AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Milk Day 2025: ವಿಶ್ವ ಹಾಲು ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ? ಈ ವಿಶೇಷ ದಿನದ ಹಿನ್ನೆಲೆ ತಿಳಿಯಿರಿ

ಕ್ಯಾಲ್ಸಿಯಂನಿಂದ ಸಮೃದ್ಧವಾಗಿರುವ ಹಾಲು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದಕ್ಕಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಹಾಲು ಕುಡಿತಾರೆ. ಹೀಗೆ ಜಾಗತಿಕ ಆಹಾರವಾಗಿ ಹಾಲಿನ ಮಹತ್ವವನ್ನು ಎಲ್ಲರಿಗೂ ತಿಳಿಸಲು, ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಈ ಉದ್ಯಮಕ್ಕೆ ಬೆಂಬಲ ನೀಡಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ.

World Milk Day 2025: ವಿಶ್ವ ಹಾಲು ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ? ಈ ವಿಶೇಷ ದಿನದ ಹಿನ್ನೆಲೆ ತಿಳಿಯಿರಿ
ವಿಶ್ವ ಹಾಲು ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 31, 2025 | 9:53 PM

Share

ಕ್ಯಾಲ್ಸಿಯಂ ಸೇರಿದಂತೆ ಹಲವಾರು ಪೋಷಕಾಂಶಗಳನ್ನು ಹೊಂದಿರುವ ಹಾಲು (Milk) ನಮ್ಮ ದೇಹವನ್ನು ಆರೋಗ್ಯಕರವಾಗಿಡುವಲ್ಲಿ, ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮೂಳೆಗಳನ್ನು ಬಲಪಡಿಸುವುದರಿಂದ ಹಿಡಿದು ಸ್ನಾಯುಗಳ ಬೆಳವಣಿಗೆಯ ವರೆಗೆ ಹಾಲು ಹಲವಾರು ಪ್ರಯೋಜನಗಳನ್ನು ಒಳಗೊಂಡಿದೆ. ಇದಕ್ಕಾಗಿಯೇ ಪ್ರತಿನಿತ್ಯ ಒಂದು ಲೋಟ ಹಾಲನ್ನು ಕುಡಿಯಲು ಸಲಹೆ ನೀಡುತ್ತಾರೆ. ಹೀಗೆ ಕ್ಯಾಲ್ಸಿಯಂನಿಂದ  ಸಮೃದ್ಧವಾಗಿರುವ ಹಾಲು ದೇಹದ ಒಟ್ಟಾರೆ ಬೆಳವಣಿಗೆಗೆ ಬಹಳ ಮುಖ್ಯ. ಹಾಲಿನ ಈ ಮಹತ್ವವನ್ನು ಗಮನದಲ್ಲಿಟ್ಟುಕೊಂಡು,  ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು (World Milk Day) ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಹಾಲು ದಿನದ ಇತಿಹಾಸ:

ಡೈರಿ ಉದ್ಯಮವನ್ನು ಗುರುತಿಸಲು ಮತ್ತು ಹಾಲಿನ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯು 2001 ರಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ಪ್ರಾರಂಭಿಸಿತು. ಅಂದಿನಿಂದ ಪ್ರತಿವರ್ಷ ವಿಶ್ವ ಹಾಲು ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಆಲೂಗಡ್ಡೆ ಪ್ರಿಯರೇ… ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?

ಇದನ್ನೂ ಓದಿ
Image
ಅಂತಾರಾಷ್ಟ್ರೀಯ ಆಲೂಗಡ್ಡೆ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?
Image
ಸಹೋದರರ ದಿನ ಆಚರಣೆ ಮಾಡುವುದು ಇದೆ ಉದ್ದೇಶಕ್ಕಾಗಿ!
Image
ಪರಿಸರ ವ್ಯವಸ್ಥೆಯನ್ನು ಸ್ಥಿರವಾಗಿಡುವಲ್ಲಿ ಆಮೆಗಳ ಪಾತ್ರ ಅಪಾರ
Image
ಜೀವವೈವಿಧ್ಯತೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ವಿಶ್ವ ಹಾಲು ದಿನದ ಆಚರಣೆಯ ಉದ್ದೇಶವೇನು?

ಹಾಲು ದಿನವನ್ನು ಆಚರಿಸುವ ಉದ್ದೇಶವು ಜನರಿಗೆ ಅದರ ಪ್ರಯೋಜನಗಳು ಮತ್ತು ಮಹತ್ವವನ್ನು ಅರ್ಥಮಾಡಿಸುವುದು ಹಾಗೂ ಹಾಲು ಸ್ಥಳೀಯ ಆರ್ಥಿಕತೆ ಮತ್ತು ಸಮುದಾಯಗಳಿಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ಜನರಿಗೆ ತಿಳಿಸುವುದಾಗಿದೆ.

FAO ಪ್ರಕಾರ, ಸುಮಾರು ಆರು ಶತಕೋಟಿ ಜನರು ಡೈರಿ ಉತ್ಪನ್ನಗಳನ್ನು ಸೇವಿಸುತ್ತಾರೆ. ಇಷ್ಟೇ ಅಲ್ಲ, ಡೈರಿ ವ್ಯವಹಾರವು ಒಂದು ಶತಕೋಟಿಗೂ ಹೆಚ್ಚು ಜನರಿಗೆ ಜೀವನೋಪಾಯವನ್ನು ಗಳಿಸಲು ಸಹಾಯ ಮಾಡಿದೆ. ಹಾಗಾಗಿ ಜಗತ್ತಿನಲ್ಲಿ ಡೈರಿ ಉತ್ಪನ್ನಗಳನ್ನು ಉತ್ತೇಜಿಸಲು ಮತ್ತು ಅವುಗಳಿಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಒದಗಿಸುಲು ಪ್ರತಿ ವರ್ಷ ಜೂನ್ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ