Sign In

By signing in or creating an account, you agree with Associated Broadcasting Company's Terms & Conditions and Privacy Policy.

World Meteorological Day 2025: ವಿಶ್ವ ಹವಾಮಾನ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

ಹವಾಮಾನದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಈ ಸೃಷ್ಟಿಯಲ್ಲಿರುವ ಜೀವಿಗಳ ಮೇಲೆ ಅಡ್ಡಪರಿಣಾಮಗಳು ಬೀರುತ್ತದೆ. ಇದರ ಮಹತ್ವವನ್ನು ಗಮನಿಸಿಯೇ ಇದಕ್ಕೂ ಒಂದು ವಿಶೇಷ ದಿನವನ್ನು ಮೀಸಲಿಡಲಾಗಿದೆ. ಅದುವೇ ಮಾರ್ಚ್‌ 23. ಪ್ರತಿ ವರ್ಷ ಈ ದಿನವನ್ನು ವಿಶ್ವ ಹವಾಮಾನ ದಿನ ಎಂದು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಆಚರಣೆ ಯಾವಾಗದಿಂದ ಶುರುವಾಯಿತು? ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

World Meteorological Day 2025: ವಿಶ್ವ ಹವಾಮಾನ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 22, 2025 | 5:23 PM

ಹವಾಮಾನ (Weather) ವು ಮನುಷ್ಯನ ದೈನಂದಿನ ಜೀವನದೊಂದಿಗೆ ಬೆಸೆದುಕೊಂಡಿದೆ. ಆದರೆ ಮನುಷ್ಯನ ಸ್ವಾರ್ಥಭರಿತ ಚಟುವಟಿಕೆಗಳಿಂದಾಗಿ ಹವಾಮಾನ ಬದಲಾವಣೆಗಳು ಆಗುತ್ತಲಿದೆ. ಆದರೆ ಮಾನವನ ಸುರಕ್ಷತೆಗೆ ಮತ್ತು ಯೋಗಕ್ಷೇಮಕ್ಕೆ ಭೌಗೋಳಿಕ ಹವಾಮಾನ (Geographic climate) ಚೆನ್ನಾಗಿರುವುದು ಬಹಳ ಮುಖ್ಯ ಹವಾಮಾನ ನೈಸರ್ಗಿಕ ವಾತಾವರಣದ ಮೇಲೆ ಮಾನವನ ಆರೋಗ್ಯಯುತ ಬದುಕು ಅವಲಂಬಿಸಿದೆ. ಹವಾಮಾನಶಾಸ್ತ್ರಜ್ಞರು (Meteorologists) ತಾಪಮಾನ, ಆರ್ದ್ರತೆ, ಒತ್ತಡ, ಗಾಳಿಯ ವೇಗ, ಮಳೆ ಮತ್ತು ಗಾಳಿಯ ಗುಣಮಟ್ಟವನ್ನು ಅಳೆಯಲು ಮಳೆ ಮಾಪಕ, ಅನಿಮೋಮೀಟರ್, ಥರ್ಮಾಮೀಟರ್ ಸೇರಿದಂತೆ ವಿವಿಧ ಉಪಕರಣಗಳನ್ನು ಬಳಸಿಕೊಂಡು ಹವಾಮಾನವನ್ನು ಮುನ್ಸೂಚನೆ ನೀಡುತ್ತಾರೆ. ಹವಾಮಾನ ಬದಲಾವಣೆಯಿಂದ ಉಂಟಾಗುವ ವೈಫರೀತ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 23ರಂದು ವಿಶ್ವ ಹವಾಮಾನ ದಿನ (World Meteorological Day) ವನ್ನು ಆಚರಿಸಲಾಗುತ್ತಿದೆ.

ವಿಶ್ವ ಹವಾಮಾನ ದಿನದ ಇತಿಹಾಸ

1950ರ ಮಾರ್ಚ್‌ 23ರಂದು ವಿಶ್ವ ಹವಾಮಾನ ಸಂಸ್ಥೆ ಒಪ್ಪಂದ ಅಸ್ತಿತ್ವಕ್ಕೆ ಬಂದಿತು. 1873ರಲ್ಲಿ ರಚನೆಯಾದ ಅಂತಾರಾಷ್ಟ್ರೀಯ ಹವಾಮಾನ ಸಂಸ್ಥೆಯು 1950ರಲ್ಲಿ ಡಬ್ಲ್ಯುಎಂಒ ಆಗಿ ಬದಲಾಯಿತು. 1950 ಮಾರ್ಚ್‌ 23ರಂದು ವಿಶ್ವ ಹವಾಮಾನ ಸಂಸ್ಥೆಯು ವಿಶ್ವ ಹವಾಮಾನ ದಿನವನ್ನು ಆಚರಿಸಲು ಆರಂಭಿಸಿತು. ಜನರ ಯೋಗ ಕ್ಷೇಮ, ಸುರಕ್ಷತೆಗೆ ಹವಾಮಾನದ ಕೊಡುಗೆ ಅತ್ಯಂತ ಮಹತ್ವವನ್ನು ತಿಳಿಸಲು ಈ ದಿನವನ್ನು ಆಚರಿಸುತ್ತ ಬರಲಾಗಿದೆ.

ಇದನ್ನೂ ಓದಿ: ಗ್ರೀನ್ ಟೀ ಇಷ್ಟಪಟ್ಟು ಸವಿಯುವ ವ್ಯಕ್ತಿಗಳ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ವಿಶ್ವ ಹವಾಮಾನ ದಿನದ ಮಹತ್ವ

ಹವಾಮಾನವು ಪ್ರತಿ ಕ್ಷಣ ಕ್ಷಣಕ್ಕೂ ಬದಲಾಗುವುದರಿಂದ ವಿಶ್ವದ ಎಲ್ಲಾ ರಾಷ್ಟ್ರಗಳು ಹವಾಮಾನ ವರದಿಗೆ ಬಹಳಷ್ಟು ಮಹತ್ವ ನೀಡುತ್ತವೆ. ಹವಾಮಾನ ಬದಲಾವಣೆಯಿಂದ ಆಗುವ ವ್ಯತ್ಯಯ್ಯಗಳ ಬಗ್ಗೆ ಅರಿವು ಮೂಡಿಸುವುದು. ಭೂಮಿಯ ಮೇಲಿನ ಹವಾಮಾನ ವೈಪರಿತ್ಯವನ್ನು ತಡೆಯುವುದು ಹಾಗೂ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ವಿಶ್ವ ಹವಾಮಾನ ದಿನವು ಮಹತ್ವದ್ದಾಗಿದೆ. ಈ ಹಿನ್ನಲೆಯಲ್ಲಿ ಈ ವಿಶೇಷ ದಿನದಂದು ವಿವಿಧ ಸಂಘ ಸಂಸ್ಥೆಗಳು ಹವಾಮಾನ ಬದಲಾವಣೆಯಿಂದ ಆಗುವ ವ್ಯತ್ಯಯ್ಯಗಳ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಾಗಾರ, ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!