AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Anti-Child Labor Day 2024: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ; ಮಕ್ಕಳನ್ನು ಸ್ಕೂಲಿಗೆ ಕಳುಹಿಸಿ, ಕೂಲಿಗಲ್ಲ

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹಾಗೂ ಈ ಅನಿಷ್ಟ ಪದ್ಧತಿಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜೂನ್‌ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Anti-Child Labor Day 2024: ವಿಶ್ವ ಬಾಲಕಾರ್ಮಿಕ ವಿರೋಧಿ ದಿನ; ಮಕ್ಕಳನ್ನು ಸ್ಕೂಲಿಗೆ ಕಳುಹಿಸಿ, ಕೂಲಿಗಲ್ಲ
World Anti-Child Labor Day 2024
ಸಾಯಿನಂದಾ
| Edited By: |

Updated on: Jun 11, 2024 | 6:35 PM

Share

ದೇಶದಲ್ಲಿ ಬಾಲಕಾರ್ಮಿಕರನ್ನು ನಿಷೇಧಿಸಲಾಗಿದ್ದು, ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ಬಾಲ ಕಾರ್ಮಿಕರೆನ್ನಲಾಗಿದೆ. ಆದರೆ ಇಂದಿಗೂ ಬಡತನವೆನ್ನುವುದು ಅನೇಕ ಮಕ್ಕಳನ್ನು ದುಡಿಯುವಂತೆ ಮಾಡುತ್ತಿದೆ. ಬಡತನ, ಪೋಷಕರ ನಿರ್ಲಕ್ಷ್ಯದ ಕಾರಣ ವಿಶ್ವದಾದ್ಯಂತ ಕೋಟ್ಯಾಂತರ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಹೀಗಾಗಿ ಓದುವ ವಯಸ್ಸಿನಲ್ಲಿ ದುಡಿಯಲು ಹೋಗಿ ಸುಂದರವಾದ ಬಾಲ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕುವ ಉದ್ದೇಶದಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಇತಿಹಾಸ:

ಬಾಲ್ಯ ಕಾರ್ಮಿಕತನವನ್ನು ನಿರ್ಮೂಲನೆ ಮಾಡುವ ಗುರಿಯೊಂದಿಗೆ ’ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ’ 2002ರಿಂದ ಪ್ರತಿವರ್ಷ ಜೂನ್ 12ನ್ನು ‘ಬಾಲಕಾರ್ಮಿಕ ವಿರೋಧಿ ದಿನ’ವನ್ನಾಗಿ ಆಚರಿಸಿತು. ಅಂದಿನಿಂದ ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನದಂದು ಸರ್ಕಾರಗಳಿಗೆ, ಜನರಿಗೆ ಬಾಲಕಾರ್ಮಿಕತನದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆಹಾರ ಕ್ರಮ ಹೇಗಿರಬೇಕು? ಇಲ್ಲಿದೆ ಸಿಂಪಲ್ ಟಿಪ್ಸ್

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಮಹತ್ವ ಹಾಗೂ ಆಚರಣೆ ಹೇಗೆ?

ಹದಿನಾಲ್ಕು ವರ್ಷದೊಳಗಿನ ವಯಸ್ಸಿನ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ. ಅದಲ್ಲದೇ, ಈ ಬಾಲ ಕಾರ್ಮಿಕರು ಪೌಷ್ಟಿಕ ಆಹಾರ ಕೊರತೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ದಿನವು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ, ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಮಕ್ಕಳಿಂದ ದುಡಿಸಿಕೊಳ್ಳುವುದರಿಂದ ಆಗುವ ದುಷ್ಪರಿಣಾಮದ ಬಗ್ಗೆ ಸರ್ಕಾರಿ, ಸರ್ಕಾರೇತ್ತರ ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ಜಾಥಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ