಕಣ್ಣಿಗೆ ಅಗೋಚರವಾಗಿರುತ್ತವೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣವಾಗಿರುವ ಶಿವ ದೇವಾಲಯ!

ವಾಸ್ತವವಾಗಿ, ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ (ASI) ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಎಲ್ಲಾ ಸ್ಥಳಗಳಿಗೆ ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ. ಶೂನ್ಯ ನೆರಳು ದಿನವು ಬೆಂಗಳೂರಿಗೆ ಮಾತ್ರ ವಿಶಿಷ್ಟವಲ್ಲ. ಇದು ಚೆನ್ನೈ ಮತ್ತು ಮಂಗಳೂರಿನಂತಹ ಸ್ಥಳಗಳನ್ನು ಒಳಗೊಂಡಂತೆ ಸಮಭಾಜಕ ವೃತ್ತ ಮತ್ತು ಕರ್ಕಾಟಕ ವೃತ್ತದ ನಡುವೆ ಇರುವ ಎಲ್ಲಾ ನಗರಗಳಲ್ಲಿ ನಡೆಯುತ್ತದೆ. ಬೆಂಗಳೂರಿನಲ್ಲಿ, ಈ ವಿದ್ಯಮಾನವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Tue, 22 April 25

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?