AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Biodiversity Day 2025: ಜೀವವೈವಿಧ್ಯತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ; ವಿಶ್ವ ಜೀವವೈವಿಧ್ಯ ದಿನದ ಇತಿಹಾಸ ತಿಳಿಯಿರಿ

ಈ ಭೂಮಿಯ ಮೇಲೆ ರಾಶಿ ರಾಶಿ ಸಂಖ್ಯೆಯ ಜೀವವೈವಿಧ್ಯಗಳಿವೆ. ಆದರೆ ಇಂದು ಮಾನವನ ಸ್ವಾರ್ಥದ ಕಾರಣದಿಂದ ಅದೆಷ್ಟೋ ಜೀವರಾಶಿಗಳು, ಸಸ್ಯ ಸಂಕುಲಗಳು ಅಳಿದು ಹೋಗಿವೆ. ಇನ್ನೆಷ್ಟೋ ಜೀವವೈವಿಧ್ಯಗಳು ಅಳಿವಿನಂಚಿಗೆ ತಲುಪಿವೆ. ಪರಿಸರವನ್ನು ಸಮತೋಲನದಲ್ಲಿಡುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುವ ಈ ಜೀವವೈವಿಧ್ಯಗಳನ್ನು ಸಂರಕ್ಷಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 22 ರಂದು ವಿಶ್ವ ಜೀವವೈವಿಧ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

World Biodiversity Day 2025: ಜೀವವೈವಿಧ್ಯತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ; ವಿಶ್ವ ಜೀವವೈವಿಧ್ಯ ದಿನದ ಇತಿಹಾಸ ತಿಳಿಯಿರಿ
ವಿಶ್ವ ಜೀವವೈವಿಧ್ಯ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 21, 2025 | 8:15 PM

Share

ಪ್ರಕೃತಿ ಜೀವವೈವಿಧ್ಯತೆಯ (Biodiversity) ತಾಣವಾಗಿದೆ. ಇಲ್ಲಿ ಚಿಕ್ಕ ಚಿಕ್ಕ ಬ್ಯಾಕ್ಟೀರಿಯಾಗಳಂತಹ ಸೂಕ್ಷ್ಮ ಜೀವಿಗಳಿಂದ ಹಿಡಿದು ದೊಡ್ಡ ತಿಮಿಂಗಿಲಗಳವರೆಗೆ ಅನೇಕಾರು ಜೀವಿಗಳಿವೆ ಹಾಗೂ ಸಸ್ಯರಾಶಿಗಳಿವೆ. ಈ ಜೀವವೈವಿಧ್ಯ ಪರಿಸರ ವ್ಯವಸ್ಥೆಯನ್ನು ಸಮತೋಲದಲ್ಲಿಡುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಆದರೆ ಇಂದು ಅರಣ್ಯ ನಾಶ, ನಗರೀಕರಣ, ಹವಾಮಾನ ಬದಲಾವಣೆ ಸೇರಿದಂತೆ ಮಾನವನ ಸ್ವಾರ್ಥದಿಂದಾಗಿ ಜೀವವೈವಿಧ್ಯ ಅಪಾಯದಲ್ಲಿದೆ. ಅದೆಷ್ಟೋ ಪ್ರಾಣಿ-ಪಕ್ಷಿಗಳು, ಜೀವಿಗಳು, ಮರಗಿಡಗಳು ಅಳಿವಿನಂಚಿಗೆ ತಲುಪಿವೆ. ಹಾಗಾಗಿ ಜೀವವೈವಿಧ್ಯಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವ ಜೀವವೈವಿಧ್ಯ (World Biodiversity Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

 ವಿಶ್ವ ಜೀವವೈವಿಧ್ಯತೆ ದಿನದ ಇತಿಹಾಸ:

1992 ರಲ್ಲಿ ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಭೂ ಶೃಂಗಸಭೆಯಲ್ಲಿ ಜೀವವೈವಿಧ್ಯತೆಯ ದಿನವನ್ನು ಆಚರಿಸಲುವ ಪರಿಕಲ್ಪನೆಯನ್ನು ತರಲಾಯಿತು. 1993 ಮೊದಲ ಬಾರಿಗೆ ಈ ದಿನವನ್ನು ಡಿಸೆಂಬರ್‌ 29 ರಂದು ಆಚರಿಸಲಾಯಿತು. ನಂತರ 2000 ನೇ ಇಸವಿಯಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಈ ದಿನವನ್ನು ಮೇ 22 ರಂದು ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ವಿಶ್ವ ಜೀವವೈವಿಧ್ಯ ದಿನವನ್ನು ಮೇ 22 ರಂದು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಇಂದು ಅಂತಾರಾಷ್ಟ್ರೀಯ ಚಹಾ ದಿನ; ಈ ದಿನದ ಆಚರಣೆಯ ಉದ್ದೇಶವನ್ನು ತಿಳಿಯಿರಿ

ಇದನ್ನೂ ಓದಿ
Image
ಅಂತಾರಾಷ್ಟ್ರೀಯ ಚಹಾ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?
Image
ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವುದ ಹಿಂದಿನ ಕಾರಣವೇನು?
Image
ಸಾರಾ ತೆಂಡೂಲ್ಕರ್ ಕೇಶ ಸೌಂದರ್ಯದ ರಹಸ್ಯ ಏನು ಗೊತ್ತಾ?
Image
ಪ್ರತಿದಿನ ಈ 6 ಆಹಾರ ಸೇವನೆ ಮಾಡಿ, ಹೃದಯಕ್ಕೆ ರಕ್ಷಣೆಯಾಗಿ ನಿಲ್ಲುತ್ತದೆ

ವಿಶ್ವ ಜೀವವೈವಿಧ್ಯತೆ ದಿನದ ಮಹತ್ವ:

ಸೂಕ್ಷ್ಮ ಜೀವಿಗಳು, ಪ್ರಾನಿಪಕ್ಷಿಗಳು, ಸಸ್ಯರಾಶಿಗಳು ಪರಿಸರ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ. ಆದರೆ ಇಂದು ಮಾನವನ ಸ್ವಾರ್ಥದಿಂದ ಅದೆಷ್ಟೋ ಜೀವರಾಶಿಗಳು ಅಳಿವಿನಂಚಿಗೆ ತಲುಪಿವೆ. ಇವುಗಳ ಸಂರಕ್ಷಣೆಯ ಉದ್ದೇಶವನ್ನಿಟ್ಟುಕೊಂಡು ವಿಶ್ವ ಜೀವವೈವಿಧ್ಯ ದಿನವನ್ನು ಆಚರಿಸಲಾಗುತ್ತದೆ.  ವಿಶ್ವ ಜೀವವೈವಿಧ್ಯತೆಯ ದಿನವು ಈ ಭೂಮಿಯಲ್ಲಿರುವ ಜೀವವೈವಿಧ್ಯ ರಕ್ಷಣೆಗೆ ಆದ್ಯತೆ ನೀಡುವ ಮಹತ್ವದ ಜ್ಞಾಪನೆಯಾಗಿದೆ. ಈ ದಿನ ಜೀವವೈವಿಧ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದನ್ನು ರಕ್ಷಿಸಲು ಕ್ರಮ ಕೈಗೊಳ್ಳಲು ಒಂದು ಅವಕಾಶವಾಗಿದೆ ಅಂತಾನೇ ಹೇಳಬಹುದು.

ಈ ದಿನದಂದು ಹಲವು ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಮತ್ತು ಅವುಗಳ ಮೂಲಕ ಜನರಿಗೆ ಜೀವವೈವಿಧ್ಯ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.  ಇದಲ್ಲದೆ ಮಾಂಸ ಮತ್ತು ಡೈರಿ ಉತ್ಪನ್ನಗಳ ಸೇವನೆಯನ್ನು ಕಡಿಮೆ ಮಾಡುವ ಮೂಲಕ, ಅರಣ್ಯನಾಶವನ್ನು ನಿಲ್ಲಿಸುವ ಮೂಲಕ, ಮಾಲಿನ್ಯಗಳನ್ನು ಕಡಿಮೆ ಮಾಡುವ ಮೂಲಕ ಮತ್ತು ಮರುಬಳಕೆಯ ಉತ್ಪನ್ನಗಳನ್ನು ಬಳಸುವ ಮೂಲಕ ನಾವು ಜೀವವೈವಿಧ್ಯತೆಯ ರಕ್ಷಣೆಗೆ ಸಣ್ಣದಾದ ಕೊಡುಗೆಯನ್ನು ನೀಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ