World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!

ಪ್ರತಿ ವರ್ಷ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಹಾಗೂ ಇದರಿಂದಾಗುವ ಆರೋಗ್ಯ ಸಂಬಂಧಿತ ಪ್ರಯೋಜನಗಳ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

World Bicycle Day 2024: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 03, 2024 | 12:39 PM

ಬಡವರ ಪಾಲಿನ ಸಾರ್ವಕಾಲಿಕ ಮಿತ್ರನೇ ಈ ಬೈಸಿಕಲ್. ಆದರೆ ಇಂದು ಸೈಕಲ್ ಸ್ಥಾನವನ್ನು ಬೈಕ್ ನಂತಹ ವಾಹನಗಳು ತುಂಬಿಕೊಂಡಿವೆ. ಇವತ್ತಿಗೂ ಬಡವರು ಓಡಾಟಕ್ಕೆಂದು ಬಳಸುವ ಈ ಸೈಕಲ್, ಶ್ರೀಮಂತರ ಪಾಲಿಗೆ ವ್ಯಾಯಾಮದ ಸಾಧನವಾಗಿ ಬದಲಾಗಿದೆ. ಅದಲ್ಲದೇ, ಪರಿಸರಕ್ಕೆ ಸ್ನೇಹಿಯಾಗಿರುವ ಸೈಕಲ್ ನಿಂದ ಆರೋಗ್ಯ ಪ್ರಯೋಜನಗಳು ಹಲವಾರಿದೆ. ಬೈಸಿಕಲ್ ನ್ನು ಹೆಚ್ಚು ಹೆಚ್ಚು ಬಳಸುವಂತೆ ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.

ವಿಶ್ವ ಬೈಸಿಕಲ್ ದಿನದ ಇತಿಹಾಸ

ವಿಶ್ವಸಂಸ್ಥೆಯು ಏಪ್ರಿಲ್ 2018ರಲ್ಲಿ ಪ್ರತಿ ಜೂನ್ 3 ರಂದು ವಿಶ್ವ ಬೈಸಿಕಲ್ ದಿನವಾಗಿ ಆಚರಿಸಲಾಗುವುದು ಘೋಷಿಸಿತು. ಅಂದಿನಿಂದ ಪ್ರತಿ ವರ್ಷವು ವಿಶ್ವ ಬೈಸಿಕಲ್ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಬೈಸಿಕಲ್ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಶೂನ್ಯ-ಮಾಲಿನ್ಯದ ಸಾರಿಗೆಯಾಗಿರುವ ಈ ಬೈಸಿಕಲ್ ಆರೋಗ್ಯಕ್ಕೆ ಬಹು ಉಪಕಾರಿಯಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ವಿಶ್ವಸಂಸ್ಥೆಯು ಸೈಕ್ಲಿಂಗ್ ನ ಅನೇಕ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಆರೋಗ್ಯಕರ ಚಟುವಟಿಕೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಸೈಕ್ಲಿಂಗ್ ಮ್ಯಾರಥಾನ್ ಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇದನ್ನೂ ಓದಿ: ಭಾರತೀಯ ಸೀರೆಯಲ್ಲಿ ಆಸ್ಟ್ರೇಲಿಯಾ ನೀರೆ; ಸೀರೆಯುಟ್ಟು ರ‍್ಯಾಂಪ್‌ ವಾಕ್​​ ಮಾಡಿದ ಮಿಸ್ ಆಸ್ಟ್ರೇಲಿಯಾ

ಸೈಕ್ಲಿಂಗ್ ನಿಂದಾಗುವ ಆರೋಗ್ಯ ಪ್ರಯೋಜನಗಳು

* ನಿಯಮಿತವಾಗಿ ಸೈಕ್ಲಿಂಗ್ ಮಾಡುವುದರಿಂದ ತೂಕವನ್ನು ನಿಯಂತ್ರಿಸಬಹುದು ಹಾಗೂ ಇಳಿಕೆಗೂ ಸಹಕಾರಿಯಾಗಿದೆ.

* ಸೈಕ್ಲಿಂಗ್ ಹೃದಯ ಸ್ನಾಯುಗಳನ್ನು ಬಲಪಡಿಸುತ್ತದೆ. ರಕ್ತದ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ಶ್ವಾಸಕೋಶದ ಕಾರ್ಯವನ್ನು ಸುಧಾರಿಸುವುದಲ್ಲದೆ, ಕರುಳಿನ ಕ್ಯಾನ್ಸರ್ ನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೈಕ್ಲಿಂಗ್ ನಿಂದ ಖಿನ್ನತೆ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:35 pm, Mon, 3 June 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ