AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!

ಪ್ರತಿ ವರ್ಷ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಹಾಗೂ ಇದರಿಂದಾಗುವ ಆರೋಗ್ಯ ಸಂಬಂಧಿತ ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!
ಸಾಯಿನಂದಾ
| Edited By: |

Updated on:Jun 03, 2024 | 12:39 PM

Share

ಬಡವರ ಪಾಲಿನ ಸಾರ್ವಕಾಲಿಕ ಮಿತ್ರನೇ ಈ ಬೈಸಿಕಲ್. ಆದರೆ ಇಂದು ಸೈಕಲ್ ಸ್ಥಾನವನ್ನು ಬೈಕ್ ನಂತಹ ವಾಹನಗಳು ತುಂಬಿಕೊಂಡಿವೆ. ಇವತ್ತಿಗೂ ಬಡವರು ಓಡಾಟಕ್ಕೆಂದು ಬಳಸುವ ಈ ಸೈಕಲ್, ಶ್ರೀಮಂತರ ಪಾಲಿಗೆ ವ್ಯಾಯಾಮದ ಸಾಧನವಾಗಿ ಬದಲಾಗಿದೆ. ಅದಲ್ಲದೇ, ಪರಿಸರಕ್ಕೆ ಸ್ನೇಹಿಯಾಗಿರುವ ಸೈಕಲ್ ನಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ. ಬೈಸಿಕಲ್ ನ್ನು ಹೆಚ್ಚು ಹೆಚ್ಚು ಬಳಸುವಂತೆ ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.

ವಿಶ್ವ ಬೈಸಿಕಲ್ ದಿನದ ಇತಿಹಾಸ

ವಿಶ್ವಸಂಸ್ಥೆಯು ಏಪ್ರಿಲ್ 2018ರಲ್ಲಿ ಪ್ರತಿ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವಾಗಿ ಆಚರಿಸಲಾಗುವುದು ಘೋಷಿಸಿತು. ಅಂದಿನಿಂದ ಪ್ರತಿ ವರ್ಷವು ವಿಶ್ವ ಬೈಸಿಕಲ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಬೈಸಿಕಲ್ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಶೂನ್ಯ-ಮಾಲಿನ್ಯದ ಸಾರಿಗೆಯಾಗಿರುವ ಈ ಬೈಸಿಕಲ್ ಆರೋಗ್ಯಕ್ಕೆ ಬಹು ಉಪಕಾರಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿಶ್ವಸಂಸ್ಥೆಯು ಸೈಕ್ಲಿಂಗ್ ನ ಅನೇಕ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಸೈಕ್ಲಿಂಗ್ ಮ್ಯಾರಥಾನ್ ಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಸೈಕ್ಲಿಂಗ್ ನಿಂದಾಗುವ ಆರೋಗ್ಯ ಪ್ರಯೋಜನಗಳು

* ನಿಯಮಿತವಾಗಿ ಸೈಕ್ಲಿಂಗ್ ಮಾಡುವುದರಿಂದ ತೂಕವನ್ನು ನಿಯಂತ್ರಿಸಬಹುದು ಹಾಗೂ ಇಳಿಕೆಗೂ ಸಹಕಾರಿಯಾಗಿದೆ.

* ಸೈಕ್ಲಿಂಗ್ ಹೃದಯ ಸ್ನಾಯುಗಳನ್ನು ಬಲಪಡಿಸುತ್ತದೆ. ರಕ್ತದ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುವುದಲ್ಲದೆ, ಕರುಳಿನ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ನಿಂದ ಖಿನ್ನತೆ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:35 pm, Mon, 3 June 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ