AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Arthritis Day 2021: ಸಂಧಿವಾತ ಸಮಸ್ಯೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಮಕ್ಕಳಲ್ಲಿಯೂ ಪರಿಣಾಮ ಬೀರುತ್ತದೆ ತಿಳಿದಿದೆಯೇ?

ವಿಶ್ವ ಸಂಧಿವಾತ ದಿನ 2021: ಸಂಧಿವಾತ ಸಮಸ್ಯೆ ನಿಯಂತ್ರಿಸಲು ಮಾರ್ಗಗಳು ಯಾವುವು ಎಂಬುದರ ಕುರಿತಾದ ಕೆಲವೊಂದಿಷ್ಟು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.

World Arthritis Day 2021: ಸಂಧಿವಾತ ಸಮಸ್ಯೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಮಕ್ಕಳಲ್ಲಿಯೂ ಪರಿಣಾಮ ಬೀರುತ್ತದೆ ತಿಳಿದಿದೆಯೇ?
TV9 Web
| Edited By: |

Updated on:Oct 12, 2021 | 11:15 AM

Share

ಸಂಧಿವಾತ ಸಮಸ್ಯೆಯು ಸಾಮಾನ್ಯವಾಗಿ ವೃದ್ದಾಪ್ಯದಲ್ಲಿ ಕಂಡು ಬರುವ ಸಮಸ್ಯೆ. ಆದರೆ ಇತ್ತೀಚೆಗೆ ಯುವಕರಲ್ಲಿ, ಮಕ್ಕಳಲ್ಲಿಯೂ ಸಹ ಕಂಡು ಬರುತ್ತಿದೆ. ಈ ಸ್ಥಿತಿ ಮಕ್ಕಳಲ್ಲಿ ಜುವೆನೈಲ್ ಇಡಿಯೋಪಥಿಕ್ ಆಥ್ರೈರ್ಟಿಸ್ (JIA) ಎಂದು ಕರೆಯಲಾಗುತ್ತದೆ. ಸಂಧಿವಾತ ಸಮಸ್ಯೆಯಲ್ಲಿ ಉರಿಯೂತ, ಸ್ನಾಯು ಸೆಳೆತ, ಕೀಲುಗಳಲ್ಲಿ ನೋವು ಸಮಸ್ಯೆ ಉಂಟಾಗುತ್ತದೆ. ಸಂಧಿವಾತ ಸಮಸ್ಯೆಗೆ ಶಾಶ್ವತವಾದ ಪರಿಹಾರ ಇಲ್ಲದಿದ್ದರೂ ಸಹ ಸೂಕ್ತ ಚಿಕಿತ್ಸೆ ನೀಡಿ ಸಮಸ್ಯೆಯನ್ನು ನಿಯಂತ್ರಿಸಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

ಸಂಧಿವಾತ ಸಮಸ್ಯೆ ಕೀಲುಗಳ ಉರಿಯೂತಕ್ಕೆ ಕಾರಣವಾಗಬಹುದು. ಈ ಸ್ಥಿತಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಕೆಲವು ಸಂದರ್ಭಗಳಲ್ಲಿ ಇದು ಅನುವಂಶೀಯ ಎಂದೂ ಹೇಳಲಾಗುತ್ತದೆ. ಜೆಐಎ ಹೊಂದಿರುವ ಮಕ್ಕಳು ಕಣ್ಣು, ಹೃದಯ, ಶ್ವಾಸಕೋಶ ಮತ್ತು ಕರುಳಿನ ಆರೋಗ್ಯ ಸಮಸ್ಯೆಯನ್ನು ಎದುರಿಸುವ ಸಾಧ್ಯತೆಗಳೂ ಹೆಚ್ಚಿರುತ್ತವೆ. ಕೀಲುಗಳಲ್ಲಿ ಮೂಳೆಗಳು ದುರ್ಬಲಗೊಳ್ಳುವ ಸಂಧಿವಾತ ಮತ್ತು ಕೀಲುಗಳಲ್ಲಿ ಉರಿಯೂತ, ನೋವು ಕಾಣಿಸಿಕೊಳ್ಳುವ ಸಂಧಿವಾತಗಳಿರುತ್ತವೆ. ಇದು ನಿಮ್ಮಗೆ ಕುಳಿತುಕೊಳ್ಳಲು, ಬಾಗಲು ಸಹ ಕಷ್ಟವಾಗುವಂತಹ ಸ್ಥಿತಿಯಾಗಿದೆ.

ಸಂಧಿವಾತ ಸಮಸ್ಯೆಯ ಹೊಂದಿರುವವರು ತೀವ್ರವಾದ ಕೀಲುಗಳ ನೋವನ್ನು ಅನುಭವಿಸುತ್ತಾರೆ. ಜತೆಗೆ ಹೃದಯ ಮತ್ತು ಶ್ವಾಸಕೋಶ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಜೆಐಎ ಹೊಂದಿರುವ ಮೊದಲ ಆರು ತಿಂಗಳಲ್ಲಿ ಕೀಲುಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಮಗುವಿನ ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುತ್ತವೆ.

ಸಂಧಿವಾತ ಸಮಸ್ಯೆಗೆ ಶಾಶ್ವತವಾದ ಪರಿಹಾರ ಇಲ್ಲದಿದ್ದರೂ ಸಹ ಸೂಕ್ತ ಚಿಕಿತ್ಸೆ ನೀಡಿ ಸಮಸ್ಯೆಯನ್ನು ನಿಯಂತ್ರಿಸಬಹುದು. ಸಂಧಿವಾತ ಸಮಸ್ಯೆಯು ಕೀಲುಗಳ ಮೇಲೆ ಪರಿಣಾಮ ಬೀರುವ ಒಂದು ಸಮಸ್ಯೆ. ಯಾವುದೇ ಕಾರಣಕ್ಕೂ ಕೀಲುಗಳ ನೋವು, ಊತ, ಉರಿಯೂತದಂಹ ಲಕ್ಷಣಗಳು ಕಂಡು ಬರುತ್ತಿದ್ದರೆ. ನಿರ್ಲಕ್ಷ್ಯ ಮಾಡದೇ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದನ್ನೂ ಓದಿ:

Health Tips: ಮೂಳೆ ಮತ್ತು ಕೀಲು ನೋವಿನ ಸಮಸ್ಯೆ ಇದೆಯೇ? ಈ ಆಹಾರ ಪದ್ಧತಿಯನ್ನು ಅನುಸರಿಸಿ

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ

Published On - 11:14 am, Tue, 12 October 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ