AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಜಗತ್ತಿನಾದಂತ್ಯ ನಾನಾ ಕಾರಣಗಳಿಂದ ಮೂಲ ಸೌಕರ್ಯಗಳಿಂದ ವಂಚಿತರಾಗಿ ನಿರಾಶ್ರಿತರಾದವರು ಅನೇಕ ಜನರಿದ್ದಾರೆ. ಇರಲು ಸೂರಿಲ್ಲ, ತೊಟ್ಟುಕೊಳ್ಳಲು ಬಟ್ಟೆಯಿಲ್ಲ. ತಿನ್ನಲು ಆಹಾರವಿಲ್ಲ. ಅಂತಹವರು ಎದುರಿಸುತ್ತಿರುವ ಹೋರಾಟಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ನಿರಾಶ್ರಿತರ ದಿನ ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿ ಇಲ್ಲಿದೆ.

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ವಿಶ್ವ ನಿರಾಶ್ರಿತರ ದಿನImage Credit source: Pinterest
ಸಾಯಿನಂದಾ
|

Updated on: Jun 20, 2026 | 10:02 AM

Share

ಯುದ್ಧ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ ಹಾಗೂ ಹಿಂಸಾಚಾರ ಹೀಗೆ ನಾನಾ ಕಾರಣಗಳಿಂದ ಊರು, ದೇಶ ಬಿಟ್ಟು ಹೋಗುವವರೇ ಹೆಚ್ಚು. ಹೀಗೆ ಊರು ಬಿಟ್ಟು ಬೇರೆ ಕಡೆಗೆ ಹೋದವರು ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿದ್ದಾರೆ. ಅವರ ಬದುಕು ದಿನನಿತ್ಯ ಹೋರಾಟವಾಗಿದೆ. ಹೀಗಾಗಿ ಅಂತಹವರಿಗೆ ಮೂಲಸೌಕರ್ಯ ಹಾಗೂ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಲು, ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು (World Refugee Day) ಆಚರಿಸಲಾಗುತ್ತಿದೆ.

ವಿಶ್ವ ನಿರಾಶ್ರಿತರ ದಿನದ ಇತಿಹಾಸವೇನು?

ವಿಶ್ವಸಂಸ್ಥೆಯು ಡಿಸೆಂಬರ್ ತಿಂಗಳ ಜೂನ್ 20, 2000 ದಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲು ನಿರ್ಧರಿಸಿತು. ಅಂದಿನಿಂದ ಪ್ರತಿವರ್ಷ ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಪ್ರತ್ಯೇಕ ಸಂಘಟನೆಯನ್ನು ರಚಿಸಲಾಗಿದೆ. ಈ ಸಂಘಟನೆಯನ್ನು ದಿ ಯುನೈಟೆಡ್‌ ನೇಷನ್ಸ್‌ ಹೈ ಕಮಿಷನರ್ ಎಂದು ಹೆಸರಿಡಲಾಗಿದೆ. ಈ ಸಂಸ್ಥೆಯು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಸಹಾಯ ಮಾಡಲು, ಅವರಿಗೆ ಬದುಕು ಕಟ್ಟಿಕೊಡಲು ಕಾರ್ಯ ನಿರ್ವಹಿಸುತ್ತಿದೆ.

ಇದನ್ನೂ ಓದಿ: International Picnic Day 2026: ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಪಿಕ್ನಿಕ್‌ ಹೋಗುವ ಖುಷಿಯೇ ಬೇರೆ

ವಿಶ್ವ ನಿರಾಶ್ರಿತರ ದಿನದ ಮಹತ್ವವೇನು?

ವಿಶ್ವ ನಿರಾಶ್ರಿತರ ದಿನದಂದು ಈಗಾಗಲೇ ಲಕ್ಷಾಂತರ ನಿರ್ಗತಿಕರು ಆಹಾರ, ಬಟ್ಟೆ, ವಸತಿ, ಕುಟುಂಬ, ಶಿಕ್ಷಣ, ಮತ್ತು ಬದುಕುವ ಹಕ್ಕನ್ನೇ ಕಳೆದುಕೊಂಡವರ ಮೇಲೆ ಬೆಳಕು ಚೆಲ್ಲುವುದು. ನಿರಾಶ್ರಿತರ ಸ್ಥಿತಿಗತಿಗಳ ಬಗ್ಗೆ ಅರಿವು ಮೂಡಿಸುವುದು ಈ ದಿನ ಮೂಲ ಉದ್ದೇಶವಾಗಿದೆ. ಈ ದಿನದಂದು ಜಾಗೃತಿ ಕಾರ್ಯಾಗಾರಗಳು, ಶಿಬಿರಗಳು ಸೇರಿದಂತೆ ಇನ್ನಿತ್ತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ