AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬ ಮಹಿಳೆಯೂ ತನ್ನ ಫೋನ್‌ನಲ್ಲಿ ಈ ನಂಬರ್‌ಗಳನ್ನು ಸೇವ್‌ ಮಾಡಿ ಇಟ್ಟುಕೊಳ್ಳಲೇಬೇಕು

ಪ್ರತಿದಿನ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲೆ ಅತ್ಯಾಚಾರ, ಹಿಂಸೆ, ಮಹಿಳೆಯರ ಮೇಲೆ ದೌರ್ಜನ್ಯ ಮುಂತಾದ ಘಟನೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ಸಹಾಯ ಒದಗಿಸಲು ಸರ್ಕಾರಗಳು ಕೆಲವೊಂದು ಸಹಾಯವಾಣಿ ಸಂಖ್ಯೆಗಳನ್ನು ತಂದಿವೆ. ಇಂತಹ ಕೆಲವೊಂದು ಸಹಾಯವಾಣಿ ಸಂಖ್ಯೆಯನ್ನು ಪ್ರತಿಯೊಬ್ಬ ಮಹಿಳೆಯೂ ಕೂಡ ತಪ್ಪದೆ ಸೇವ್‌ ಮಾಡಿ ಇಟ್ಟುಕೊಳ್ಳಬೇಕು.

ಪ್ರತಿಯೊಬ್ಬ ಮಹಿಳೆಯೂ ತನ್ನ ಫೋನ್‌ನಲ್ಲಿ ಈ ನಂಬರ್‌ಗಳನ್ನು ಸೇವ್‌ ಮಾಡಿ ಇಟ್ಟುಕೊಳ್ಳಲೇಬೇಕು
ಸಾಂದರ್ಭಿಕ ಚಿತ್ರ Image Credit source: Getty Images
Follow us
ಮಾಲಾಶ್ರೀ ಅಂಚನ್​
|

Updated on: Jun 09, 2025 | 6:11 PM

ನಮ್ಮ ಸುರಕ್ಷತೆ ಯಾವಾಗಲೂ ನಮ್ಮ ಮೊದಲ ಆದ್ಯತೆಯಾಗಿರಬೇಕು.  ಅದರಲ್ಲೂ ಮಹಿಳೆಯರು ಒಂಟಿಯಾಗಿರಲಿ ಅಥವಾ ಮನೆಯಲ್ಲಿರಲಿ ಅಥವಾ ಹೊರಗೆಲ್ಲೋ ಹೋಗುವಾಗ  ಹೆಚ್ಚಿನ ಸುರಕ್ಷತೆ (Women’s Safety) ವಹಿಸುವುದು ಅತ್ಯಗತ್ಯ. ಜೊತೆಗೆ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದಿಷ್ಟು ಸಹಾಯವಾಣಿ ಸಂಖ್ಯೆಗಳನ್ನು ಸಹ ಮಹಿಳೆಯರು ತಮ್ಮ ಮೊಬೈಲ್‌ನಲ್ಲಿ ಸೇವ್‌ ಮಾಡಿ ಇಟ್ಟುಕೊಳ್ಳುವುದು ಬಹಳ ಅವಶ್ಯಕ. ದೌರ್ಜನ್ಯ, ಅಪಾಯಗಳು ಎದುರಾದ ಸಂದರ್ಭದಲ್ಲಿ ಈ ಸಹಾಯವಾಣಿ (Women’s Safety Helpline) ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ತುರ್ತು ಸಹಾಯವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ, ಯಾವೆಲ್ಲಾ ಸಹಾಯವಾಣಿ ಸಂಖ್ಯೆಗಳನ್ನು ಸೇವ್‌ ಮಾಡಿ ಇಟ್ಟುಕೊಳ್ಳಬೇಕು ಎಂಬುದನ್ನು ನೋಡೋಣ ಬನ್ನಿ.

ಮಹಿಳೆಯರು ತಮ್ಮ ಮೊಬೈಲ್‌ನಲ್ಲಿ ಸೇವ್‌ ಮಾಡಿ ಇಟ್ಟುಕೊಳ್ಳಬೇಕಾದ ನಂಬರ್:

ಮಹಿಳೆಯರು ಅಪಾಯದಲ್ಲಿ ಇರುವಾಗ ಅಥವಾ ಕೆಲವೊಂದು ತುರ್ತು ಸಂದರ್ಭಗಳಲ್ಲಿ ಕೆಲವು ಟೋಲ್-ಫ್ರೀ ಸಂಖ್ಯೆಗಳು ನಿಮಗೆ ಸಹಾಯ ಮಾಡುತ್ತವೆ. ಆದಾಗ್ಯೂ, ಕೆಲವು ಜನರಿಗೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಸರಿಯಾದ ತಿಳುವಳಿಕೆ ಇರುವುದಿಲ್ಲ. ಸರ್ಕಾರವು ಟೋಲ್-ಫ್ರೀ ಮೂಲಕ ಸಹಾಯವನ್ನು ಒದಗಿಸುವ ಆ ಸಹಾಯವಾಣಿ ಸಂಖ್ಯೆಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

100- ಪೊಲೀಸ್ ಸಹಾಯಕ್ಕಾಗಿ:

ಇದನ್ನೂ ಓದಿ
Image
ಪರ್ಸ್‌ನಲ್ಲಿ ಹೆಂಡ್ತಿ ಫೋಟೋ ಇಟ್ಕೊಂಡ್ರೆ ಏನಾಗುತ್ತೆ ಗೊತ್ತಾ?
Image
ಗಂಡ ತನ್ನ ಹೆಂಡ್ತಿಯ ದೌರ್ಜನ್ಯದ ವಿರುದ್ಧ ಹೇಗೆ ಕಾನೂನಿನ ಸಹಾಯ ಪಡೆಯಬಹುದು?
Image
ಗಂಡ ಬೇರೆ ಹೆಣ್ಣಿನ ಆಕರ್ಷಣೆಗೆ ಒಳಗಾಗಬಾರದೆಂದರೆ, ಹೀಗೆ ಮಾಡಿ
Image
ಮೂರನೇ ಬಾರಿ ತಾಯಿಯಾಗುವವರಿಗೆ ಹೆರಿಗೆ ರಜೆ ಸಿಗೋದಿಲ್ವಾ?

ಪೊಲೀಸ್ ತುರ್ತು ಸೇವೆಗಳಿಗಾಗಿ 100 ಸಂಖ್ಯೆಯನ್ನು ಸೇವ್‌ ಮಾಡಿ ಇಟ್ಕೊಳ್ಳಿ. ಈ ಮೂಲಕ ಯಾವುದೇ ತುರ್ತು ಸಂದರ್ಭದಲ್ಲಿ, ನೀವು ಸಹಾಯಕ್ಕಾಗಿ ಪೊಲೀಸರನ್ನು ಕರೆಯಬಹುದು. ಅಪರಾಧ ಚಟುವಟಿಕೆ ನಡೆಯುತ್ತಿರುವಾಗ ಅಥವಾ ಸಂಭವಿಸಿದಾಗ ನೀವು ಈ ಸಂಖ್ಯೆಗೆ ಕರೆ ಮಾಡಬಹುದು. ನೀವು ಕರೆ ಮಾಡುವ ಯಾವುದೇ ಸ್ಥಳದಿಂದ ನಿಮ್ಮ ಮಾಹಿತಿಯನ್ನು ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ರವಾನಿಸಲಾಗುತ್ತದೆ.

1091- ಮಹಿಳಾ ಸಹಾಯವಾಣಿ:

1091 ಸಹಾಯವಾಣಿ ಸಂಖ್ಯೆಯು ಮಹಿಳೆಯರಿಗೆ ಸೇವೆಗಳನ್ನು ಒದಗಿಸುತ್ತದೆ.  ಮಹಿಳೆಯರು ಕಿರುಕುಳಕ್ಕೊಳಗಾದಾಗ, ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದಾಗ ಅಥವಾ ಯಾರಾದರೂ ನಿಮ್ಮನ್ನು ಹಿಂಬಾಲಿಸಿದಾಗ ಅಥವಾ ಬೆದರಿಕೆ ಹಾಕಿದಂತಹ ತುರ್ತು ಸಂದರ್ಭಗಳಲ್ಲಿ ಈ ಸಂಖ್ಯೆಗೆ ಕರೆ ಮಾಡಿ, ಸಹಾಯವನ್ನು ಪಡೆದುಕೊಳ್ಳಬಹುದು.

181 – ಮಹಿಳಾ ಸಹಾಯವಾಣಿ:

ರಾಷ್ಟ್ರೀಯ ಮಹಿಳಾ ಆಯೋಗದ (NCW) 181 ಸಹಾಯವಾಣಿ ಸಂಖ್ಯೆಯು ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸೆ ಮತ್ತು ಕಿರುಕುಳಕ್ಕೆ ಸ್ಪಂದಿಸುತ್ತದೆ ಮತ್ತು ಸಮಾಲೋಚನೆಯನ್ನು ಒದಗಿಸುತ್ತದೆ. ತುರ್ತು ಸಂದರ್ಭಗಳಲ್ಲಿ ಇದು ರಕ್ಷಣೆಯನ್ನು ಸಹ ಒದಗಿಸುತ್ತದೆ. ಇದು ಟೋಲ್-ಫ್ರೀ ಸಂಖ್ಯೆಯಾಗಿದ್ದು, ಹಿಂಸಾಚಾರಕ್ಕೆ ಒಳಗಾದಾಗ ಈ ಸಂಖ್ಯೆಗೆ ಕರೆ ಮಾಡಿ ಸಹಾಯವನ್ನು ಪಡೆಯಬಹುದು.

1098- ಮಕ್ಕಳ ಸಹಾಯವಾಣಿ: 

ಮಕ್ಕಳು ಅಪಾಯದಲ್ಲಿರುವಾಗ, ನೀವು 1098  ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದು. ಇದು ಮಕ್ಕಳಿಗೆ ಮಾತ್ರವಲ್ಲದೆ ಹದಿಹರೆಯದ ಹುಡುಗಿಯರಿಗೂ ಸಹಾಯವನ್ನು ಒದಗಿಸುತ್ತದೆ. ಇದು ಟೋಲ್-ಫ್ರೀ ತುರ್ತು ಸಹಾಯವಾಣಿ ಸಂಖ್ಯೆಯಾಗಿದೆ. ಇದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ನಡೆಸುತ್ತಿದೆ. ಮಕ್ಕಳ ವಿರುದ್ಧ ದೈಹಿಕ, ಲೈಂಗಿಕ ಅಥವಾ ದೌರ್ಜನ್ಯ ನಡೆದ ಸಂದರ್ಭದಲ್ಲಿ ನೀವು ಈ ಸಂಖ್ಯೆಗೆ ಕರೆ ಮಾಡಬಹುದು. ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಮಕ್ಕಳು ಕಾಣೆಯಾದ ಸಂದರ್ಭದಲ್ಲಿಯೂ ನೀವು ಈ ಸಂಖ್ಯೆಗೆ ಕರೆ ಮಾಡಬಹುದು.

ಇದನ್ನೂ ಓದಿ: ಹೆಂಡ್ತಿ ಗಂಡನಿಗೆ ಹೊಡೆದರೆ ಅದು ಕೌಟುಂಬಿಕ ಹಿಂಸಾಚಾರವೇ? ಈ ದೌರ್ಜನ್ಯವನ್ನು ಗಂಡ ಎದುರಿಸೋದು ಹೇಗೆ?

108 – ಆಂಬ್ಯುಲೆನ್ಸ್ ಸೇವೆಗಳು:

ನಿಮಗೆ ವೈದ್ಯಕೀಯ ಸೇವೆ ಬೇಕಾದಾಗ, ನೀವು 108 ಗೆ ಕರೆ ಮಾಡಬಹುದು. ಅಪಘಾತಗಳು ಅಥವಾ ತುರ್ತು ಸಂದರ್ಭಗಳಲ್ಲಿ ಈ ಸಂಖ್ಯೆಗೆ ಕರೆ ಮಾಡುವುದರಿಂದ ತಕ್ಷಣದಲ್ಲಿ ನಿಮಗೆ ವೈದ್ಯಕೀಯ ನೆರವು ಪಡೆಯಬಹುದು.

1090 – ಸೈಬರ್ ಕ್ರೈಮ್ ಸಹಾಯವಾಣಿ:

ಇದು ಸೈಬರ್ ಅಪರಾಧ ಸಹಾಯವಾಣಿ ಸಂಖ್ಯೆ. ಆನ್‌ಲೈನ್ ಕಿರುಕುಳ, ಆನ್‌ಲೈನ್ ನಿಂದನೆ, ಬ್ಲ್ಯಾಕ್‌ಮೇಲ್‌ನಂತಹ ದೂರುಗಳನ್ನು ಇಲ್ಲಿ ನೀವು ನೀಡಬಹುದು. ಇದರ ಜೊತೆಗೆ ಮಹಿಳೆಯರು  ಸರ್ಕಾರಗಳು ಒದಗಿಸುವ ಸುರಕ್ಷತಾ ಅಪ್ಲಿಕೇಶನ್‌ಗಳನ್ನು ಸಹ ಡೌನ್‌ಲೋಡ್‌ ಮಾಡಿ ಇಟ್ಟುಕೊಳ್ಳುವುದು ಅತೀ ಅವಶ್ಯಕ. ನೀವು ತುರ್ತು ಪರಿಸ್ಥಿತಿಯಲ್ಲಿದ್ದಾಗ ಇವು ಹೆಚ್ಚಿನ ಸಹಾಯಕ್ಕೆ ಬರುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!