AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Earth Day 2024 : ಬದುಕಲು ಯೋಗ್ಯವಾದ ವಾತಾವರಣ ಬೇಕಾ? ಹಾಗಾದರೆ ಭೂಮಿಯ ರಕ್ಷಣೆ ಮಾಡಿ

ಭೂಮಿಯು ಹಲವಾರು ಜೀವ ರಾಶಿಗಳಿಗೆ ಆಶ್ರಯ ತಾಣವಾಗಿದೆ. ಈ ಭೂಮಿಯನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಪರಿಸರಯನ್ನು ಉಳಿಸಿ, ಪೃಥ್ವಿಯ ರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಭೂಮಿ ದಿನವನ್ನು ಪ್ರತಿ ವರ್ಷ ಏಪ್ರಿಲ್‌ 22 ರಂದು ಆಚರಿಸಲಾಗುತ್ತದೆ. ಹಾಗಾದ್ರೆ ಈ ಭೂಮಿ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

World Earth Day 2024 : ಬದುಕಲು ಯೋಗ್ಯವಾದ ವಾತಾವರಣ ಬೇಕಾ? ಹಾಗಾದರೆ ಭೂಮಿಯ ರಕ್ಷಣೆ ಮಾಡಿ
ವಿಶ್ವ ಭೂಮಿ ದಿನ
ಸಾಯಿನಂದಾ
| Edited By: |

Updated on: Apr 22, 2024 | 9:33 AM

Share

ಭೂಮಿಯು ಹಲವಾರು ಜೀವ ರಾಶಿಗಳಿಗೆ ಆಶ್ರಯತಾಣವಾಗಿದೆ. ಆದರೆ ಬುದ್ದಿವಂತ ಜೀವಿಯೆನಿಸಿಕೊಂಡಿರುವ ಮಾನವನು ಈ ಭೂಮಿಯನ್ನು ತನ್ನ ಸ್ವಾರ್ಥಕ್ಕಾಗಿ ಹಾಳು ಮಾಡುತ್ತಿದ್ದಾನೆ. ಪರಿಸರ ನಾಶ ಸೇರಿದಂತೆ ಪ್ರಕೃತಿ ವಿರೋಧಿ ಚಟುವಟಿಕೆಗಳಿಂದ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಹೀಗಾಗಿ ವರ್ಷ ಕಳೆಯುತ್ತಿದ್ದಂತೆ ತಾಪಮಾನದಲ್ಲಿ ಏರಿಕೆ, ಕಡಿಮೆ ಮಳೆಯಿಂದ ಹೀಗೆ ನಾನಾ ರೀತಿಯ ವ್ಯತ್ಯಾಸಗಳಾಗುತ್ತಿದೆ. ನಮ್ಮ ಮುಂದಿನ ಪೀಳಿಗೆಯವರಿಗೆ ಬದುಕಲು ಯೋಗ್ಯವಾದ ವಾತಾವರಣವು ಬೇಕಾದರೆ ನಾವೆಲ್ಲರೂ ಸೇರಿ ಭೂ ರಕ್ಷಣೆಯನ್ನು ಮಾಡಲೇಬೇಕು. ಧರಣಿಯನ್ನು ರಕ್ಷಿಸುವ ಬಗೆಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 22 ರಂದು ವಿಶ್ವ ಭೂಮಿ ದಿನ ವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಅಂತಾರಾಷ್ಟ್ರೀಯ ಮಾತೃಭೂಮಿ ದಿನ ಎಂದೂ ಕರೆಯಲಾಗುತ್ತದೆ.

ವಿಶ್ವ ಭೂಮಿ ದಿನದ ಇತಿಹಾಸ:

1969ರಲ್ಲಿ ಸ್ಯಾನ್‌ಫ್ರಾನಿಸ್ಕೊದಲ್ಲಿ ನಡೆದ ಯುನೆಸ್ಕೊ ಸಮ್ಮೇಳನದಲ್ಲಿ ಭೂಮಿ ದಿನ ಆಚರಿಸುವ ಬಗ್ಗೆ ನಿರ್ಧರಿಸಲಾಯಿತು. ಮೊದಲು ವಿಶ್ವ ಭೂಮಿ ದಿನವನ್ನು ಮಾರ್ಚ್‌ 21 ರಂದು ಆಚರಿಸಲು ಪ್ರಸ್ತಾಪವಿಡಲಾಯಿತು. ಆ ಬಳಿಕ ಅಮೆರಿಕದ ಸೆನೆಟರ್‌, ಗೇಲಾರ್ಡ್‌ ನೆಲ್ಸನ್‌ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಏಪ್ರಿಲ್‌ 22, 1970 ರಂದು ಈ ದಿನವನ್ನು ಆಚರಿಸುವ ಬಗ್ಗೆ ಮತ್ತೆ ಪ್ರಸ್ತಾಪವಿಟ್ಟರು. ಹೀಗಾಗಿ ಏಪ್ರಿಲ್ 22 ರಂದು ಭೂಮಿ ದಿನ ಎಂದು ಮರುನಾಮಕರಣ ಮಾಡಲಾಯಿತು. ಅಂದಿನಿಂದ ಪ್ರತಿ ವರ್ಷ ವಿಶ್ವ ಭೂಮಿ ದಿನ ಎಂದು ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂ ಓದಿ: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲರ ಬಗ್ಗೆ ಗೊತ್ತಿರದ ಕುತೂಹಲಕಾರಿ ಸಂಗತಿಗಳಿವು!

ವಿಶ್ವ ಭೂಮಿ ದಿನದ ಮಹತ್ವ:

ಭೂಮಿಯು ಸುರಕ್ಷಿತವಾಗಿದ್ದರೆ ನಾವು ಸುರಕ್ಷಿತವಾದಂತೆಯೇ. ಹೀಗಾಗಿ ಭೂಮಿಯಲ್ಲಿ ಪರಿಸರವು ಮುಖ್ಯವಾಗಿರುವ ಕಾರಣ, ಭೂಮಿ ಹಾಗೂ ಪ್ರಕೃತಿ ಇವರೆಡನ್ನು ರಕ್ಷಿಸುವ ಬಗ್ಗೆ ಪ್ರಪಂಚದಾದ್ಯಂತ ಜಾಗೃತಿ ಮೂಡಿಸಲು ವಿಶ್ವ ಭೂ ದಿನವನ್ನು ಆಚರಿಸಲಾಗುತ್ತದೆ. ಜಲ, ವಾಯು ಮಾಲಿನ್ಯ, ಅರಣ್ಯನಾಶ ಸೇರಿದಂತೆ ಇನ್ನಿತ್ತರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಈ ದಿನದಂದು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ