AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ

ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಸೀರೆ ಬಹುಮುಖ್ಯ ಪಾತ್ರವನ್ನು ಹೊಂದಿದೆ. ಅಷ್ಟೇ ಅಲ್ಲದೆ ಸೀರೆಗಳು ಭಾರತದ ಪರಂಪರೆ ಮತ್ತು ಸಂಸ್ಕೃತಿಯೊಂದಿಗೆ ಬಹಳ ಹಿಂದಿನಿಂದಲೂ ಸಂಪರ್ಕ ಹೊಂದಿವೆ. ಹಾಗಾಗಿ ಸೀರೆಯ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ ಸಲುವಾಗಿ ಪ್ರತಿವರ್ಷ ಡಿಸೆಂಬರ್‌ 21 ರಂದು ವಿಶ್ವ ಸೀರೆ ದಿನವನ್ನು ಆಚರಿಸಲಾಗುತ್ತದೆ.

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ
ವಿಶ್ವ ಸೀರೆ ದಿನImage Credit source: Unsplash
ಮಾಲಾಶ್ರೀ ಅಂಚನ್​
|

Updated on: Dec 21, 2025 | 10:21 AM

Share

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ ಸಲುವಾಗಿ ಪ್ರತಿವರ್ಷ ಡಿಸೆಂಬರ್‌ 21 ರಂದು ವಿಶ್ವ ಸೀರೆ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಸೀರೆ ದಿನದ ಇತಿಹಾಸವೇನು?

ನೇಕಾರರ ಸಮುದಾಯ ಮತ್ತು ಸೀರೆಗಳ ವಿಶಿಷ್ಟ ಕಲೆಯನ್ನು ಗೌರವಿಸುವ ಉದ್ದೇಶದಿಂದ ವಿಶ್ವ ಸೀರೆ ದಿನವನ್ನು ಆಚರಿಸಲಾಗುತ್ತದೆ. ಸಾಮಾಜಿಕ ಕಾರ್ಯಕರ್ತರಾದ ಸಿಂಧೂರ ಕವಿತಿ ಮತ್ತು ನಿಸ್ತುಲಾ ಹೆಬ್ಬಾರ್ ಅವರು ಸೀರೆಗಳ ಸಂಕೀರ್ಣ ಕರಕುಶಲತೆ ಮತ್ತು ಶ್ರೀಮಂತ ಪರಂಪರೆಯನ್ನು  ಸಂಭ್ರಮಿಸುವ ಸಲುವಾಗಿ 2020 ರಲ್ಲಿ ಈ ದಿನದ ಆಚರಣೆಯನ್ನು ಪ್ರಾರಂಭಿಸಿದರು.  ಈ ಉಪಕ್ರಮವು ಸಾಮಾಜಿಕ ಮಾಧ್ಯಮ ಮತ್ತು ಫ್ಯಾಷನ್ ಸಮುದಾಯದ ಗಮನ ಸೆಳೆಯಿತು. ಮತ್ತು ಇದು ವಿಶ್ವಾದ್ಯಂತ ಈ ದಿನವನ್ನು ಪ್ರತಿವರ್ಷ ಡಿಸೆಂಬರ್‌ 21 ರಂದು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ

ವಿಶ್ವ ಸೀರೆ ದಿನದ ಮಹತ್ವವೇನು?

ಸಾಂಸ್ಕೃತಿಕ ಪರಂಪರೆಯನ್ನು ಆಚರಿಸುವುದು: ಸೀರೆ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದ್ದು, ಸಂಪ್ರದಾಯ, ಸೊಬಗು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸಲು ಮತ್ತು ಆಚರಿಸಲು ಈ ದಿನ ಒಂದು ಅವಕಾಶವನ್ನು ಒದಗಿಸುತ್ತದೆ.

ಭಾರತೀಯ ಕೈಮಗ್ಗಗಳನ್ನು ಉತ್ತೇಜಿಸುವುದು: ಭಾರತದ ಜವಳಿ ಉದ್ಯಮದ ಅವಿಭಾಜ್ಯ ಅಂಗವಾದ ಕೈಮಗ್ಗ ನೇಯ್ಗೆಯ ಕಲೆಯನ್ನು ಉತ್ತೇಜಿಸುವುದು ಮತ್ತು ಸಂರಕ್ಷಿಸುವುದು ವಿಶ್ವ ಸೀರೆ ದಿನದ ಪ್ರಮುಖ ಉದ್ದೇಶವಾಗಿದೆ. ಈ ದಿನವು ಕೈಮಗ್ಗ ಕೈಗಾರಿಕೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

ಕುಶಲಕರ್ಮಿಗಳನ್ನು ಗೌರವಿಸುವುದು: ಈ ದಿನ ಪ್ರತಿ ಸೀರೆಯ ಹಿಂದಿರುವ ನೇಕಾರರು ಮತ್ತು ಕುಶಲಕರ್ಮಿಗಳ ಪ್ರಯತ್ನಗಳನ್ನು ಗೌರವಿಸಲಾಗುತ್ತದೆ.

ಇದಲ್ಲದೆ ಸಾಂಪ್ರದಾಯಿಕ ಭಾರತೀಯ ಉಡುಪು ಸೀರೆಯ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವುದು ವಿಶ್ವ ಸೀರೆ ದಿನದ ಮುಖ್ಯ ಉದ್ದೇಶವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ