World First Aid Day 2024: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?

ಯಾವುದೇ ವ್ಯಕ್ತಿಗೆ ಗಾಯ ಅಥವಾ ನೋವು ಉಂಟಾದಾಗ ಮೊದಲು ನೀಡುವ ಚಿಕಿತ್ಸೆಯೇ ಈ ಪ್ರಥಮ ಚಿಕಿತ್ಸೆಯಾಗಿರುತ್ತದೆ. ಜನರಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದಾಗಿ ಪ್ರತಿ ವರ್ಷ ಸೆಪ್ಟೆಂಬರ್‌ನ ಎರಡನೇ ಶನಿವಾರದಂದು ವಿಶ್ವದಾದ್ಯಂತ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ 14 ರಂದು ಆಚರಿಸಲಾಗುತ್ತಿದ್ದು, ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಹಾಗೂ ಒಬ್ಬ ವ್ಯಕ್ತಿಯು ಯಾವ ಸಂದರ್ಭದಲ್ಲಿ ಯಾವ ರೀತಿ ಪ್ರಥಮ ಚಿಕಿತ್ಸೆ ನೀಡಬಹುದು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

World First Aid Day 2024: ಯಾವ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ? ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡುವುದು ಹೇಗೆ?
ಸಾಂದರ್ಭಿಕ ಚಿತ್ರ (ಟಿವಿ9 ಕನ್ನಡ )
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 14, 2024 | 9:35 AM

ಸಾಮಾನ್ಯವಾಗಿ ಯಾವುದೇ ಸಂದರ್ಭವಾಗಿರಲಿ ರೋಗಿಗಳಿಗೆ ತಕ್ಷಣಕ್ಕೆ ನೀಡುವ ಚಿಕಿತ್ಸೆಯಾಗಿದೆ. ಎಷ್ಟೋ ಬಾರಿ ಈ ಪ್ರಥಮ ಚಿಕಿತ್ಸೆ ರೋಗಿಗಳ ಜೀವ ಉಳಿದಿದೆ. ಈ ಪ್ರಥಮ ಚಿಕಿತ್ಸೆಯು ಆ ಕ್ಷಣಕ್ಕೆ ನೋವು ಕಡಿಮೆ ಮಾಡಲು ಹಾಗೂ ಜೀವಕ್ಕೆ ಹಾನಿಯಾಗುವುದನ್ನು ತಪ್ಪಿಸುತ್ತದೆ. ಇದರಿಂದ ವ್ಯಕ್ತಿಯು ಸ್ವಲ್ಪ ಮಟ್ಟಿಗೆ ಚೇತರಿಸಿಕೊಳ್ಳಲು ಸಾಧ್ಯ. ಪ್ರಥಮ ಚಿಕಿತ್ಸೆಯು ವಿಶೇಷವಾಗಿ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಹೆಚ್ಚು ಜೀವಗಳನ್ನು ಉಳಿಸಲು ನೆರವಾಗುತ್ತದೆ. ಹೀಗಾಗಿ ತುರ್ತು ಸಂದರ್ಭದಲ್ಲಿ ನೀಡುವ ಪ್ರಥಮ ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪ್ರಥಮ ಚಿಕಿತ್ಸಾ ದಿನದ ಇತಿಹಾಸ

1859ರ ಸೋಲ್ಪೆರಿನೊ ಕದನದ ಸಮಯದಲ್ಲಿ ಯುವ ಉದ್ಯಮಿ ಹೆನ್ರಿ ಡ್ಯುನಾಂಟ್‌ ಸಾಮೂಹಿಕ ಹತ್ಯಾಕಾಂಡದಲ್ಲಿ ಗಾಯಗೊಂಡ ಹಲವರಿಗೆ ಸುಧಾರಿಸಿಕೊಳ್ಳಲು ಸಹಾಯ ಮಾಡಿದರು. ಈ ಘಟನೆಯಿಂದಾಗಿ ಎ ಮೆಮೊರಿ ಆಫ್ ಸೋಲ್ಫೆರಿನೊ ಎಂಬ ಪುಸ್ತಕವನ್ನು ಬರೆದರು. ಇದರಲ್ಲಿ ಅವರು ತಮ್ಮ ಅನುಭವಗಳ ಬಗ್ಗೆ ಹಂಚಿಕೊಂಡರು. ತದನಂತರದಲ್ಲಿ ಹೆನ್ರಿ ಡ್ಯೂನಾಂಟ್ ಇಂಟರ್ನ್ಯಾಷನಲ್ ಕಮಿಟಿ ಆಫ್ ರೆಡ್ ಕ್ರಾಸ್ ಅನ್ನು ಸ್ಥಾಪಿಸಿದರು. ಇದೊಂದು ಪ್ರಥಮ ಚಿಕಿತ್ಸಾ ಆರೈಕೆಯನ್ನು ಒದಗಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಮೀಸಲಾಗಿರುವ ಸಂಸ್ಥೆಯಾಗಿದ್ದು, 2000 ರಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸುವುದಾಗಿ ಈ ಸಂಸ್ಥೆಯು ಘೋಷಿಸಿತು. ಅಂದಿನಿಂದ, ಸೆಪ್ಟೆಂಬರ್ ತಿಂಗಳ ಎರಡನೇ ಶನಿವಾರದಂದು ಈ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಪ್ರಥಮ ಚಿಕಿತ್ಸಾ ದಿನದ ಮಹತ್ವ ಹಾಗೂ ಆಚರಣೆ

ಪ್ರಥಮ ಚಿಕಿತ್ಸಾ ಆರೈಕೆಯ ಮಹತ್ವ ಮತ್ತು ಮಾನವನ ಜೀವವನ್ನು ಹೇಗೆ ಉಳಿಸಬಹುದು ಎಂಬುದರ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ದಿನದಂದು ಶಾಲಾ ಕಾಲೇಜುಗಳು ಸೇರಿದಂತೆ ರೆಡ್ ಕ್ರಾಸ್ ನಂತಹ ಸಂಸ್ಥೆಗಳಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ವ್ಯಕ್ತಿಗೆ ಯಾವಾಗ ಪ್ರಥಮ ಚಿಕಿತ್ಸೆ ಅಗತ್ಯವಿರುತ್ತದೆ?

  • ಅಪಘಾತಗಳಾಗಿ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ ತೀವ್ರ ರಕ್ತಸ್ರಾವವಾಗುತ್ತಿದ್ದಾಗ ಅಥವಾ ಕೈ ಕಾಲುಗಳು ಮುರಿದಿದ್ದಾಗ
  • ವ್ಯಕ್ತಿಯು ನೀರಿನಲ್ಲಿ ಮುಳುಗಿ ಉಸಿರಾಡದಿದ್ದಾಗ, ಕರೆಂಟ್ ಶಾಕ್ ಹೊಡೆದಾಗ ತಕ್ಷಣವೇ ಪ್ರಥಮ ಚಿಕಿತ್ಸೆಯ ಅಗತ್ಯವಿರುತ್ತದೆ.
  • ಹಾವು ಅಥವಾ ಇನ್ನಾವುದೇ ವಿಷ ಜಂತುಗಳು ಕಚ್ಚಿದಾಗ ತುರ್ತು ಪ್ರಥಮ ಚಿಕಿತ್ಸೆ ಅತ್ಯಗತ್ಯವಾಗಿರುತ್ತದೆ.
  • ಎತ್ತರದ ಕಟ್ಟಡಗಳಿಂದ ಕಾಲು ಜಾರಿ ಬಿದ್ದಾಗ, ಮಧುಮೇಹಿ ರೋಗಿಗಳು ಗ್ಲುಕೋಸ್ ಮಟ್ಟ ಕುಸಿದು ಉಸಿರಾಡದೇ ಇದ್ದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವುದು ಅಗತ್ಯ.

ಇದನ್ನೂ ಓದಿ: ಮಹಿಳೆಯರೇ, ಕ್ಯಾಬ್ ನಲ್ಲಿ ಓಡಾಡುವಾಗ ನಿಮ್ಮ ಸುರಕ್ಷತೆಯನ್ನು ಹೇಗೆ ಮಾಡಿಕೊಳ್ಳಬಹುದು? ಇಲ್ಲಿದೆ ಸಲಹೆಗಳು

ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಪ್ರಥಮ ಚಿಕಿತ್ಸೆಯನ್ನು ನೀಡುವುದು ಹೇಗೆ?

  • ಗಾಯಗೊಂಡ ವ್ಯಕ್ತಿಯಿಂದ ತೀವ್ರ ರಕ್ತಸ್ರಾವವಾಗುತ್ತಿದ್ದಲ್ಲಿ ಒತ್ತಡ ಹಾಕಿ ಅಥವಾ ಬಟ್ಟೆಯಿಂದ ಗಾಯವನ್ನು ಸುತ್ತಿ ರಕ್ತಸ್ರಾವವಾಗದಂತೆ ತಡೆಯಬಹುದು.
  • ವಿಷಜಂತು ಹಾಗೂ ಹಾವು ಕಚ್ಚಿದಲ್ಲಿ ಗಾಯದ ಮೇಲ್ಬಾಗದಲ್ಲಿ ಬಟ್ಟೆ ಕಟ್ಟಿ ವಿಷವು ರಕ್ತಕ್ಕೆ ಸೇರದಂತೆ ತಡೆಯುವುದು ಮುಖ್ಯ.
  • ಗಾಯಗೊಂಡ ವ್ಯಕ್ತಿಯ ಎಲುಬು ಮುರಿತವಾಗಿದ್ದಲ್ಲಿ ಬ್ಯಾಂಡೇಜ್ ಹಾಕಿ ನೋವನ್ನು ಸ್ವಲ್ಪ ಪ್ರಮಾಣದಲ್ಲಿ ಕಡಿಮೆ ಮಾಡಬಹುದು.
  • ಮಕ್ಕಳು ಚೂರಿ, ಪೆನ್ಸಿಲ್, ನಾಣ್ಯ, ರಬ್ಬರ್ ಮುಂತಾದ ವಸ್ತುಗಳನ್ನು ಬಾಯಿಗೆ ಹಾಕಿ ಗಂಟಲಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಲ್ಲಿ ತಕ್ಷಣವೇ ತಲೆಕೆಳಗೆ ಮಾಡಿ ಬೆನ್ನಿಗೆ ಬಡಿಯುವುದರಿಂದ ಆ ವಸ್ತುವು ಹೊರಗೆ ಬರುವ ಸಾಧ್ಯತೆಯೇ ಹೆಚ್ಚು. ಇನ್ನು ಉಸಿರಾಟದ ತೊಂದರೆಯಾಗದಂತೆ ತಡೆಯಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ