AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Family Day 2024 : ವಿಶ್ವ ಕುಟುಂಬ ದಿನ; ತುಂಬಿದ ಮನೆ ಸ್ವರ್ಗಕ್ಕಿಂತಲೂ ಮಿಗಿಲು

ಪ್ರತಿವರ್ಷ ಮೇ 15 ರಂದು ವಿಶ್ವ ಕುಟುಂಬ ದಿನವಾಗಿ ಆಚರಿಸಲಾಗುತ್ತದೆ. ತಮ್ಮ ಅಸ್ತಿತ್ವವನ್ನು ತಿಳಿಸಿಕೊಡುವ ಕುಟುಂಬವನ್ನು ಪ್ರೀತಿಸಬೇಕು. ಕುಟುಂಬಗಳ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅಭಿವೃದ್ಧಿಯಲ್ಲಿ ಅಂತರಾಷ್ಟ್ರೀಯ ಸಮುದಾಯದ ಪಾತ್ರವನ್ನು ಎತ್ತಿತೋರಿಸುವ ಉದ್ದೇಶವು ಈ ದಿನವು ಹೊಂದಿದೆ. ಹಾಗಾದ್ರೆ ಈ ದಿನವು ಆರಂಭವಾಗಿದ್ದು ಯಾವಾಗ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

World Family Day  2024 : ವಿಶ್ವ ಕುಟುಂಬ ದಿನ; ತುಂಬಿದ ಮನೆ ಸ್ವರ್ಗಕ್ಕಿಂತಲೂ ಮಿಗಿಲು
World Family Day 2024
ಸಾಯಿನಂದಾ
| Edited By: |

Updated on: May 14, 2024 | 4:34 PM

Share

‘ವಸುಧೈವ ಕುಟುಂಬಕಂ’ ಎನ್ನುವ ಮಾತಿನಂತೆ ಇಡೀ ವಿಶ್ವವೇ ನಮ್ಮ ಕುಟುಂಬ.ಈ ಕುಟುಂಬದ ಮಹತ್ವವನ್ನು ಸಾರುತ್ತದೆ. ಅದಲ್ಲದೇ, ಮನೆಯೇ ಮೊದಲ ಪಾಠ ಶಾಲೆ ಎನ್ನುವ ಮಾತಿದೆ. ಕುಟುಂಬದಿಂದಲೇ ಒಬ್ಬ ವ್ಯಕ್ತಿಯು ಸಂಸ್ಕಾರ, ಪ್ರೀತಿ, ಹೊಂದಾಣಿಕೆಯನ್ನು ಕಲಿಯುತ್ತಾನೆ. ಶಿಕ್ಷಣಕ್ಕಿಂತ ಈ ಕೆಲವು ಪಾಠಗಳು ವ್ಯಕ್ತಿಯ ಸುತ್ತಮುತ್ತಲಿನ ಸಂಬಂಧಗಳಿಂದ ಆರಂಭವಾಗುತ್ತದೆ. ಈ ಸಂಬಂಧಗಳ ಜೊತೆಯಲ್ಲಿ ಒಂದೇ ಸೂರಿನಲ್ಲಿ ಬಾಳುವ ಖುಷಿಯೇ ಬೇರೆ. ಇಲ್ಲಿ ನೋವಿರಲಿ, ನಲಿವಿರಲಿ ಕುಟುಂಬದ ಸದಸ್ಯರು ಸದಾ ಜೊತೆಗೆ ಇರುತ್ತಾರೆ. ಆದರೆ ಕಳೆದ ಕೆಲವು ವರ್ಷಗಳಿಂದ ಅವಿಭಕ್ತ ಕುಟುಂಬವನ್ನು ಕಾಣುವುದೇ ಅಪರೂಪ ಎನ್ನುವಂತಾಗಿದೆ. ವಿಭಿಕ್ತ ಕುಟುಂಬಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಆದರೆ ಇಡೀ ವಿಶ್ವವೇ ಒಂದು ಕುಟುಂಬ, ಎಲ್ಲರನ್ನು ಒಂದೇ ಭಾವಿಸುತ್ತಾ ಕೂಡಿಕೊಂಡು ಬಾಳಬೇಕು ಎನ್ನುವ ಸದ್ದುದ್ದೇಶವನ್ನು ಈ ದಿನವು ಹೊಂದಿದೆ.

ವಿಶ್ವ ಕುಟುಂಬ ದಿನದ ಇತಿಹಾಸ:

ಪ್ರಪಂಚದಾದಂತ್ಯ ಮೇ 15 ರಂದು ವಿಶ್ವ ಕುಟುಂಬ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಸಂಸ್ಥೆ 1993 ರ ಮೇ 15ರಂದು ಜನರಲ್ ಅಸೆಂಬ್ಲಿಯಲ್ಲಿ ಅಂತರಾಷ್ಟ್ರೀಯ ಕುಟುಂಬ ದಿನಾಚರಣೆಯನ್ನು ಆಚರಿಸುವ ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿತು. ಅಂದಿನಿಂದ ವಿಶ್ವವಿಡೀ ಪ್ರತಿ ವರ್ಷ ಮೇ 15ನ್ನು ಅಂತರಾಷ್ಟ್ರೀಯ ಕುಟುಂಬ ದಿನಾಚರಣೆಯನ್ನಾಗಿ ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂ ಓದಿ: ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ವಿಶ್ವ ಕುಟುಂಬ ದಿನದ ಮಹತ್ವ:

ಕುಟುಂಬದ ಪ್ರೀತಿಯನ್ನು ಅರಿತು, ಇಡೀ ವಿಶ್ವವೇ ನಮ್ಮ ಕುಟುಂಬ ಎಂದು ಭಾವಿಸಬೇಕು. ಕುಟುಂಬಗಳ ಮೌಲ್ಯ ಹಾಗೂ ಮಹತ್ವವನ್ನು ಸಾರುವ ಉದ್ದೇಶವನ್ನು ಈ ದಿನವು ಹೊಂದಿದೆ. ಈ ದಿನದಂದು ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತು ಪ್ರದರ್ಶನಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು