AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Nature Conservation Day 2024: ವಿಶ್ವ ಪ್ರಕೃತಿ ಸಂರಕ್ಷಣಾ ದಿನ; ಮನುಷ್ಯನ ದುರಾಸೆಗೆ ಬರಿದಾಗದಿರಲಿ ಪ್ರಕೃತಿ

ಮಾನವನು ತನ್ನ ಸ್ವಾರ್ಥಕ್ಕಾಗಿ ಪ್ರಕೃತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ನಾಶ ಪಡಿಸುತ್ತಾ ಹೋಗುತ್ತಿದ್ದಾನೆ. ಆದರೆ ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವತ್ತ ಗಮನ ಹರಿಸದಿದ್ದರೆ ನಮ್ಮ ಮುಂದಿನ ಪೀಳಿಗೆಯವರು ಸಂಕಷ್ಟಕ್ಕೆ ಈಡಾಗುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

World Nature Conservation Day 2024: ವಿಶ್ವ ಪ್ರಕೃತಿ ಸಂರಕ್ಷಣಾ ದಿನ; ಮನುಷ್ಯನ ದುರಾಸೆಗೆ ಬರಿದಾಗದಿರಲಿ ಪ್ರಕೃತಿ
World Nature Conservation Day 2024
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on:Jul 28, 2024 | 10:50 AM

Share

ಮಾನವನು ದಿನ ಕಳೆಯುತ್ತಿದ್ದಂತೆ ತನ್ನ ಅತಿಯಾಸೆಯಿಂದ ಪ್ರಕೃತಿಯನ್ನು ಕೊಳ್ಳೆ ಹೊಡೆಯುತ್ತಿದ್ದಾನೆ, ಹೀಗಾಗಿ ಈ ಪರಿಸರವೇ ಬರಿದಾಗುತ್ತಿದೆ. ನೈಸರ್ಗಿಕ ಸಂಪನ್ಮೂಲಗಳಾದ ಗಾಳಿ, ನೀರು, ಮಣ್ಣು, ಖನಿಜಗಳು, ಪ್ರಾಣಿಪಕ್ಷಿಗಳು ಹಾಗೂ ಸಸ್ಯವರ್ಗಗಳು ಕ್ಷೀಣಿಸುತ್ತಿದೆ. ಅದಲ್ಲದೇ, ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಸೇರಿದಂತೆ ಇನ್ನಿತ್ತರ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗೆ ಮುಂದುವರೆದರೆ ಈ ಭೂಮಿಯೂ ಬರಿದಾಗಿ ನಮ್ಮ ಮುಂದಿನ ಪೀಳಿಗೆಯವರು ಬದುಕುವುದೇ ಕಷ್ಟವಾಗಬಹುದು. ಹೀಗಾಗಿ ಪರಿಸರ ಸಂರಕ್ಷಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಇತಿಹಾಸ:

ವಿಶ್ವ ಪ್ರಕೃತಿ ಸಂರಕ್ಷಣಾ ದಿನವು ಯಾವಾಗ ಆಚರಿಸಲಾಯಿತು ಎನ್ನುವುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದರೆ ಪ್ರಕೃತಿಯೂ ನೀಡಿದ ಸಂಪನ್ಮೂಲಗಳನ್ನು ದುರುಪಯೋಗ ಮಾಡದೇ, ನಮ್ಮ ಮುಂದಿನ ಪೀಳಿಗೆಯವರಿಗೆ ಉಳಿಸುವ ಸಲುವಾಗಿ ಅದನ್ನು ಹೇಗೆ ಸಂರಕ್ಷಿಸಬೇಕು ಎನ್ನುವ ಕುರಿತು ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರದಂದು ಸ್ನೇಹಿತರ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಮಹತ್ವ ಹಾಗೂ ಆಚರಣೆ:

ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ, ಜನರು ಪ್ರಕೃತಿಯನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಎನ್ನುವ ಆತ್ಮಾವಲೋಕನ ಮಾಡುವುದು ಮತ್ತು ಅದನ್ನು ಸಂರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು. ಅದಲ್ಲದೇ ಪ್ರತಿಯೊಬ್ಬರಿಗೂ ಪ್ರಕೃತಿಯನ್ನು ಉಳಿಸುವ ಬಗ್ಗೆ ಅರಿವು ಮೂಡಿಸುವುದಾಗಿದೆ. ಈ ನಿಟ್ಟಿನಲ್ಲಿ ಜಗತ್ತಿನಾದ್ಯಂತ ಪ್ರಕೃತಿಯನ್ನು ಉಳಿಸಲು ಜಾಗೃತಿ ಮೂಡಿಸಲು ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:49 am, Sun, 28 July 24

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ