AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Liver Day 2022: ವಿಶ್ವ ಯಕೃತ್ ದಿನ; ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

ವಿಶ್ವ ಯಕೃತ್ತಿನ ದಿನವಾದ ಇಂದು (ಏ.19) ಆರೋಗ್ಯಕರ ಪಿತ್ತಜನಕಾಂಗವನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು; ಯಾವುದರಿಂದ ದೂರವಿರಬೇಕು.. ಎಂಬುದರ ಕುರಿತ ಮಾಹಿತಿ ಇಲ್ಲಿದೆ.

World Liver Day 2022: ವಿಶ್ವ ಯಕೃತ್ ದಿನ; ಲಿವರ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Apr 19, 2022 | 12:52 PM

Share

ವಿಶ್ವ ಯಕೃತ್ತಿನ ದಿನ 2022: ದೇಹದ ಒಟ್ಟಾರೆ ಆರೋಗ್ಯದಲ್ಲಿ ಯಕೃತ್ತಿನ ಪಾತ್ರ ಬಹಳ ಮುಖ್ಯವಾದದ್ದು. ಇದರ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮತ್ತು ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗಳ ಬಗ್ಗೆ ಜನರಿಗೆ ಹೆಚ್ಚು ತಿಳುವಳಿಕೆ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 19ರಂದು ವಿಶ್ವ ಯಕೃತ್ತಿನ ದಿನವನ್ನು (World Liver Day) ಆಚರಿಸಲಾಗುತ್ತದೆ. ಜೀರ್ಣಕ್ರಿಯೆ ಸೇರಿದಂತೆ ನಮ್ಮನ್ನು ಆರೋಗ್ಯವಾಗಿಡಲು ಪಿತ್ತಜನಕಾಂಗ ಮುಖ್ಯ. ನಾವು ತಿನ್ನುವ ಆಹಾರದಿಂದ ಹಿಡಿದು ಕುಡಿಯುವ ಎಲ್ಲವೂ ಯಕೃತ್ತಿನ ಮೂಲಕ ಹಾದು ಹೋಗುತ್ತದೆ. ಆಹಾರವನ್ನು ಕಲುಷಿತದಿಂದ ಬೇರ್ಪಡಿಸಿ, ಪೌಷ್ಠಿಕಾಂಶಯುಕ್ತ ಆಹಾರವನ್ನು ನಮ್ಮ ದೇಹಕ್ಕೆ ನೀಡುವ ಕ್ರಿಯೆ ಪಿತ್ತಜನಕಾಂಗ ನಡೆಸುತ್ತದೆ. ಸಾಮಾನ್ಯವಾಗಿ, ಹೆಪಟೈಟಿಸ್ ಬಿ, ಸಿ ಕಾಯಿಲೆಗಳು, ಆಲ್ಕೋಹಾಲ್ ಅಥವಾ ಡ್ರಗ್ ವ್ಯಸನಗಳು ಯಕೃತ್ತಿನ ಆರೋಗ್ಯಕ್ಕೆ ಋಣಾತ್ಮಕ ಪರಿಣಾಮ ಬೀರುತ್ತದೆ. ವಿಶ್ವ ಯಕೃತ್ತಿನ ದಿನವಾದ ಇಂದು ಆರೋಗ್ಯಕರ ಪಿತ್ತಜನಕಾಂಗವನ್ನು ಕಾಪಾಡಿಕೊಳ್ಳಲು ಏನು ಮಾಡಬೇಕು; ಯಾವುದರಿಂದ ದೂರವಿರಬೇಕು.. ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ಯಕೃತ್ತಿನ ಆರೋಗ್ಯಕ್ಕೆ ಇದು ಸಹಕಾರಿ:

ಪಾಲಕ್, ಕೋಸುಗಡ್ಡೆ, ಕೇಲ್ ಮುಂತಾದ ಹಸಿರು ಮತ್ತು ಎಲೆಗಳ ತರಕಾರಿಗಳನ್ನು ಉತ್ತಮ ಪ್ರಮಾಣದಲ್ಲಿ ಸೇವಿಸಿ. ಈ ತರಕಾರಿಗಳು ದೇಹದಲ್ಲಿ ನೈಸರ್ಗಿಕ ಶುದ್ಧೀಕರಣ ಪ್ರಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವಾಲ್ನಟ್ಸ್, ಆವಕಾಡೋಸ್, ಆಲಿವ್ ಆಯಿಲ್​ನಲ್ಲಿ ಕಂಡುಬರುವ ‘ಗುಡ್ ಫ್ಯಾಟ್​’ಗೆ ನಿಮ್ಮ ಆಹಾರ ಶೈಲಿ ಬದಲಾಯಿಸಿಕೊಳ್ಳಿ.

ಹೆಚ್ಚು ನೀರನ್ನು ಕುಡಿಯಿರಿ. ಇದು ದೇಹದಿಂದ ಕಲ್ಮಶವನ್ನು ಹೊರಹಾಕಲು ಯಕೃತ್ತಿಗೆ ಮತ್ತಷ್ಟು ಶಕ್ತಿ ನೀಡುತ್ತದೆ.

ನಿಮ್ಮ ಆಹಾರದಲ್ಲಿ ಹಣ್ಣುಗಳ ಪ್ರಮಾಣವನ್ನು ಹೆಚ್ಚಿಸಿ. ಇದಲ್ಲದೆ, ನೀವು ವಿಟಮಿನ್ ಹೊಂದಿರುವ ಹಣ್ಣುಹಂಪಲುಗಳನ್ನು ತಿನ್ನುತ್ತಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.

ಬಹುತೇಕ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೆಂದರೆ ಉತ್ತಮ ವ್ಯಾಯಾಮ, ನಡಿಗೆ, ಯೋಗ ಮೊದಲಾದವುಗಳು. ಯಕೃತ್ತಿನ ಆರೋಗ್ಯಕ್ಕೂ ಇದು ಅನ್ವಯಿಸುತ್ತದೆ.

ಲಿವರ್ ಉತ್ತಮವಾಗಿಡಲು ಇವುಗಳಿಂದ ದೂರವಿರಿ:

ಸಂಸ್ಕರಿತ ಆಹಾರಗಳು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಹೊಂದಿರುವುದರಿಂದ ಕೊಬ್ಬಿನ ಹೆಚ್ಚಳಕ್ಕೆ ಕಾರಣವಾಗಬಹುದು. ಅಲ್ಲದೇ ಅವುಗಳು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಸಹ ಹೆಚ್ಚಿಸುತ್ತವೆ. ಹೀಗಾಗಿ ಸಂಸ್ಕರಿತ ಆಹಾರಗಳಿಂದ ಸಾಧ್ಯವಾದಷ್ಟು ದೂರವಿರಿ.

ಕೆಟ್ಟ ಕೊಬ್ಬುಗಳು ಎಂದು ಕರೆಯಲ್ಪಡುವ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಫ್ಯಾಟ್​ಗಳನ್ನು (ಕೊಬ್ಬು) ತಪ್ಪಿಸಿ. ಇದರಲ್ಲಿ ಕರಿದ ತಿಂಡಿಗಳೂ ಸೇರಿವೆ.

ಯಕೃತ್ತಿನ ಆರೋಗ್ಯಕ್ಕೆ ಆಲ್ಕೊಹಾಲ್ ಸೇವನೆ ಬಹಳ ಕೆಟ್ಟದ್ದು. ಮದ್ಯಪಾನದಿಂದ ಯಕೃತ್ತಿಗೆ ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಷ್ಟವಾಗುತ್ತದೆ. ಇದರಿಂದ ಬೇರೆಬೇರೆ ಕಾಯಿಲೆಗಳಿಗೆ ತುತ್ತಾಗಬಹುದು.

ಅತಿ ಕೆಂಪು ಮಾಂಸಹಾರ ಸೇವನೆ ಯಕೃತ್ತಿನ ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುತ್ತವೆ ವರದಿಗಳು. ಇವು ಯಕೃತ್ ದಪ್ಪಗಾಗಲು ಕಾರಣವಾಗುತ್ತವೆ.

ಚಾಕೊಲೇಟ್‌ಗಳು, ಮಿಠಾಯಿಗಳು ಮತ್ತು ತಂಪು ಪಾನೀಯಗಳಂತಹ ಹೆಚ್ಚಿನ ಸಕ್ಕರೆ ಅಂಶವಿರುವ ಆಹಾರವನ್ನು ಸಾಧ್ಯವಾದಷ್ಟು ಕಡಿಮೆ ಬಳಸಿ.

ಬೆಳ್ಳುಳ್ಳಿ, ಸೊಪ್ಪು ತರಕಾರಿಗಳು, ಸೇಬು ಹಣ್ಣು, ದ್ರಾಕ್ಷಿಹಣ್ಣು ಮತ್ತು ಕ್ಯಾರೆಡ್​ಗಳನ್ನು ಹೆಚ್ಚು ಸೇವಿಸಬೇಕು. ನಿಂಬೆ ರಸ, ಗ್ರೀನ್​ ಟೀ ಹೆಚ್ಚು ಕುಡಿಯಬೇಕು. ಆಹಾರದಲ್ಲಿ ಅರಿಶಿಣ ಬಳಸಿ ಆಹಾರ ಸೇವಿಸಬೇಕು.

ಯಕೃತ್ತಿನ ಕಾಯಿಲೆಗೆ ಕಾರಣವೇನು ಎಂಬುದರ ಬಗ್ಗೆ ಮಾಹಿತಿ:

ಯಕೃತ್ತಿನ ಕಾಯಿಲೆ ಅನುವಂಶಿಕವಾಗಿಯೂ ಬರಬಹುದು. ಅನಾರೋಗ್ಯಕರ ಆಹಾರ ವ್ಯವಸ್ಥೆ ಮತ್ತು ತಿನ್ನುವ ಆಹಾರದ ಮಾದರಿಯ ಮೇಲೆ ಸಾಆನ್ಯವಾಗಿ ಯಕೃತ್ತಿನ ಕಾಯಿಲೆಗಳು ಉಂಟಾಗುತ್ತದೆ. ಆಲ್ಕೊಹಾಲ್, ಬೀದಿಯಲ್ಲಿ ಸಿಗುವ ಜಂಕ್​ ಫುಡ್​​ಗಳ ಸೇವನೆ ಕಾಯಿಲೆಗೆ ಕಾರಣವಾಗಬಲ್ಲದು. ದೇಹದಲ್ಲಿ ಹೆಚ್ಚು ಬೊಜ್ಜು, ಡಯಾಬಿಟಿಸ್​ ಉಂಟಾದಾಗ ಯಕೃತ್ತಿನ ಆರೋಗ್ಯದಲ್ಲಿ ಏರು-ಪೇರು ಉಂಟಾಗುತ್ತದೆ.

ಯಕೃತ್ತಿನ ಹಾನಿಯ ಲಕ್ಷಣಗಳು:

ಕಾಮಾಲೆ, ಕಡಿಮೆ ತೂಕ, ಹಸಿವಾಗದಿರುವುದು, ವಾಕರಿಕೆ ಮತ್ತು ವಾಂತಿ, ದೇಹಕ್ಕೆ ಸುಸ್ತು ಅಥವಾ ಆಯಾಸ, ಹೊಟ್ಟೆ ನೋವು ಇತ್ಯಾದಿಗಳಿಂದ ಯಕೃತ್ ಸಮಸ್ಯೆ ಆಗಿರುವುದು ತಿಳಿದು ಬರುತ್ತದೆ.

ಇದನ್ನೂ ಓದಿ: Health care: ಮಧುಮೇಹ ಇರುವವರು ಈ ಅಂಶಗಳನ್ನು ಗಮನಿಸಿ; ಇಲ್ಲದಿದ್ದರೆ ಅಪಾಯಗಳು ತಪ್ಪಿದ್ದಲ್ಲ

 ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಯ್ದುಕೊಳ್ಳಲು ದೇಹಕ್ಕೆ ನಿಯಮಿತ ವರ್ಕ್​ಔಟ್ ಬಹಳ ಮುಖ್ಯ: ಡಾ ಸೌಜನ್ಯ ವಶಿಷ್ಠ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ