AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?

ಹೆಚ್ಚಿನವರಲ್ಲಿ ಕಾಣಸಿಗುವ ಆರೋಗ್ಯ ಸಮಸ್ಯೆ ಗಳಲ್ಲಿ ಅಧಿಕ ರಕ್ತದೊತ್ತಡ ಕೂಡ ಒಂದಾಗಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?
ಸಾಯಿನಂದಾ
| Edited By: |

Updated on: May 16, 2024 | 2:29 PM

Share

ಇಂದಿನ ಬದಲಾದ ಜೀವನ ಶೈಲಿ ಹಾಗೂ ಗುಣಮಟ್ಟವಲ್ಲದ ಆಹಾರ ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಸಮಸ್ಯೆಗೆ ಕಾರಣವಾಗುತ್ತಿದೆ. ಒಂದು ವೇಳೆ ಅಧಿಕ ರಕ್ತದೊತ್ತಡದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳದೇ ಹೋದಲ್ಲಿ, ಹೃದ್ರೋಗಗಳು, ಪಾರ್ಶ್ವವಾಯು ಹೀಗೆ ಗಂಭೀರ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಅದಲ್ಲದೇ, ಅಧಿಕ ರಕ್ತದೊತ್ತಡವು ತಲೆನೋವು, ವಾಕರಿಕೆ, ವಾಂತಿ, ತಲೆತಿರುಗುವಿಕೆ ಹಾಗೂ ಉಸಿರಾಟದ ಸಮಸ್ಯೆ, ಗೊಂದಲ, ಆತಂಕ, ಎದೆ ನೋವು ಮತ್ತು ಸ್ನಾಯು ನಡುಕ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ವಿಶ್ವ ಅಧಿಕ ರಕ್ತದೊತ್ತಡ ದಿನ

2005 ಮೇ 14ರಂದು ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಅಧಿಕ ರಕ್ತದೊತ್ತಡ ದಿನವನ್ನು ಪರಿಚಯ ಮಾಡಿತು. ಆದರೆ 2006ರಿಂದ ಪ್ರತಿವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಎಂಬುದು ಅಧಿಕ ರಕ್ತದೊತ್ತಡ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಯಲ್ಲಿ ಒಂದು. ಹೀಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಅಧಿಕ ರಕ್ತದೊತ್ತಡ ದಿನದ ಮಹತ್ವ

ವಿಶ್ವ ಅಧಿಕ ರಕ್ತದೊತ್ತಡ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಆರೋಗ್ಯ ಸಮಸ್ಯೆ ಹೊಂದಿದವರಿಗೆ ಸಹಾಯ ಮಾಡಲು ಲೀಗ್‌ಗಳು ಸಹಕರಿಸುತ್ತವೆ. ಈ ದಿನದಂದು ಆರೋಗ್ಯ ಸಂಸ್ಥೆಗಳು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಇದನ್ನೂ ಓದಿ: ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಮುನ್ನೆಚ್ಚರಿಕೆ ಕ್ರಮಗಳು ಹೇಗೆ?

* ಉಪ್ಪು ಸೇವನೆಯು ಮಿತವಾಗಿರಲಿ.

* ಹಣ್ಣು ಹಂಪಲು ಮತ್ತು ಸೊಪ್ಪು ತರಕಾರಿಗಳನ್ನು ಸೇವಿಸಿ.

* ತಂಬಾಕು ಸೇವನೆ, ಆಲ್ಕೊಹಾಲ್ ನಿಂದ ದೂರವಿರುವುದು.

* ಕೊಬ್ಬಿನ ಅಂಶವಿರುವ ಆಹಾರ ಸೇವನೆಯನ್ನು ಕಡಿಮೆಗೊಳಿಸುವುದು.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್