AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?

ಹೆಚ್ಚಿನವರಲ್ಲಿ ಕಾಣಸಿಗುವ ಆರೋಗ್ಯ ಸಮಸ್ಯೆ ಗಳಲ್ಲಿ ಅಧಿಕ ರಕ್ತದೊತ್ತಡ ಕೂಡ ಒಂದಾಗಿದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿಯು ಇಲ್ಲಿದೆ.

World Hypertension Day 2024: ಅಧಿಕ ರಕ್ತದೊತ್ತಡದ ಲಕ್ಷಣಗಳೇನು? ನಿಯಂತ್ರಿಸುವುದು ಹೇಗೆ?
ಸಾಯಿನಂದಾ
| Edited By: |

Updated on: May 16, 2024 | 2:29 PM

Share

ಇಂದಿನ ಬದಲಾದ ಜೀವನ ಶೈಲಿ ಹಾಗೂ ಗುಣಮಟ್ಟವಲ್ಲದ ಆಹಾರ ಸೇವನೆಯು ಅಧಿಕ ರಕ್ತದೊತ್ತಡಕ್ಕೆ ಸಮಸ್ಯೆಗೆ ಕಾರಣವಾಗುತ್ತಿದೆ. ಒಂದು ವೇಳೆ ಅಧಿಕ ರಕ್ತದೊತ್ತಡದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಳ್ಳದೇ ಹೋದಲ್ಲಿ, ಹೃದ್ರೋಗಗಳು, ಪಾರ್ಶ್ವವಾಯು ಹೀಗೆ ಗಂಭೀರ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು. ಅದಲ್ಲದೇ, ಅಧಿಕ ರಕ್ತದೊತ್ತಡವು ತಲೆನೋವು, ವಾಕರಿಕೆ, ವಾಂತಿ, ತಲೆತಿರುಗುವಿಕೆ ಹಾಗೂ ಉಸಿರಾಟದ ಸಮಸ್ಯೆ, ಗೊಂದಲ, ಆತಂಕ, ಎದೆ ನೋವು ಮತ್ತು ಸ್ನಾಯು ನಡುಕ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ಲಕ್ಷಣಗಳು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ.

ವಿಶ್ವ ಅಧಿಕ ರಕ್ತದೊತ್ತಡ ದಿನ

2005 ಮೇ 14ರಂದು ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಅಧಿಕ ರಕ್ತದೊತ್ತಡ ದಿನವನ್ನು ಪರಿಚಯ ಮಾಡಿತು. ಆದರೆ 2006ರಿಂದ ಪ್ರತಿವರ್ಷ ಮೇ 17 ರಂದು ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. ವರ್ಲ್ಡ್‌ ಟೈಪರ್‌ಟೆನ್ಷನ್‌ ಲೀಗ್‌ ಎಂಬುದು ಅಧಿಕ ರಕ್ತದೊತ್ತಡ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಸಂಸ್ಥೆಯಲ್ಲಿ ಒಂದು. ಹೀಗಾಗಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ವಿಶ್ವ ಅಧಿಕ ರಕ್ತದೊತ್ತಡ ದಿನದ ಮಹತ್ವ

ವಿಶ್ವ ಅಧಿಕ ರಕ್ತದೊತ್ತಡ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಆರೋಗ್ಯ ಸಮಸ್ಯೆ ಹೊಂದಿದವರಿಗೆ ಸಹಾಯ ಮಾಡಲು ಲೀಗ್‌ಗಳು ಸಹಕರಿಸುತ್ತವೆ. ಈ ದಿನದಂದು ಆರೋಗ್ಯ ಸಂಸ್ಥೆಗಳು ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಇದನ್ನೂ ಓದಿ: ಎಷ್ಟೇ ತೊಳೆದ್ರು ಮಿಕ್ಸಿ ಜಾರಿನ ಕೆಟ್ಟ ವಾಸನೆ ಹೋಗ್ತಿಲ್ವಾ? ಇಲ್ಲಿದೆ ಸಿಂಪಲ್ ಟಿಪ್ಸ್

ಮುನ್ನೆಚ್ಚರಿಕೆ ಕ್ರಮಗಳು ಹೇಗೆ?

* ಉಪ್ಪು ಸೇವನೆಯು ಮಿತವಾಗಿರಲಿ.

* ಹಣ್ಣು ಹಂಪಲು ಮತ್ತು ಸೊಪ್ಪು ತರಕಾರಿಗಳನ್ನು ಸೇವಿಸಿ.

* ತಂಬಾಕು ಸೇವನೆ, ಆಲ್ಕೊಹಾಲ್ ನಿಂದ ದೂರವಿರುವುದು.

* ಕೊಬ್ಬಿನ ಅಂಶವಿರುವ ಆಹಾರ ಸೇವನೆಯನ್ನು ಕಡಿಮೆಗೊಳಿಸುವುದು.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ