AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bee Day 2024: ಮಾನವ ಕುಲದ ಉಳಿವಿಗಾಗಿ, ಜೇನು ನೊಣಗಳನ್ನು ರಕ್ಷಿಸೋಣ!

ಜೇನಿನ ಸವಿಯನ್ನು ಸವಿದವನೇ ಬಲ್ಲ, ಅದರ ರುಚಿ ಹಾಗೂ ಸಿಹಿ ಎಷ್ಟಿದೆಂದು. ಜೇನು ಎಷ್ಟು ಸಿಹಿಯೋ ಜೇನುನೊಣಗಳ ಕಡಿತವು ಅಷ್ಟೇ ಅಪಾಯಕಾರಿ. ಆದರೆ ಈ ಜೇನುನೊಣಗಳ ಪ್ರಾಮುಖ್ಯತೆ, ಸುಸ್ಥಿರ ಅಭಿವೃದ್ಧಿಗೆ ಜೇನುನೊಣಗಳ ಕೊಡುಗೆಗಳು ಈ ಪರಿಸರ ಸ್ನೇಹಿ ಜೀವಿಗಳು ಎದುರಿಸುತ್ತಿರುವ ಜಾಗೃತಿ ಮೂಡಿಸಲು ಮೇ 20ರಂದು ವಿಶ್ವ ಜೇನುನೊಣ ದಿನವನ್ನಾಗಿ ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನವು ಆರಂಭವಾದದ್ದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

World Bee Day 2024: ಮಾನವ ಕುಲದ ಉಳಿವಿಗಾಗಿ, ಜೇನು ನೊಣಗಳನ್ನು ರಕ್ಷಿಸೋಣ!
World Bee Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 19, 2024 | 4:49 PM

ಜೇನು ನೊಣಗಳು ನೋಡಲು ಚಿಕ್ಕದಾಗಿರಬಹುದು. ಮನುಷ್ಯನ ಜೀವನದಲ್ಲಿ ಜೇನುಗಳ ಪಾತ್ರವು ಅಗಾಧವಾದದ್ದು. ಜೇನುನೊಣಗಳು ಜೇನನ್ನು ಮಾತ್ರ ಸವಿಯಲು ನೀಡುವುದಿಲ್ಲ. ಬದಲಾಗಿ ನಾವು ಸೇವಿಸುವ ಹಣ್ಣುಗಳು, ತರಕಾರಿಗಳು ಪರಾಗ ಸ್ಪರ್ಶದಿಂದ ಮಾತ್ರ ಸಾಧ್ಯವಾಗಿದೆ. ಆದರೆ ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಜೇನುನೊಣಗಳ ಸಂತತಿಯು ನಾಶವಾಗುತ್ತಿದೆ.

ವಿಶ್ವ ಜೇನುನೊಣ ದಿನದ ಇತಿಹಾಸ:

ಜೇನುಸಾಕಣೆಯ ಪ್ರವರ್ತಕ ಆಂಟನ್ ಜಾನ್ಸಾ 1734 ರಲ್ಲಿ ಸ್ಲೊವೇನಿಯಾದಲ್ಲಿ ಜನಿಸಿದರು. ಅವರ ಜನ್ಮದಿನದ ನೆನಪಿಗಾಗಿ ಪ್ರತಿ ವರ್ಷವು ವಿಶ್ವ ಜೇನುನೊಣ ದಿನವೆಂದು ಆಚರಿಸಲಾಗುತ್ತದೆ. ಆದರೆ ವಿಶ್ವ ಜೇನುನೊಣ ದಿನದ ಉದ್ದೇಶ, ಪರಿಸರ ವ್ಯವಸ್ಥೆಯಲ್ಲಿ ಜೇನುನೊಣಗಳ ಪಾತ್ರವನ್ನು ಅಂಗೀಕರಿಸುವುದು. ಹೀಗಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2017 ರ ಡಿಸೆಂಬರ್‌ನಲ್ಲಿ ವಿಶ್ವ ಜೇನುನೊಣ ದಿನಾಚರಣೆಯ ಪ್ರಸ್ತಾಪವನ್ನು ಅಂಗೀಕರಿಸಿದವು. 2018 ರ ಮೇ 20 ರಂದು ವಿಶ್ವ ಜೇನುನೊಣ ದಿನವನ್ನು ಮೊದಲ ಬಾರಿಗೆ ಆಚರಿಸಲಾಯಿತು.

ಇದನ್ನೂ ಓದಿ: ಅಡುಗೆ ಮನೆಯಲ್ಲಿ ನೊಣಗಳ ಕಾಟಕ್ಕೆ ಇದುವೇ ಪರಿಹಾರ

ವಿಶ್ವ ಜೇನುನೊಣ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಪರಿಸರ ವ್ಯವಸ್ಥೆಯಲ್ಲಿ ಜೇನು ನೊಣಗಳು ಮತ್ತು ಇತರೆ ಪರಾಗಸ್ಪರ್ಶಗಳ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸುವುದು. ಈ ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಈ ಜೇನು ನೊಣಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಸಮಾವೇಶಗಳು, ಸೆಮಿನಾರ್​ಗಳು, ಜೇನು ಉತ್ಸವಗಳು, ಪ್ರದರ್ಶನಗಳು ಹೀಗೆ ಮುಂತಾದ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್