World Pulses Day 2024: ಪೌಷ್ಟಿಕಾಂಶಯುಕ್ತ ಈ ಬೇಳೆಕಾಳುಗಳು ಆರೋಗ್ಯ ವೃದ್ಧಿಗೆ ಅಗತ್ಯ

ಬಹುತೇಕ ಸಸ್ಯಾಹಾರಿಗಳು ಈ ಬೇಳೆ ಕಾಳುಗಳನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಈ ಬೇಳೆ ಕಾಳುಗಳನ್ನು ನಿಯಮಿತವಾಗಿ ಆಹಾರಗಳನ್ನು ಬಳಸಿ ಪೌಷ್ಟಿಕಾಂಶಯುಕ್ತ ಆಹಾರವನ್ನು ಪಡೆಯುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಫೆಬ್ರವರಿ 10 ರಂದು ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಆಚರಿಸಲಾಗುತ್ತದೆ.

World Pulses Day 2024: ಪೌಷ್ಟಿಕಾಂಶಯುಕ್ತ ಈ ಬೇಳೆಕಾಳುಗಳು ಆರೋಗ್ಯ ವೃದ್ಧಿಗೆ ಅಗತ್ಯ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 08, 2024 | 5:19 PM

ದಿನನಿತ್ಯದ ಆಹಾರಗಳಲ್ಲಿ ಬಳಸಲಾಗುವ ಈ ಬೇಳೆ ಕಾಳುಗಳ ಪ್ರಯೋಜನವು ಅಷ್ಟಿಷ್ಟಲ್ಲ. ಹಿಂದಿನಿಂದಲೂ ದ್ವಿದಳ ಧಾನ್ಯಗಳನ್ನು ಬೇರೆ ಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತ ಬರಲಾಗುತ್ತಿದೆ. ಆರೋಗ್ಯ ವೃದ್ಧಿಯಲ್ಲಿ ಈ ಬೇಳೆಕಾಳುಗಳನ್ನು ಮೀರಿಸುವ ಮತ್ತೊಂದು ಆಹಾರವಿಲ್ಲ. ಈ ದ್ವಿದಳ ಧಾನ್ಯಗಳಲ್ಲಿ ಪೌಷ್ಠಿಕಾಂಶಗಳು ಹೇರಳವಾಗಿದ್ದು, ಫೈಬರ್, ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಸೂಪರ್ ಫುಡ್ ಎಂದೆನಿಸಿಕೊಂಡಿರುವ ಈ ಬೇಳೆಕಾಳುಗಳಲ್ಲಿ ವಿಶಿಷ್ಟ ಆರೋಗ್ಯ ಪ್ರಯೋಜನಗಳು ಅಡಗಿದೆ. ಬೇಳೆಕಾಳುಗಳನ್ನುಹೆಚ್ಚಾಗಿ ಬಳಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 10 ರಂದು ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ದ್ವಿದಳ ಧಾನ್ಯಗಳ ದಿನದ ಇತಿಹಾಸ:

ಪ್ರತಿಯೊಬ್ಬ ನಾಗರೀಕರಿಗೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಈ ದ್ವಿದಳ ಧಾನ್ಯಗಳ ಪ್ರಾಮುಖ್ಯತೆಯನ್ನು ತಿಳಿಸುವ ಉದ್ದೇಶದಿಂದಾಗಿ 68ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ 2016 ರಲ್ಲಿ “ಅಂತರಾಷ್ಟ್ರೀಯ ದ್ವಿದಳ ಧಾನ್ಯಗಳ ವರ್ಷ”ವನ್ನಾಗಿ ಆಚರಿಸಲಾಯಿತು. ವಿಶ್ವಸಂಸ್ಥೆಯ ಸಹ ಸಂಸ್ಥೆಯಾದ ಜಾಗತಿಕ ಆಹಾರ ಮತ್ತು ಕೃಷಿ ಸಂಸ್ಥೆ ಈ ವರ್ಷಾಚರಣೆಯ ಮುಂದಾಳತ್ವ ವಹಿಸಿತು. ಹೀಗಾಗಿ ಪ್ರತಿ ವರ್ಷ ಫೆಬ್ರವರಿ 10ನ್ನು ಅಂತರಾಷ್ಟ್ರೀಯ ದ್ವಿದಳ ಧಾನ್ಯಗಳ ದಿನವಾಗಿ ಆಚರಿಸಲಾಗುತ್ತಿದೆ. ಕಳೆದ 2019ರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ.

ವಿಶ್ವ ದ್ವಿದಳ ಧಾನ್ಯಗಳ ದಿನದ ಮಹತ್ವ:

ಆರೋಗ್ಯಕ್ಕೆ ಪೌಷ್ಟಿಕಾಂಶಗಳನ್ನು ನೀಡುವ ಈ ದ್ವಿದಳ ಧಾನ್ಯಗಳ ಪ್ರಾಮುಖ್ಯತೆಯನ್ನು ತಿಳಿಸುವುದು, ದ್ವಿದಳ ಧಾನ್ಯಗಳಲ್ಲಿನ ಪೌಷ್ಠಿಕಾಂಶಗಳ ಉಪಯೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ದಿನವನ್ನು ಆಚರಿಸುವ ಮುಖೇನವಾಗಿ ಜನರು ದಿನನಿತ್ಯ ಬಳಸುವ ಆಹಾರದಲ್ಲಿ ದ್ವಿದಳ ಧಾನ್ಯಗಳ ಬಳಕೆ ಹೆಚ್ಚಿಸುವುದಾಗಿದೆ. ಅದಲ್ಲದೇ ಕೃಷಿಯಲ್ಲಿ ದ್ವಿದಳ ಧಾನ್ಯಗಳ ಪ್ರಾಮುಖ್ಯತೆಯನ್ನು ತಿಳಿ ಹೇಳುವ ಮೂಲಕ ದ್ವಿಧಾನ್ಯಗಳನ್ನು ಬೆಳೆಯುವ ಕೃಷಿಕರಿಗೆ ಇನ್ನಷ್ಟು ಬೆಂಬಲವನ್ನು ನೀಡುವುದಾಗಿದೆ.

ಇದನ್ನೂ ಓದಿ: ಆರೋಗ್ಯದ ಹಿತಕ್ಕಾಗಿ ಜಂತಹುಳು ನಿವಾರಣೆಯ ಕುರಿತು ಅರಿವು ಮೂಡಿಸುವುದು ಅಗತ್ಯ

ದಿನನಿತ್ಯ ದ್ವಿದಳ ಸೇವನೆಯಿಂದ ಪ್ರಯೋಜನಗಳಿವು:

ದಿನನಿತ್ಯ ಆಹಾರಗಳಲ್ಲಿ ದ್ವಿದಳ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ದ್ವಿದಳ ಧಾನ್ಯಗಳು ಎಚ್‌ಬಿ ಅಥವಾ ಹಿಮೋಗ್ಲೋಬಿನ್ ಅನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಹೀಗಾಗಿ ಮಧುಮೇಹಿಗಳು ಈ ದ್ವಿದಳ ಧಾನ್ಯಗಳನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಿಕೊಳ್ಳಬಹುದು. ಕೂದಲು ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುವುದಲ್ಲದೇ ತೂಕನಷ್ಟಕ್ಕೆ ಸಹಕಾರಿಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ