AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?

ಹೆಚ್ಚಿನವರಲ್ಲಿ ಕಾಣಸಿಗುವ ಆರೋಗ್ಯ ಸಮಸ್ಯೆ ಗಳಲ್ಲಿ ಅಧಿಕ ರಕ್ತದೊತ್ತಡ ಕೂಡ ಒಂದಾಗಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 16, 2024 | 2:29 PM

Share

ಇಂದಿನ ಬದಲಾದ ಜೀವನ ಶೈಲಿ ಹಾಗೂ ಗುಣಮಟ್ಟವಲ್ಲದ ಆಹಾರ ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಸಮಸ್ಯೆಗೆ ಕಾರಣವಾಗುತ್ತಿದೆ. ಒಂದು ವೇಳೆ ಅಧಿಕ ರಕ್ತದೊತ್ತಡದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳದೇ ಹೋದಲ್ಲಿ, ಹೃದ್ರೋಗಗಳು, ಪಾರ್ಶ್ವವಾಯು ಹೀಗೆ ಗಂಭೀರ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಅದಲ್ಲದೇ, ಅಧಿಕ ರಕ್ತದೊತ್ತಡವು ತಲೆನೋವು, ವಾಕರಿಕೆ, ವಾಂತಿ, ತಲೆತಿರುಗುವಿಕೆ ಹಾಗೂ ಉಸಿರಾಟದ ಸಮಸ್ಯೆ, ಗೊಂದಲ, ಆತಂಕ, ಎದೆ ನೋವು ಮತ್ತು ಸ್ನಾಯು ನಡುಕ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ವಿಶ್ವ ಅಧಿಕ ರಕ್ತದೊತ್ತಡ ದಿನ

2005 ಮೇ 14ರಂದು ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಅಧಿಕ ರಕ್ತದೊತ್ತಡ ದಿನವನ್ನು ಪರಿಚಯ ಮಾಡಿತು. ಆದರೆ 2006ರಿಂದ ಪ್ರತಿವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಎಂಬುದು ಅಧಿಕ ರಕ್ತದೊತ್ತಡ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಯಲ್ಲಿ ಒಂದು. ಹೀಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಅಧಿಕ ರಕ್ತದೊತ್ತಡ ದಿನದ ಮಹತ್ವ

ವಿಶ್ವ ಅಧಿಕ ರಕ್ತದೊತ್ತಡ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಆರೋಗ್ಯ ಸಮಸ್ಯೆ ಹೊಂದಿದವರಿಗೆ ಸಹಾಯ ಮಾಡಲು ಲೀಗ್‌ಗಳು ಸಹಕರಿಸುತ್ತವೆ. ಈ ದಿನದಂದು ಆರೋಗ್ಯ ಸಂಸ್ಥೆಗಳು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಇದನ್ನೂ ಓದಿ: ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಮುನ್ನೆಚ್ಚರಿಕೆ ಕ್ರಮಗಳು ಹೇಗೆ?

* ಉಪ್ಪು ಸೇವನೆಯು ಮಿತವಾಗಿರಲಿ.

* ಹಣ್ಣು ಹಂಪಲು ಮತ್ತು ಸೊಪ್ಪು ತರಕಾರಿಗಳನ್ನು ಸೇವಿಸಿ.

* ತಂಬಾಕು ಸೇವನೆ, ಆಲ್ಕೊಹಾಲ್ ನಿಂದ ದೂರವಿರುವುದು.

* ಕೊಬ್ಬಿನ ಅಂಶವಿರುವ ಆಹಾರ ಸೇವನೆಯನ್ನು ಕಡಿಮೆಗೊಳಿಸುವುದು.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ