World Day To Combat Desertification and Drought 2023: ಅವಳ ಭೂಮಿ ಅವಳ ಹಕ್ಕು! ಈ ಬಗ್ಗೆ ನಿಮಗೆಷ್ಟು ಗೊತ್ತು?

ಮರುಭೂಮೀಕರಣವನ್ನು ಎದುರಿಸುವ ಅಂತರಾಷ್ಟ್ರೀಯ ಪ್ರಯತ್ನಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್ 17 ರಂದು ಮರುಭೂಮೀಕರಣ ಮತ್ತು ಬರವನ್ನು ಎದುರಿಸುವ ವಿಶ್ವ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

World Day To Combat Desertification and Drought 2023: ಅವಳ ಭೂಮಿ ಅವಳ ಹಕ್ಕು! ಈ ಬಗ್ಗೆ ನಿಮಗೆಷ್ಟು ಗೊತ್ತು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 17, 2023 | 1:01 PM

ದಿನದಿಂದ ದಿನಕ್ಕೆ ಹವಾಮಾನ ವೈಪರೀತ್ಯದಿಂದ ನಮ್ಮ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮ ಒಂದೆರಡಲ್ಲ. ಆದ್ದರಿಂದ, ಜನಗಳಿಗೆ ಬರ ಮತ್ತು ಮರುಭೂಮೀಕರಣದಂತಹ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ಹಾಗಾಗಿ ಪ್ರತಿ ವರ್ಷ ಜೂನ್ 17 ರಂದು, ವಿಶ್ವಸಂಸ್ಥೆಯು ಮರುಭೂಮೀಕರಣ ಮತ್ತು ಬರಗಾಲವನ್ನು ಎದುರಿಸುವ ವಿಶ್ವ ದಿನವೆಂದು ಗುರುತಿಸುತ್ತದೆ. ಹಾನಿಗೊಳಗಾದ ಭೂಮಿಯನ್ನು ಪುನಃಸ್ಥಾಪಿಸುವುದು, ಮರುಭೂಮೀಕರಣವನ್ನು ತಡೆಯುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಕ್ಷೀಣಿಸಿದ ಭೂಮಿಯನ್ನು ಫಲವತ್ತಾದ ಮಣ್ಣಾಗಿ ಪರಿವರ್ತಿಸಲು ಈ ದಿನವು ಗಮನಹರಿಸುತ್ತದೆ. ಪರಿಸರ ವ್ಯವಸ್ಥೆಯ ಮತ್ತಷ್ಟು ನಾಶವನ್ನು ತಡೆಯಲು ಕಾರ್ಯಸಾಧ್ಯವಾದ ವಿಧಾನಗಳನ್ನು ಕಂಡುಹಿಡಿಯುವುದು ಇದರ ಗುರಿಯಾಗಿದೆ. ಇದು ಆದಾಯವನ್ನು ಹೆಚ್ಚಿಸುತ್ತದೆ, ಆರ್ಥಿಕ ಸ್ಥಿತಿ ಸ್ಥಾಪಕತ್ವವನ್ನು ಹೆಚ್ಚಿಸುತ್ತದೆ ಮತ್ತು ಸಮುದಾಯಕ್ಕೆ ಆಹಾರ ಭದ್ರತೆಯನ್ನು ನೀಡುತ್ತದೆ.

ಮರುಭೂಮೀಕರಣ ಮತ್ತು ಬರವನ್ನು ಎದುರಿಸಲು ವಿಶ್ವ ದಿನದ ಇತಿಹಾಸ

ಮರುಭೂಮೀಕರಣ ಮತ್ತು ಬರದ ಪರಿಣಾಮಗಳನ್ನು ಎದುರಿಸುವ ಬಗ್ಗೆ ಜಾಗೃತಿ ಮೂಡಿಸಲು 1995 ರಿಂದ ಈ ದಿನವನ್ನು ಆಚರಿಸಲಾಗುತ್ತಿದೆ. 1994 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 17 ಅನ್ನು “ಮರುಭೂಮೀಕರಣ ಮತ್ತು ಬರಗಾಲವನ್ನು ಎದುರಿಸುವ ವಿಶ್ವ ದಿನ” ಎಂದು ಘೋಷಿಸಿತು. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ಪರಿಸರ ಅವನತಿಯನ್ನು ಹಾಗೂ ಮರುಭೂಮೀಕರಣವನ್ನು ಎದುರಿಸಲು ವಿಶ್ವಸಂಸ್ಥೆಯ ಸಮಾವೇಶವನ್ನು (ಯುಎನ್ಸಿಸಿಡಿ) ರಚಿಸಲಾಯಿತು. ಮರುಭೂಮೀಕರಣವನ್ನು ನಿಲ್ಲಿಸುವ ಮಾರ್ಗಗಳ ಬಗ್ಗೆ ಸಾರ್ವಜನಿಕರಿಗೆ ತಿಳಿ ಹೇಳುವುದು ಸಮಾವೇಶದ ಉದ್ದೇಶವಾಗಿತ್ತು.

ಇದನ್ನೂ ಓದಿ: World Day of the Sick: ವಿಶ್ವ ಅಸ್ವಸ್ಥರ ದಿನದ ಇತಿಹಾಸ ಮತ್ತು ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಮರುಭೂಮೀಕರಣ ಮತ್ತು ಬರವನ್ನು ಎದುರಿಸಲು ವಿಶ್ವ ದಿನ 2023: ಥೀಮ್

ಈ ವರ್ಷದ ಥೀಮ್ ‘ಅವಳ ಭೂಮಿ. ಅವಳ ಹಕ್ಕುಗಳು’. (‘Her Land. Her Rights.’) ಅಂದರೆ ಇದು ಲಿಂಗ ಸಮಾನತೆ ಮತ್ತು ಭೂ ಅವನತಿ ಬಗ್ಗೆ ತಟಸ್ಥತೆಯನ್ನು ಸಾಧಿಸಲು ನಿರ್ಣಾಯಕವಾಗಿದೆ. ಜೊತೆಗೆ ಇದು ಹಲವಾರು ಇತರ ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಗೂ ಕೊಡುಗೆ ನೀಡಲಿದೆ. ವಿಶ್ವಾದ್ಯಂತ ಮಹಿಳೆಯರು ಮತ್ತು ಬಾಲಕಿಯರಿಗೆ ಭೂ ಹಕ್ಕುಗಳ ಪ್ರಗತಿಯನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ.

ಮಹತ್ವ

ಯುಎನ್ಸಿಸಿಡಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಇಬ್ರಾಹಿಂ ಥಿಯಾವ್, ಭೂಮಿಯ ಅವನತಿಯನ್ನು ಕಡಿಮೆ ಮಾಡುವ ಮತ್ತು ಹಿಮ್ಮೆಟ್ಟಿಸುವ ಜಾಗತಿಕ ಪ್ರಯತ್ನಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ ಬಹುಪಾಲು ದೇಶಗಳಲ್ಲಿ, ಮಹಿಳೆಯರು ಭೂಮಿಯ ಮೇಲೆ ಅಸಮಾನತೆಯಿಂದ ಸೀಮಿತ ಪ್ರವೇಶವನ್ನು ಹೊಂದಿದ್ದಾರೆ. ಲಿಂಗ ಸಮಾನತೆ ಇಲ್ಲದೆ ನಾವು ಭೂ ಅವನತಿ ತಟಸ್ಥತೆಯನ್ನು ಸಾಧಿಸಲು ಸಾಧ್ಯವಿಲ್ಲ, ಮತ್ತು ಅರ್ಧದಷ್ಟು ಜನಸಂಖ್ಯೆಯನ್ನು ಅವರ ಲಿಂಗದ ಕಾರಣದಿಂದಾಗಿ ಭೂ ನಿರ್ವಹಣಾ ನಿರ್ಧಾರಗಳಿಂದ ಹೊರಗಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಭೂಮಿಯಲ್ಲಿ ಮಹಿಳೆಯರು ಗಮನಾರ್ಹ ಪಾಲನ್ನು ಹೊಂದಿದ್ದರೂ, ಮಹಿಳೆಯರಿಗೆ ಅದರ ಮೇಲೆ ಆಗಾಗ ಅಧಿಕಾರವಿಲ್ಲ ಎಂದು ಹೇಳಲಾಗುತ್ತದೆ. ಪ್ರಪಂಚದ ಯಾವುದೇ ಭಾಗದಲ್ಲಿ ಭೂ ಹಕ್ಕುಗಳನ್ನು ಪಡೆಯುವಲ್ಲಿ ಅವರು ಅಪಾರ ಅಡೆತಡೆಗಳನ್ನು ಎದುರಿಸುತ್ತಾರೆ, ಇದು ಅಭಿವೃದ್ಧಿ ಹೊಂದಲು ಅವರ ಸಾಮರ್ಥ್ಯವನ್ನು ಮಿತಿಗೊಳಿಸುತ್ತದೆ. ಪರಿಸರವು ಕ್ಷೀಣಿಸಿದಾಗ ಮತ್ತು ನೀರಿನ ಕೊರತೆಯಾದಾಗ ಮಹಿಳೆಯರು ಹೆಚ್ಚಾಗಿ ತೊಂದರೆ ಅನುಭವಿಸುತ್ತಾರೆ. ಆದ್ದರಿಂದ, ಅವರ ಹಕ್ಕುಗಳ ಮೇಲಿನ ಗಮನ ಭವಿಷ್ಯದಲ್ಲಿ ಆ ನೀತಿಗಳನ್ನು ಸುಧಾರಿಸಲು ಸರ್ಕಾರಗಳನ್ನು ಪ್ರೇರೇಪಿಸುತ್ತದೆ ಎಂದು ನಂಬಲಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ತಾಜಾ ಸುದ್ದಿ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ