AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Arthritis Day 2021: ಸಂಧಿವಾತ ಸಮಸ್ಯೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಮಕ್ಕಳಲ್ಲಿಯೂ ಪರಿಣಾಮ ಬೀರುತ್ತದೆ ತಿಳಿದಿದೆಯೇ?

ವಿಶ್ವ ಸಂಧಿವಾತ ದಿನ 2021: ಸಂಧಿವಾತ ಸಮಸ್ಯೆ ನಿಯಂತ್ರಿಸಲು ಮಾರ್ಗಗಳು ಯಾವುವು ಎಂಬುದರ ಕುರಿತಾದ ಕೆಲವೊಂದಿಷ್ಟು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.

World Arthritis Day 2021: ಸಂಧಿವಾತ ಸಮಸ್ಯೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಮಕ್ಕಳಲ್ಲಿಯೂ ಪರಿಣಾಮ ಬೀರುತ್ತದೆ ತಿಳಿದಿದೆಯೇ?
TV9 Web
| Updated By: shruti hegde|

Updated on:Oct 12, 2021 | 11:15 AM

Share

ಸಂಧಿವಾತ ಸಮಸ್ಯೆಯು ಸಾಮಾನ್ಯವಾಗಿ ವೃದ್ದಾಪ್ಯದಲ್ಲಿ ಕಂಡು ಬರುವ ಸಮಸ್ಯೆ. ಆದರೆ ಇತ್ತೀಚೆಗೆ ಯುವಕರಲ್ಲಿ, ಮಕ್ಕಳಲ್ಲಿಯೂ ಸಹ ಕಂಡು ಬರುತ್ತಿದೆ. ಈ ಸ್ಥಿತಿ ಮಕ್ಕಳಲ್ಲಿ ಜುವೆನೈಲ್ ಇಡಿಯೋಪಥಿಕ್ ಆಥ್ರೈರ್ಟಿಸ್ (JIA) ಎಂದು ಕರೆಯಲಾಗುತ್ತದೆ. ಸಂಧಿವಾತ ಸಮಸ್ಯೆಯಲ್ಲಿ ಉರಿಯೂತ, ಸ್ನಾಯು ಸೆಳೆತ, ಕೀಲುಗಳಲ್ಲಿ ನೋವು ಸಮಸ್ಯೆ ಉಂಟಾಗುತ್ತದೆ. ಸಂಧಿವಾತ ಸಮಸ್ಯೆಗೆ ಶಾಶ್ವತವಾದ ಪರಿಹಾರ ಇಲ್ಲದಿದ್ದರೂ ಸಹ ಸೂಕ್ತ ಚಿಕಿತ್ಸೆ ನೀಡಿ ಸಮಸ್ಯೆಯನ್ನು ನಿಯಂತ್ರಿಸಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

ಸಂಧಿವಾತ ಸಮಸ್ಯೆ ಕೀಲುಗಳ ಉರಿಯೂತಕ್ಕೆ ಕಾರಣವಾಗಬಹುದು. ಈ ಸ್ಥಿತಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಕೆಲವು ಸಂದರ್ಭಗಳಲ್ಲಿ ಇದು ಅನುವಂಶೀಯ ಎಂದೂ ಹೇಳಲಾಗುತ್ತದೆ. ಜೆಐಎ ಹೊಂದಿರುವ ಮಕ್ಕಳು ಕಣ್ಣು, ಹೃದಯ, ಶ್ವಾಸಕೋಶ ಮತ್ತು ಕರುಳಿನ ಆರೋಗ್ಯ ಸಮಸ್ಯೆಯನ್ನು ಎದುರಿಸುವ ಸಾಧ್ಯತೆಗಳೂ ಹೆಚ್ಚಿರುತ್ತವೆ. ಕೀಲುಗಳಲ್ಲಿ ಮೂಳೆಗಳು ದುರ್ಬಲಗೊಳ್ಳುವ ಸಂಧಿವಾತ ಮತ್ತು ಕೀಲುಗಳಲ್ಲಿ ಉರಿಯೂತ, ನೋವು ಕಾಣಿಸಿಕೊಳ್ಳುವ ಸಂಧಿವಾತಗಳಿರುತ್ತವೆ. ಇದು ನಿಮ್ಮಗೆ ಕುಳಿತುಕೊಳ್ಳಲು, ಬಾಗಲು ಸಹ ಕಷ್ಟವಾಗುವಂತಹ ಸ್ಥಿತಿಯಾಗಿದೆ.

ಸಂಧಿವಾತ ಸಮಸ್ಯೆಯ ಹೊಂದಿರುವವರು ತೀವ್ರವಾದ ಕೀಲುಗಳ ನೋವನ್ನು ಅನುಭವಿಸುತ್ತಾರೆ. ಜತೆಗೆ ಹೃದಯ ಮತ್ತು ಶ್ವಾಸಕೋಶ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಜೆಐಎ ಹೊಂದಿರುವ ಮೊದಲ ಆರು ತಿಂಗಳಲ್ಲಿ ಕೀಲುಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಮಗುವಿನ ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುತ್ತವೆ.

ಸಂಧಿವಾತ ಸಮಸ್ಯೆಗೆ ಶಾಶ್ವತವಾದ ಪರಿಹಾರ ಇಲ್ಲದಿದ್ದರೂ ಸಹ ಸೂಕ್ತ ಚಿಕಿತ್ಸೆ ನೀಡಿ ಸಮಸ್ಯೆಯನ್ನು ನಿಯಂತ್ರಿಸಬಹುದು. ಸಂಧಿವಾತ ಸಮಸ್ಯೆಯು ಕೀಲುಗಳ ಮೇಲೆ ಪರಿಣಾಮ ಬೀರುವ ಒಂದು ಸಮಸ್ಯೆ. ಯಾವುದೇ ಕಾರಣಕ್ಕೂ ಕೀಲುಗಳ ನೋವು, ಊತ, ಉರಿಯೂತದಂಹ ಲಕ್ಷಣಗಳು ಕಂಡು ಬರುತ್ತಿದ್ದರೆ. ನಿರ್ಲಕ್ಷ್ಯ ಮಾಡದೇ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದನ್ನೂ ಓದಿ:

Health Tips: ಮೂಳೆ ಮತ್ತು ಕೀಲು ನೋವಿನ ಸಮಸ್ಯೆ ಇದೆಯೇ? ಈ ಆಹಾರ ಪದ್ಧತಿಯನ್ನು ಅನುಸರಿಸಿ

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ

Published On - 11:14 am, Tue, 12 October 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ