AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Ranger Day 2024: ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ರೇಂಜರ್‌ಗಳ ಪಾತ್ರವೇನು?

ತಮ್ಮ ಪ್ರಾಣವನ್ನು ಲೆಕ್ಕಿಸದೆ ಬಗ್ಗೆ, ಅಪಾಯಗಳ ನಡುವೆ ಅರಣ್ಯ ಹಾಗೂ ಉದ್ಯಾನವನ್ನು ರಕ್ಷಿಸಲು ಕೆಲಸ ಮಾಡುವ ಎಲ್ಲಾ ರೇಂಜರ್‌ಗಳ ಕೆಲಸವನ್ನು ಪ್ರಶಂಸಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಜುಲೈ 31 ರಂದು ವಿಶ್ವ ರೇಂಜರ್ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

World Ranger Day 2024: ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ರೇಂಜರ್‌ಗಳ ಪಾತ್ರವೇನು?
World Ranger Day 2024Image Credit source: vectorstock
ಸಾಯಿನಂದಾ
| Edited By: |

Updated on: Jul 30, 2024 | 6:40 PM

Share

ಪ್ರಕೃತಿಯನ್ನು ಉಳಿಸುವಲ್ಲಿ ಮತ್ತು ನಿರ್ವಹಿಸುವಲ್ಲಿ ಪಾರ್ಕ್ ರೇಂಜರ್‌ಗಳ ಕೊಡುಗೆಯನ್ನು ಗೌರವಿಸಲು ಇಂಟರ್ನ್ಯಾಷನಲ್ ರೇಂಜರ್ ಫೆಡರೇಶನ್ ಈ ದಿನವನ್ನು ಪ್ರಾರಂಭಿಸಿತು. ಉದ್ಯಾನವನಗಳು, ನೈಸರ್ಗಿಕವಾಗಿ ಸಂರಕ್ಷಿತ ಪ್ರದೇಶಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ರೇಂಜರ್ಸ್ ಗಳು ಹೊಂದಿದ್ದಾರೆ. ತಮ್ಮ ಪ್ರಾಣವನ್ನು ಲೆಕ್ಕಿಸದೆ ಅಪಾಯಗಳ ನಡುವೆ ಅರಣ್ಯ ಹಾಗೂ ಉದ್ಯಾನವನವನ್ನು ಎಲ್ಲಾ ರೇಂಜರ್‌ಗಳ ಕೆಲಸವನ್ನು ಪ್ರಶಂಸಿಸಲು ಮತ್ತು ಗೌರವಿಸುವ ದಿನವು ಇದಾಗಿದೆ.

ವಿಶ್ವ ರೇಂಜರ್​ ದಿನದ ಇತಿಹಾಸ:

2007 ರಲ್ಲಿ ಇಂಟರ್ನ್ಯಾಷನಲ್ ರೇಂಜರ್ ಫೆಡರೇಶನ್ (IRF)ನ 15 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮೊದಲ ಬಾರಿಗೆ ವಿಶ್ವ ರೇಂಜರ್​ ದಿನವನ್ನು ಆಚರಿಸಲಾಯಿತು. ಇಂಟರ್ನ್ಯಾಷನಲ್ ರೇಂಜರ್ ಫೆಡರೇಶನ್ ಅನ್ನು 1992 ರಲ್ಲಿ ಸ್ಥಾಪಿಸಲಾಯಿತು. ಆ ಬಳಿಕ ವೇಲ್ಸ್ ಮತ್ತು ಇಂಗ್ಲೆಂಡ್‌ನಲ್ಲಿ ರೇಂಜರ್‌ಗಳನ್ನು ಪ್ರತಿನಿಧಿಸುವ SCRA (ಸ್ಕಾಟಿಷ್ ಕಂಟ್ರಿಸೈಡ್ ರೇಂಜರ್ಸ್ ಅಸೋಸಿಯೇಷನ್), CMA (ಕಂಟ್ರಿಸೈಡ್ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್, ವೇಲ್ಸ್ ಮತ್ತು ಇಂಗ್ಲೆಂಡ್‌ನಲ್ಲಿ ರೇಂಜರ್‌ಗಳನ್ನು ಪ್ರತಿನಿಧಿಸುವ ಸಂಘ) ಮತ್ತು ANPR (ಯುಎಸ್ ಅಸೋಸಿಯೇಶನ್ ಆಫ್ ನ್ಯಾಷನಲ್ ಪಾರ್ಕ್ ರೇಂಜರ್ಸ್) ಸಂಘಟನೆಗಳು ಸೇರಿಕೊಂಡು ಜಂಟಿ ಒಪ್ಪಂದಕ್ಕೆ ಸಹಿ ಹಾಕಿತು. ಈ ಒಪ್ಪಂದದ ಮುಖ್ಯ ಉದ್ದೇಶ ನಮ್ಮ ಸಾಂಸ್ಕೃತಿಕ ಮತ್ತು ನೈಸರ್ಗಿಕ ಪರಂಪರೆಯನ್ನು ಸಂರಕ್ಷಿಸಲು ರೇಂಜರ್‌ಗಳು ಪ್ರಪಂಚದಾದ್ಯಂತ ನಿರ್ವಹಿಸುವ ಪ್ರಮುಖ ಕೆಲಸಕ್ಕಾಗಿ ಸಾರ್ವಜನಿಕ ಬೆಂಬಲ ಮತ್ತು ತಿಳುವಳಿಕೆಯನ್ನು ಹೆಚ್ಚಿಸುವುದಾಗಿತ್ತುದಾಗಿತ್ತು. ಅಂದಿನಿಂದ ಪ್ರತಿ ವರ್ಷ ವಿಶ್ವ ರೇಂಜರ್ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವ ರೇಂಜರ್​ ದಿನದ ಮಹತ್ವ ಹಾಗೂ ಆಚರಣೆ:

ಅರಣ್ಯಗಳು, ನೈಸರ್ಗಿಕ ಉದ್ಯಾನವನಗಳು ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಅರಣ್ಯ ರಕ್ಷಕರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಈ ದಿನವು ಮಹತ್ವದ್ದಾಗಿದೆ. ಈ ರಕ್ಷಣೆ ಕೆಲಸದ ವೇಳೆಯಲ್ಲಿ ಅನೇಕ ಅರಣ್ಯ ರಕ್ಷಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಕೆಲವೊಮ್ಮೆ ಕಳ್ಳ ಬೇಟೆಗಾರರ ಕೈಗೆ ಸಿಕ್ಕಿ ಸಾವನ್ನಪ್ಪುವ ಸಂಭವವು ಹೆಚ್ಚು. ಹೀಗಾಗಿ ಕರ್ತವ್ಯದ ವೇಳೆ ಸಾವನ್ನಪ್ಪಿದವ ರೇಂಜರ್ಸ್ ಗಳಿಗೆ ಈ ದಿನದಂದು ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಅದಲ್ಲದೇ ಪರಿಸರ ಹಾಗೂ ವನ್ಯಜೀವಿಗಳ ರಕ್ಷಣೆಯಲ್ಲಿ ರೇಂಜರ್​ಗಳ ಕೊಡುಗೆ ಮತ್ತು ತ್ಯಾಗವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಈ ದಿನದಂದು ಹಮ್ಮಿಕೊಳ್ಳಲಾಗುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ