ಜೀವನಶೈಲಿ ಬದಲಾಯಿಸಿ ಹಾಗೂ ಮುಟ್ಟಿನ ಸಮಯದ ನೋವಿನಿಂದ ಮುಕ್ತಿ ಪಡೆಯಿರಿ

ಮುಟ್ಟಿನ ನೋವು, ವಾಕರಿಕೆ ಮತ್ತು ಉಬ್ಬುವಿಕೆಯನ್ನು ನಿಭಾಯಿಸಲು ಸಹಾಯ ಮಾಡುವ ಸಲಹೆಗಳು ಮತ್ತು ತಂತ್ರಗಳು ಇಲ್ಲಿವೆ. ಈ ಎಲ್ಲಾ ತೊಂದರೆಗಳಿಂದ ಮುಕ್ತಿ ಪಡೆಯಲು ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವುದು ಅಗತ್ಯವಾಗಿದೆ.

ಜೀವನಶೈಲಿ ಬದಲಾಯಿಸಿ ಹಾಗೂ ಮುಟ್ಟಿನ ಸಮಯದ ನೋವಿನಿಂದ ಮುಕ್ತಿ ಪಡೆಯಿರಿ
Women Health
Follow us
|

Updated on:May 27, 2023 | 4:15 PM

ಋತುಸ್ರಾವದ ಸಮಯದ ಅಸ್ವಸ್ಥತೆಯನ್ನು ನಿವಾರಿಸುವಲ್ಲಿ ಜೀವನಶೈಲಿಯ ಅಂಶಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಮುಟ್ಟಿನ ನೋವು, ವಾಕರಿಕೆ ಮತ್ತು ಉಬ್ಬುವಿಕೆಯನ್ನು ನಿಭಾಯಿಸಲು ಸಹಾಯ ಮಾಡುವ ಸಲಹೆಗಳು ಮತ್ತು ತಂತ್ರಗಳು ಇಲ್ಲಿವೆ. ನಿಮ್ಮ ಮಾಸಿಕ ಚಕ್ರದಲ್ಲಿ ನೀವು ಸೆಳೆತ, ವಾಕರಿಕೆ, ಉಬ್ಬುವುದು, ಮೂಡ್ ಸ್ವಿಂಗ್‌ಗಳು ಮತ್ತು ಕಿರಿಕಿರಿಯಿಂದ ಬಳಲುತ್ತಿರುವವರಾಗಿದ್ದರೆ, ಈ ಎಲ್ಲಾ ತೊಂದರೆಗಳಿಂದ ಮುಕ್ತಿ ಪಡೆಯಲು ನಿಮ್ಮ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವುದು ಅಗತ್ಯವಾಗಿದೆ.

ನಿಮ್ಮ ಜೀವನಶೈಲಿ ಹೀಗಿರಲಿ:

ಆರೋಗ್ಯಕರವಾಗಿ ತಿನ್ನಿರಿ:

ಆರೋಗ್ಯಕರ ಆಹಾರವು ಮುಟ್ಟಿಗೆ ಸಂಬಂಧಿಸಿದ ಹೋರಾಟಗಳನ್ನು ನಿಭಾಯಿಸಲು ನಿಮಗೆ ಸಹಾಯ ಮಾಡುತ್ತದೆ. ನಿಮ್ಮ ದೇಹವನ್ನು ಪೋಷಿಸಲು ಧಾನ್ಯ, ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ. ಬಾಳೆಹಣ್ಣು, ಕಿತ್ತಳೆ, ಕಲ್ಲಂಗಡಿ ಮತ್ತು ಕೋಸುಗಡ್ಡೆಯಂತಹ ಆಹಾರಗಳಿಗೆ ಮೊದಲ ಆದ್ಯತೆ ನೀಡಿ.

ಉಪ್ಪು ಮತ್ತು ಕಾಫಿಯನ್ನು ತಪ್ಪಿಸಿ:

ಕಡಿಮೆ ಉಪ್ಪಿನಾಂಶವಿರುವ ಆಹಾರಗಳನ್ನು ಸೇವಿಸಿ. ಜೊತೆಗೆ ಕೆಫೀನ್ ಸೇವನೆಯನ್ನು ಕಡಿಮೆ ಮಾಡಿ. ಋತುಸ್ರಾವದ ಅವಧಿಯಲ್ಲಿ ಹೆಚ್ಚಿನ ಕೆಫೀನ್​​​ ಸೇವನೆ ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಇದು ಉಬ್ಬುವುದು ಮತ್ತು ಉರಿಯೂತವನ್ನು ಉಂಟುಮಾಡಬಹುದು.

ಚೆನ್ನಾಗಿ ನಿದ್ರೆ ಮಾಡಿ:

ನಿಮ್ಮ ಋತುಸ್ರಾವದ ಸಮಯದಲ್ಲಿ ದೇಹಕ್ಕೆ ಸ್ವಲ್ಪ ಹೆಚ್ಚುವರಿ ವಿಶ್ರಾಂತಿ ನೀಡುವುದು ಮುಖ್ಯ. ಏಕೆಂದರೆ ಚೆನ್ನಾಗಿ ವಿಶ್ರಾಂತಿ ಪಡೆದ ದೇಹವು ನೋವನ್ನು ಉತ್ತಮವಾಗಿ ನಿಭಾಯಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವಿಶ್ವ ಮುಟ್ಟಿನ ನೈರ್ಮಲ್ಯ ದಿನ: ಪ್ರತೀ ಮಹಿಳೆ ತಿಳಿದುಕೊಳ್ಳಬೇಕಾದ ಸಂಗತಿಗಳು ಇಲ್ಲಿವೆ

ದೈನಂದಿನ ವ್ಯಾಯಾಮ:

ನಿಯಮಿತ ವ್ಯಾಯಾಮವು ಸಾಕಷ್ಟು ಮೂಡ್ ಸ್ವಿಂಗ್ಗಳು, ನೋವು ಮತ್ತು ಸೆಳೆತ ಮತ್ತು ಉಬ್ಬುವುದು ಮುಂತಾದ ರೋಗಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.

ಹೀಟಿಂಗ್ ಪ್ಯಾಡ್:

ಹೀಟಿಂಗ್​​​ ಪ್ಯಾಡ್​​​ ಬಳಸುವುದರಿಂದ ಇದು ರಕ್ತದ ಹರಿವನ್ನು ಸುಧಾರಿಸುತ್ತದೆ. ಇದರಿಂದಾಗಿ ಸೆಳೆತ, ನೋವು ಕೂಡ ಕಡಿಮೆಯಾಗಲು ಸಹಾಯಕವಾಗಿದೆ.

ಚಹಾ:

ಪುದೀನಾ, ಶುಂಠಿಗಳನ್ನು ಹಾಕಿ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ಮುಟ್ಟಿನ ಸಮಯದ ನೋವು ನಿವಾರಿಸಲು ಸಹಾಯಕವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:14 pm, Sat, 27 May 23

ತಾಜಾ ಸುದ್ದಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್