AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ತೆಂಗು ದಿನ; ತೆಂಗಿನ ಕುರಿತಾಗಿ ತಿಳಿಯಲೇಬೇಕಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ

ವಿಶ್ವ ತೆಂಗು ದಿನ 2021: ಪ್ರತಿನಿತ್ಯದ ಅಡುಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ತೆಂಗಿನ ಕುರಿತಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ.

ವಿಶ್ವ ತೆಂಗು ದಿನ; ತೆಂಗಿನ ಕುರಿತಾಗಿ ತಿಳಿಯಲೇಬೇಕಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ
ವಿಶ್ವ ತೆಂಗು ದಿನ
TV9 Web
| Updated By: shruti hegde|

Updated on:Sep 02, 2021 | 10:00 AM

Share

ಕಲ್ಪ ವೃಕ್ಷವೆಂದು ಪೂಜೆ ಮಾಡುವ ತೆಂಗಿನ ಮರದ ದಿನವಿದು. ಇಂದು ವಿಶ್ವದಾದ್ಯಂತ ತೆಂಗು ದಿನವನ್ನು ಆಚರಿಸಲಾಗುತ್ತಿದೆ. ಪ್ರತಿ ಮನೆಗಳಲ್ಲಿ ದೇವರೆಂದು ಪೂಜಿಸುವ ಕಲ್ಪವೃಕ್ಷ ಜತೆಗೆ ಹಲವಾರು ಖಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಿರುವ ತೆಂಗಿನ ಕಾಯಿ ಹಾಗೂ ವಿವಿಧ ಖಾದ್ಯಗಳನ್ನು ಮಾಡಿ ರುಚಿ ಸವಿಯುತ್ತಿರುವ ತೆಂಗಿನ ಬಗೆಗಿನ ಕೆಲವೊಂದಿಷ್ಟು ಮಾಹಿತಿಗಳನ್ನು ಇಂದು ತಿಳಿಯಲೇ ಬೇಕು. ಪ್ರತಿನಿತ್ಯದ ಅಡುಗೆಯಲ್ಲಿ ಪ್ರಮುಖ ಪಾತ್ರವಹಿಸಿರುವ ತೆಂಗಿನ ಕುರಿತಾದ ಕೆಲವೊಂದಿಷ್ಟು ಕುತೂಹಲಕರ ಸಂಗತಿಗಳು ಇಲ್ಲಿವೆ.

ಭಾರತದಲ್ಲಿ ಅಡಿಕೆ, ಬಾಳೆ, ಏಲಕ್ಕಿ, ಕಾಳು ಮೆಣಸು ಜತೆಗೆ ತೆಂಗು ಕೂಡಾ ಕೃಷಿಯ ಭಾಗದಲ್ಲಿ ಒಂದು. ಕೆಲವೆಡೆ ತೆಂಗು ಜನರ ಜೀವನಾಧಾರವಾಗಿದೆ. ಅದೆಷ್ಟೋ ರೈತರ ಜೀವನದ ಪ್ರಮುಖ ಬೆಳೆಯಾಗಿದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿರುವ ತೆಂಗು ಕೃಷಿಗೊಂದೇ ಅಲ್ಲ ದೇವರೆಂದೂ ಪೂಜಿಸಲಾಗುತ್ತದೆ. ಪ್ರತಿನಿತ್ಯ ಬಳಸುವ ತೆಂಗಿನ ಕುರಿತಾಗಿ ತಿಳಿಯಬೇಕಾದದ್ದು ಅನೇಕ ಸಂಗತಿಗಳಿವೆ. ಅವುಗಳಲ್ಲಿ ಕೆಲವೊಂದಿಷ್ಟು ಕುತೂಹಲ ಕೆರಳಿಸುವ ಸಂಗತಿಗಳು ಈ ಕೆಳಗಿನಂತಿವೆ.

ಇತಿಹಾಸ 2009ರಲ್ಲಿ ಮೊದಲಿಗೆ ಏಷ್ಯಾ ಫೆಸಿಫಿಕ್ ತೆಂಗಿನ ಸಮುದಾಯ ಈ ದಿನವನ್ನು ಆಚರಿಸಿತು. ಏಷ್ಯಾ ಪೆಸಿಫಿಕ್​ಗಾಗಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ಸಹಯೋಗದೊಂದಿಗೆ ಈ ದಿನವನ್ನು ಸಪ್ಟೆಂಬರ್ 2ರಂದು ಆಚರಿಸಲಾಯಿತು. ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ನಂತರ ಭಾರತದಲ್ಲಿಯೇ ಅತಿ ಹೆಚ್ಚು ತೆಂಗಿನಕಾಯಿ ಬೆಳೆಯಲಾಗುತ್ತದೆ. ಹಾಗಾಗಿ ಭಾರತ ಅತ್ಯಂತ ಸಂಭ್ರಮದಿಂದ ಈ ದಿನವನ್ನು ಆಚರಿಸುತ್ತದೆ. ತೆಂಗು ಅಭಿವೃದ್ಧಿ ಮಂಡಳಿಯು ಇದನ್ನು ಕೇರಳ, ತಮಿಳುನಾಡು, ಕರ್ನಾಟಕ, ಗೋವಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಒಡಿಶಾ ಮೊದಲಾದ ವಿವಿಧ ರಾಜ್ಯಗಳಲ್ಲಿ ಪ್ರಚಾರ ಮಾಡುತ್ತದೆ.

ಈ ವರ್ಷದ ಥೀಮ್ ‘ಕೊವಿಡ್ 19 ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ವಿಶ್ವ ತೆಂಗಿನ ದಿನಾಚರಣೆಯ ದಿನದಂದು ಕೊವಿಡ್ 19 ಸಾಂಕ್ರಾಮಿಕ ಮತ್ತು ಸುರಕ್ಷಿತ ಮತ್ತು ಸುಸ್ಥಿರ ತೆಂಗಿನ ಸಮುದಾಯವನ್ನು ನಿರ್ಮಿಸುವುದು’

ಕುತೂಹಲಕರ ಸಂಗತಿಗಳು ಒಂದು ತೆಂಗಿನ ಮರವು ಪ್ರತೀ ವರ್ಷ ಸುಮಾರು 100 ತೆಂಗಿನ ಕಾಯಿಯನ್ನು ನೀಡುತ್ತದೆ

ತೆಂಗಿನ ಕಾಯಿ ಹಣ್ಣಾಗಳು ಅಥವಾ ಸಂಪೂರ್ಣವಾಗಿ ಬೆಳೆಯಲು ಒಂದು ವರ್ಷ ಸಮಯಬೇಕು

ತೆಂಗಿನಕಾಯಿ ಎಂಬ ಪದವು ಪೊರ್ಚುಗೀಸ್ ಪದವಾದ ಕೊಕೊ ಎಂಬ ಪದದಿಂದ ಹುಟ್ಟಿಕೊಂಡಿದೆ

ಪ್ರಪಂಚದಲ್ಲಿ ಶೇ.90ರಷ್ಟು ತೆಂಗಿನ ಉತ್ಪಾದನೆ ಏಷ್ಯಾದಿಂದ ಬರುತ್ತದೆ

ಇಂಡೋನೇಷ್ಯಾ, ಫಿಲಿಪೈನ್ಸ್, ಬ್ರೆಜಿಲ್ ಮತ್ತು ಶ್ರೀಲಂಕಾದೊಂದಿಗೆ ಭಾರತವು ವಿಶ್ವದ ಅತಿದೊಡ್ಡ ರಫ್ತುದಾರರಲ್ಲಿ ಒಂದಾಗಿದೆ

ಇದನ್ನೂ ಓದಿ:

Egg shells benefits: ಮೊಟ್ಟೆಯ ಸಿಪ್ಪೆಗಳನ್ನು ಎಸೆಯುತ್ತಿದ್ದೀರಾ? ಹಾಗಿದ್ದರೆ ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ

Ginger Powder: ಶುಂಠಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

(world coconut day 2021 know about history important and interesting facts about coconut)

Published On - 9:53 am, Thu, 2 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ