AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Malaria Day 2024: ವಿಶ್ವ ಮಲೇರಿಯಾ ದಿನದ ಆಚರಣೆ ಏಕೆ ಮಾಡಲಾಗುತ್ತದೆ? ರೋಗವನ್ನು ತಡೆಗಟ್ಟುವುದು

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮಲೇರಿಯಾವು ತಡೆಗಟ್ಟಬಹುದಾದ ರೋಗವಾಗಿದ್ದು ಚಿಕಿತ್ಸೆಗೆ ಅರ್ಹವಾಗಿದೆ, ಆದರೆ ಇದು ಪ್ರಪಂಚದಾದ್ಯಂತದ ಜನರ ಆರೋಗ್ಯ ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತಲೇ ಇರುವುದು ಸಮಸ್ಯೆಯಾಗಿದೆ. ಆದ ಕಾರಣ ಇದನ್ನು ತಡೆಗಟ್ಟುವ ಕ್ರಮ ಸರಿಯಾದ ನಿಟ್ಟಿನಲ್ಲಿ ಸಾಗಬೇಕಾಗಿದೆ.

World Malaria Day 2024: ವಿಶ್ವ ಮಲೇರಿಯಾ ದಿನದ ಆಚರಣೆ ಏಕೆ ಮಾಡಲಾಗುತ್ತದೆ? ರೋಗವನ್ನು ತಡೆಗಟ್ಟುವುದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 24, 2024 | 5:39 PM

Share

ವಿಶ್ವ ಮಲೇರಿಯಾ ದಿನವನ್ನು ರೋಗದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಕಾಯಿಲೆಯನ್ನು ತಡೆಯಲು ಮಾಡಿರುವ ಪ್ರಯತ್ನವಾಗಿದೆ. ಇದನ್ನು ಪ್ರತಿವರ್ಷ ಎ. 25 ರಂದು ಆಚರಣೆ ಮಾಡಲಾಗುತ್ತದೆ. ಈ ಜಾಗತಿಕ ಆರೋಗ್ಯ ಸವಾಲನ್ನು ಎದುರಿಸಲು ಮತ್ತು ನಿರ್ಮೂಲನೆ ಮಾಡುವಲ್ಲಿ ಈ ದಿನ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮಲೇರಿಯಾವು ತಡೆಗಟ್ಟಬಹುದಾದ ರೋಗವಾಗಿದ್ದು ಚಿಕಿತ್ಸೆಗೆ ಅರ್ಹವಾಗಿದೆ, ಆದರೆ ಇದು ಪ್ರಪಂಚದಾದ್ಯಂತದ ಜನರ ಆರೋಗ್ಯ ಮತ್ತು ಜೀವನದ ಮೇಲೆ ಪರಿಣಾಮ ಬೀರುತ್ತಲೇ ಇರುವುದು ಸಮಸ್ಯೆಯಾಗಿದೆ. ಆದ ಕಾರಣ ಇದನ್ನು ತಡೆಗಟ್ಟುವ ಕ್ರಮ ಸರಿಯಾದ ನಿಟ್ಟಿನಲ್ಲಿ ಸಾಗಬೇಕಾಗಿದೆ.

ಮಲೇರಿಯಾ ರೋಗ ಎಂದರೇನು?

ಮಲೇರಿಯಾವು ಪ್ಲಾಸ್ಮೋಡಿಯಂ ಎಂಬ ಪರಾವಲಂಬಿಯಿಂದ ಉಂಟಾಗುವ ಕಾಯಿಲೆಯಾಗಿದೆ. ಇದು ಸೋಂಕಿತ ಅನಾಫಿಲಿಸ್ ಹೆಣ್ಣು ಸೊಳ್ಳೆಗಳ ಕಡಿತದ ಮೂಲಕ ಮನುಷ್ಯರಿಗೆ ಹರಡುತ್ತದೆ. ಮಲೇರಿಯಾ ವಿರೋಧಿ ಔಷಧಿಗಳು, ಕೀಟನಾಶಕಗಳು ಮತ್ತು ಸೊಳ್ಳೆ ಪರದೆಗಳ ಬಳಕೆಯ ಮೂಲಕ ರೋಗವನ್ನು ತಡೆಗಟ್ಟಬಹುದು. ಸೊಳ್ಳೆ ಬಾರದಂತೆ ಕಾಪಾಡಿಕೊಳ್ಳುವುದರಿಂದ ಮಲೇರಿಯಾದಿಂದ ದೂರ ಇರಬಹುದು.

2022 ರ ವಿಶ್ವ ಮಲೇರಿಯಾ ವರದಿ ಪ್ರಕಾರ, 2021 ರಲ್ಲಿ ಮಲೇರಿಯಾ ಪ್ರಕರಣಗಳು ಅಂದಾಜು 6,19,000 ಜನರನ್ನು ಬಲಿ ತೆಗೆದುಕೊಂಡಿದೆ, 2020ಕ್ಕೆ ಹೋಲಿಸಿದರೆ 2021 ರಲ್ಲಿ ಸುಮಾರು 247 ಮಿಲಿಯನ್ ಹೊಸ ಮಲೇರಿಯಾ ಪ್ರಕರಣಗಳು ದಾಖಲಾಗಿವೆ. ಆಫ್ರಿಕಾದಲ್ಲಿ, ಇದು ಪ್ರಾಣಹಾನಿಗೆ ಕಾರಣವಾಗಿರುವ ರೋಗವಾಗಿದ್ದು ವಿಶೇಷವಾಗಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಆಫ್ರಿಕನ್‌ ದೇಶಗಳಲ್ಲಿ ವಾಸಿಸುವ 5 ವರ್ಷದ ಒಳಗಿನ ಮಕ್ಕಳಲ್ಲಿ ಮೂರನೇ ಎರಡಷ್ಟು ಮಕ್ಕಳು ಮಲೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ.

ಈ ದಿನದ ಇತಿಹಾಸವೇನು?

ವರ್ಲ್ಡ್‌ ಹೆಲ್ತ್‌ ಅಸೆಂಬ್ಲಿಯು 2007ರಲ್ಲಿ ಏಪ್ರಿಲ್ 25 ಅನ್ನು ವಿಶ್ವ ಆರೋಗ್ಯ ದಿನವೆಂದು ಗೊತ್ತುಪಡಿಸಿತು. 2008ರ ಎ. 25 ರಂದು ಮೊದಲ ಬಾರಿಗೆ ವಿಶ್ವ ಮಲೇರಿಯಾದ ದಿನವನ್ನು ಆಚರಣೆ ಮಾಡಲಾಯಿತು. ಪ್ರತಿ ವರ್ಷವೂ ಈ ರೋಗವನ್ನು ನಿರ್ಮೂಲನೆ ಮಾಡಲು ನಿಗದಿಪಡಿಸಿದ ಗುರಿಗಳು ಮತ್ತು ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಆಚರಣೆ ನಡೆಯುತ್ತದೆ.

ಮಹತ್ವವೇನು?

ವಿಶ್ವ ಮಲೇರಿಯಾ ದಿನವು ರೋಗದ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ ಅದನ್ನು ತಡೆಗಟ್ಟುವ ಪ್ರಯತ್ನಗಳ ಬಗ್ಗೆ ಜಾಗೃತಿ ಮೂಡಿಸಲು ಒಂದು ಅವಕಾಶವಾಗಿದೆ. ಮಲೇರಿಯಾ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಮತ್ತು ಸಂಸ್ಥೆಗಳು ಒಗ್ಗೂಡಲು ಇದು ಒಂದು ಅವಕಾಶ ಮಾಡಿಕೊಡುತ್ತದೆ. ಹಾಗಾಗಿ ಈ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಈ ರೋಗವನ್ನು ನಿಯಂತ್ರಣ ಮಾಡಬೇಕಿದೆ.

ಇದನ್ನೂ ಓದಿ: ಶುದ್ಧ ಚಿನ್ನ ಯಾವುದು? 24 ಕ್ಯಾರಟ್, 22 ಕ್ಯಾರಟ್, 18 ಕ್ಯಾರಟ್ ಯಾವ ಚಿನ್ನ ಬೆಸ್ಟ್? 

ಮಲೇರಿಯಾ ರೋಗವನ್ನು ತಡೆಗಟ್ಟುವುದು ಹೇಗೆ?

ರೋಗವನ್ನು ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ ಎನ್ನುವುದನ್ನು ನೀವು ಕೇಳಿರಬಹುದು. ಹಾಗಾಗಿ ರಾತ್ರಿಯಲ್ಲಿ ಹೊರಗೆ ಬರುವಾಗ ಉದ್ದನೆಯ ತೋಳು, ಪ್ಯಾಂಟ್ ಹೊಂದಿರುವ ಉಡುಪುಗಳನ್ನೇ ಧರಿಸಿ. ರಾತ್ರಿ ಸಮಯದಲ್ಲಿ ಮಲುಗುವ ಜಗದಲ್ಲಿ ಸೊಳ್ಳೆ ಪರದೆಗಳನ್ನು ಬಳಸಿ. ಮನೆಯ ಪರಿಸರದಲ್ಲಿ ನೀರು ನಿಲ್ಲಲು ಎಂದಿಗೂ ಅವಕಾಶ ಕೊಡಬೇಡಿ. ಯಾವಾಗಲೂ ನೀರಿನ ತೊಟ್ಟಿಗಳಿಗೆ ಮುಚ್ಚಳ ಮುಚ್ಚುವುದನ್ನು ಮರೆಯಬೇಡಿ. ಮಾನ್ಸೂನ್ ಅಥವಾ ಬೇಸಿಗೆಯಲ್ಲಿ ನಿಮ್ಮನ್ನು ಚೆನ್ನಾಗಿ ಹೈಡ್ರೇಟ್ ಆಗಿರಿಸಿಕೊಳ್ಳಿ ಇದರಿಂದ ಮಲೇರಿಯಾ ರೋಗವನ್ನು ತಡೆಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ