AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Environmental Health Day 2025: ಮಾನವನ ಕ್ಷೇಮಕ್ಕೆ ಸುಸ್ಥಿರ, ಆರೋಗ್ಯಕರ ಪರಿಸರ ಅತ್ಯಗತ್ಯ

ಮಾನವನ ಆರೋಗ್ಯ ಮತ್ತು ಪರಿಸರದ ನಡುವೆ ನಿರ್ಣಾಯಕ ಸಂಬಂಧವಿದೆ. ಪರಿಸರ ಸ್ವಚ್ಛವಾಗಿದ್ದರೆ, ಆರೋಗ್ಯಕರವಾಗಿದ್ದರೆ ಮಾತ್ರ ನಾವು ಆರೋಗ್ಯಕ, ಸುಸ್ಥಿರ ಜೀವನವನ್ನು ನಡೆಸಲು ಸಾಧ್ಯ. ಹಾಗಾಗಿ ಮಾಲಿನ್ಯ, ಹವಾಮಾನ ಬದಲಾವಣೆಯಂತಹ ಪರಿಸರ ಸಮಸ್ಯೆಗಳನ್ನು ಪರಿಹರಿಸಿ ಪರಸರವನ್ನು ಆರೋಗ್ಯಕರವಾಗಿಟ್ಟುಕೊಳ್ಳಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಪರಿಸರ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಹಿಂದಿನ ಇತಿಹಾಸವನ್ನು ತಿಳಿಯೋಣ ಬನ್ನಿ.

World Environmental Health Day 2025: ಮಾನವನ ಕ್ಷೇಮಕ್ಕೆ ಸುಸ್ಥಿರ, ಆರೋಗ್ಯಕರ ಪರಿಸರ ಅತ್ಯಗತ್ಯ
ವಿಶ್ವ ಪರಿಸರ ಆರೋಗ್ಯ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Sep 26, 2025 | 9:56 AM

Share

ನಮ್ಮ ಸುತ್ತಮುತ್ತಲಿನ ಪರಿಸರ (Environment), ನಾವು ತಿನ್ನುವ ಆಹಾರ ಆರೋಗ್ಯಕರವಾಗಿದ್ದರೆ ನಮ್ಮ ಆರೋಗ್ಯವೂ ಚೆನ್ನಾಗಿರುತ್ತದೆ. ಆದರೆ ಇಂದು ಅಭಿವೃದ್ಧಿಯ ಹೆಸರಲ್ಲಿ ಉಂಟಾಗುತ್ತಿರುವ ಮಾಲಿನ್ಯಗಳ ಕಾರಣದಿಂದಾಗಿ ಪರಿಸರ ವ್ಯವಸ್ಥೆಯೇ ಹದಗೆಟ್ಟುಹೋಗಿದೆ. ಇದು ನೇರವಾಗಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು ಜಗತ್ತಿನಲ್ಲಿ ದಿನದಿಂದ ದಿನಕ್ಕೆ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದ್ದು, ಉಸಿರಾಟದ ತೊಂದರೆ, ಶ್ವಾಸಕೋಶದ ಕಾಯಿಲೆ, ಚರ್ಮ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವು ಗಂಭೀರ ಕಾಯಿಲೆಗಳು ಜನರನ್ನು ಭಾದಿಸುತ್ತಿವೆ. ಈ ನಿಟ್ಟಿನಲ್ಲಿ ಪರಿಸರ ವ್ಯವಸ್ಥೆ ಮತ್ತು ಪರಿಸರದ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಭೂಮಿಯ ಮೇಲಿನ ಸಕಲ ಜೀವರಾಶಿಗಳು ಆರೋಗ್ಯಕ, ಸುಸ್ಥಿರ ಜೀವನವನ್ನು ನಡೆಸಬೇಕು ಎನ್ನುವ ಉದ್ದೇಶದಿಂದ ವಿಶ್ವ ಪರಿಸರ ಆರೋಗ್ಯ (World Environmental Health Day) ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ವಿಶ್ವ ಪರಿಸರ ಆರೋಗ್ಯ ದಿನದ ಇತಿಹಾಸವೇನು?

ಪರಿಸರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಪರಿಸರ ಆರೋಗ್ಯ ಒಕ್ಕೂಟ (ಇಂಟರ್‌ನ್ಯಾಷನಲ್‌ ಫೆಡರೇಷನ್‌ ಆಫ್‌ ಎನ್ವಿರಾನ್ಮೆಂಟಲ್‌ ಹೆಲ್ತ್‌ ಕೌನ್ಸಿಲ್) ಸೆಪ್ಟೆಂಬರ್ 26, 2011 ರಂದು ವಿಶ್ವ ಪರಿಸರ ಆರೋಗ್ಯ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಈ ಒಕ್ಕೂಟವು ಪರಿಸರ ಆರೋಗ್ಯ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುವ  ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಪರಿಸರದ ಆರೋಗ್ಯವನ್ನು ರಕ್ಷಿಸಲು ಪ್ರಪಂಚದ ಎಲ್ಲಾ ಜನರು ತೆಗೆದುಕೊಳ್ಳಬೇಕಾದ ಕ್ರಮಗಳು  ಮತ್ತು ಅನುಷ್ಠಾನಕ್ಕೆ ಇದು  ಜಾಗತಿಕ ವೇದಿಕೆಯನ್ನು ಒದಗಿಸುತ್ತದೆ.  ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಜನರಿಗೆ ಮನದಟ್ಟು ಮಾಡಬೇಕೆನ್ನುವುದು  ವಿಶ್ವ ಪರಿಸರ ಆರೋಗ್ಯ ದಿನವನ್ನು ಆಚರಿಸುವ ಹಿಂದಿನ ಮುಖ್ಯ ಉದ್ದೇಶವಾಗಿದೆ.

ವಿಶ್ವ ಪರಿಸರ ಆರೋಗ್ಯ ದಿನದ ಮಹತ್ವವೇನು?

ಮಾನವನ ಆರೋಗ್ಯ ಮತ್ತು ಪರಿಸರದ ನಡುವೆ ಆಳವಾದ ಸಂಬಂಧವಿದೆ. ಪರಿಸರವು ಮಾನವನ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಆರೋಗ್ಯದ ಮಹತ್ವವನ್ನು ಜನರು ಅರ್ಥಮಾಡಿಕೊಳ್ಳಲು ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಈ ಉದ್ದೇಶಕ್ಕಾಗಿ ಕಾರ್ಯಾಗಾರಗಳನ್ನು ಸಹ ನಡೆಸಲಾಗುತ್ತದೆ.

ಇದನ್ನೂ ಓದಿ
Image
ವಿಶ್ವ ಘೇಂಡಾಮೃಗ ದಿನದ ಆಚರಣೆಯ ಇತಿಹಾಸ, ಮಹತ್ವ
Image
ಅಳಿವಿನಂಚಿನಲ್ಲಿವೆ ರೆಡ್‌ ಪಾಂಡಾಗಳು, ಅವುಗಳ ರಕ್ಷಣೆ ಅತ್ಯಗತ್ಯ
Image
ಪರಿಸರ ಸಮತೋಲನದಿಂದ ಕೃಷಿಯವರೆಗೆ ಬಿದಿರಿನ ಉಪಯೋಗ ಹಲವು
Image
ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ

ಇದನ್ನೂ ಓದಿ: ಪರಿಸರ ಸಮತೋಲನದಿಂದ ಕೃಷಿಯವರೆಗೆ ಬಿದಿರಿನ ಉಪಯೋಗ ಹಲವು

ಮಾನವರ ಆರೋಗ್ಯವು ಪರಿಸರ ಆರೋಗ್ಯದ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ. ಆದ್ದರಿಂದ ಜಾಗತಿಕ ತಾಪಮಾನ, ಹವಮಾನ ಬದಲಾವಣೆ, ತ್ವರಿತ ನಗರೀಕರಣ ಮುಂತಾದ ಗಂಭೀರ ಸಮಸ್ಯೆಗಳನ್ನು ಜಗತ್ತು ಎದುರಿಸುತ್ತಿರುವ ಸಮಯಯದಲ್ಲಿ ಪರಿಸರದ ಶುಚಿತ್ವನ್ನು  ಮತ್ತು ಪರಿಸರದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಧಾನಗಳ ಬಗ್ಗೆ ಸಾರ್ವಜನಿಕ ಶಿಕ್ಷಣವನ್ನು ನೀಡುವುದು  ಅತ್ಯಗತ್ಯವಾಗಿದೆ. ಈ ದಿನದಂದು ವಿಚಾರ ಸಂಕಿರಣಗಳು, ಕಾರ್ಯಾಗಾರಗಳು ಮತ್ತು ಜಾಗೃತಿ ಕಾರ್ಯಕ್ರಮಗಳು, ಶಾಲೆಗಳು, ಕಾಲೇಜುಗಳು ಮತ್ತು ಸ್ಥಳೀಯ ಸಮುದಾಯಗಳಲ್ಲಿ ಆರೋಗ್ಯ ಮತ್ತು ಪರಿಸರದ ಕುರಿತು ಚರ್ಚೆಗಳು ನಡೆಯುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ