AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Statistics Day 2024: ಇಂದು ವಿಶ್ವ ಅಂಕಿ ಅಂಶ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ನಮ್ಮ ದೈನಂದಿನ ವ್ಯವಹಾರ ಮಾತ್ರವಲ್ಲದೆ ಯಾವುದೇ ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ನಿಖರವಾದ ಅಂಕಿಅಶಗಳು ತುಂಬಾನೇ ಮುಖ್ಯ. ಹಾಗಾಗಿ ಅಂಕಿ ಅಂಶಗಳ ಮಹತ್ವವನ್ನು ಸಾರಲು ಪ್ರತಿವರ್ಷ ಅಕ್ಟೋಬರ್‌ 20 ರಂದು ವಿಶ್ವ ಅಂಕಿಅಂಶ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

World Statistics Day 2024: ಇಂದು ವಿಶ್ವ ಅಂಕಿ ಅಂಶ ದಿನ; ಈ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ
World Statistics Day 2024
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Oct 20, 2024 | 10:05 AM

Share

ಒಂದು ಸಮಾಜವನ್ನು ರೂಪಿಸುವಲ್ಲಿ, ಜೀವನವನ್ನು ಸುಧಾರಿಸುವಲ್ಲಿ ಮತ್ತು ತಿಳುವಳಿಕೆಯುಳ್ಳ ಮಹತ್ವಪೂರ್ಣ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅಂಕಿಅಂಶಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಅಷ್ಟೇ ಅಲ್ಲದೆ ಸಮಾಜದ ಅಥವಾ ಒಂದು ದೇಶದ ವ್ಯಾಪಾರ ವ್ಯವಹಾರದಲ್ಲಿ ಅಥವಾ ಇನ್ಯಾವುದೇ ಕ್ಷೇತ್ರದಲ್ಲಿ ಅಂಕಿಅಂಶಗಳು ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಒಂದು ದೇಶದ ಅಭಿವೃದ್ಧಿಯಲ್ಲಿ ಅಂಕಿಅಂಶಗಳು ವಹಿಸುವ ಪಾತ್ರದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಪ್ರತಿವರ್ಷ ಅಕ್ಟೋಬರ್‌ 20 ರಂದು ವಿಶ್ವ ಅಂಕಿಅಂಶ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ವಿಶ್ವ ಅಂಕಿಅಂಶ ದಿನದ ಇತಿಹಾಸ:

ವಿಶ್ವಸಂಸ್ಥೆಯ ಅಂಕಿಅಂಶಗಳ ಆಯೋಗವು (UNSD) ಫೆಬ್ರವರಿ 2010 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 41 ನೇ ಅಧಿವೇಶನದಲ್ಲಿ ವಿಶ್ವ ಅಂಕಿಅಂಶಗಳ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮುಂದಿಟ್ಟಿತು. ಬಳಿಕ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿದ ನಿರ್ಣಯದ ಮೇರೆಗೆ ಮೊದಲ ಬಾರಿಗೆ ಅಕ್ಟೋಬರ್‌ 20, 2010 ರಲ್ಲಿ ವಿಶ್ವ ಅಂಕಿಅಂಶಗಳ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಅಕ್ಟೋಬರ್‌ 20 ನೇ ತಾರೀಕಿನಂದು ವಿಶ್ವ ಮಟ್ಟದಲ್ಲಿ ಅಂಕಿಅಂಶಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ಅಂಕಿಅಂಶ ದಿನದ ಮಹತ್ವ:

ಇಂದಿನ ವೇಗವಾಗಿ ಬೆಳೆಯುತ್ತಿರುವ ಈ ಜಗತ್ತಿನಲ್ಲಿ ವಿಶ್ವಾಸಾರ್ಹ ಮತ್ತು ನವೀಕೃತ ಮಾಹಿತ ಆಧಾರದ ಮೇಲೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ಅಂಕಿಅಂಶಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಅಂಕಿ ಅಂಶಗಳು ನೀತಿ ನಿರೂಪಕರಿಗೆ ಸಾಮಾಜಿಕ ಪ್ರವೃತ್ತಿಗಳು, ಜನಸಂಖ್ಯೆ, ಆರ್ಥಿಕ ಕಾರ್ಯಕ್ಷಮತೆ ಸೇರಿದಂತೆ ಇತ್ಯಾದಿ ಪ್ರಮುಖ ಡೇಟಾಗಳ ಒಳನೋಟವನ್ನು ಒದಗಿಸುತ್ತವೆ. ನಮ್ಮ ದೈನಂದಿನ ವ್ಯವಹಾರ ಮಾತ್ರವಲ್ಲದೆ ಯಾವುದೇ ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಅಂಕಿಅಶಗಳು ತುಂಬಾನೇ ಮುಖ್ಯ. ಹಾಗಾಗಿ ಅಂಕಿ ಅಂಶಗಳ ಮಹತ್ವವನ್ನು ಸಾರಲು ಹಾಗೂ ಅಂಕಿಅಂಶಗಳ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ವಿಶ್ವ ಅಂಕಿಅಂಶ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಅಂಕಿಅಂಶಗಳು ಏಕೆ ಮುಖ್ಯ?

ಅಂಕಿಅಂಶಗಳನ್ನು ಆಧುನಿಕ ಆಡಳಿತ ಮತ್ತು ಅರ್ಥಶಾಸ್ತ್ರ ಬೆನ್ನೆಲು ಅಂತಾನೇ ಹೇಳಬಹುದು. ಸರಿಯಾದ ಅಂಕಿಅಂಶಗಳಿಲ್ಲದೆ ಜನಸಾಮಾನ್ಯರ ಜೀವನದಲ್ಲಿಯೇ ಲೆಕ್ಕದ ವಿಚಾರದಲ್ಲಿ ಅಥವಾ ಹಣಕಾಸಿನ ವಿಚಾರದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇನ್ನೂ ರಾಜ್ಯ, ದೇಶ, ವಿಶ್ವ ಮಟ್ಟದಲ್ಲಿ ಸರಿಯಾದ ಅಂಕಿಅಂಶ ಅಥವಾ ಸ್ಟಾಟಿಸ್ಟಿಕ್‌ ಇಲ್ಲದೆ ಯಾವುದೇ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಸಾಮಾಜಿಕ-ಆರ್ಥಿಕ ಪ್ರಗತಿಗಳನ್ನು ಮೇಲ್ವಿಚಾರಣೆ ಮಾಡಲು, ಸಾಕ್ಷ್ಯ ಆಧಾರಿತ ನೀತಿಗಳನ್ನು ಅನುಷ್ಠಾನಗೊಳಿಸಲು ಮತ್ತು ಜಾಗತಿಕ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ನಿಖರವಾದ, ಸಮಯೋಚಿತ ಅಂಕಿಅಂಶಗಳು ಅತ್ಯಗತ್ಯ. ಹೌದು ಗುಣಮಟ್ಟದ ಅಂಕಿಅಂಶಗಳಿಲ್ಲದೆ ಶಿಕ್ಷಣ, ಆರೋಗ್ಯ, ಹವಮಾನ ಬದಲಾವಣೆ ಮತ್ತು ಆರ್ಥಿಕ ಬೆಳವಣಿಗೆಯಂತಹ ಪ್ರಮುಖ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಅಳೆಯಲು ಕಷ್ಟಸಾಧ್ಯವಾಗುತ್ತದೆ. ಹಾಗಾಗಿ ಸಮಾಜವನ್ನು ರೂಪಿಸುವಲ್ಲಿ ಮತ್ತು ಜೀವನವನ್ನು ಸುಧಾರಿಸುವಲ್ಲಿ ಅಂಕಿಅಂಶಗಳು ತುಂಬಾನೇ ಮುಖ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?