AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Telecommunication Day 2026: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಜನರ ಜೀವನವನ್ನು ಸುಧಾರಿಸುವಲ್ಲಿ ದೂರಸಂಪರ್ಕವು ಪ್ರಮುಖ ಪಾತ್ರ ವಹಿಸುತ್ತದೆ. ಈ ದೂರಸಂಪರ್ಕ ವ್ಯವಸ್ಥೆ, ಮಾಹಿತಿ ತಂತ್ರಜ್ಞಾನಗಳು, ಇಂದಿನ ಇಂಟರ್‌ನೆಟ್‌, ಡಿಜಿಟಲ್‌ ಸಾಧನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ನಮ್ಮ ದೈನಂದಿನ ಜೀವನವನ್ನು ರೂಪಿಸುವಲ್ಲಿ ಸಂವಹನ ತಂತ್ರಜ್ಞಾನಗಳ ನಿರ್ಣಾಯಕ ಪಾತ್ರಗಳ ಬಗ್ಗೆ ಹೇಳಲು ಪ್ರತಿವರ್ಷ ಮೇ 17 ರಂದು ವಿಶ್ವ ದೂರಸಂಪರ್ಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

World Telecommunication Day 2026: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ
ವಿಶ್ವ ದೂರ ಸಂಪರ್ಕ ದಿನImage Credit source: png magic
ಮಾಲಾಶ್ರೀ ಅಂಚನ್​
|

Updated on: May 17, 2026 | 9:47 AM

Share

ಮಾನವ ಇತಿಹಾಸದುದ್ದಕ್ಕೂ ಸಂವಹನ ಸಾಧನಗಳು ನಿರಂತರವಾಗಿ ವಿಕಸನ ಹೊಂದುತ್ತಾ ಬಂದಿದೆ. ಹಿಂದೆಲ್ಲಾ ದೂರದೂರಿನಲ್ಲಿರುವ ತಮ್ಮ ಸಂಬಂಧಿಕರು, ತಮ್ಮ ಮನೆಯವರೊಂದಿಗೆ ಕೇವಲ ಪತ್ರಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದರು. ಅದೇ ದೂರಸಂಪರ್ಕ (Telecommunication) ವ್ಯವಸ್ಥೆ ಬಂದ ನಂತರ ಜಗತ್ತು ತುಂಬಾನೇ ಹತ್ತಿರವಾಗಿದೆ ಅಂತಾನೇ ಹೇಳಬಹುದು. ಇಂಟರ್ನೆಟ್, ಮೊಬೈಲ್ ನೆಟ್‌ವರ್ಕ್‌ಗಳು, ಉಪಗ್ರಹ ಸಂವಹನಗಳು ಅಥವಾ ಸಾಮಾಜಿಕ ಮಾಧ್ಯಮ ವೇದಿಕೆಗಳಾಗಿರಲಿ, ಈ ಎಲ್ಲಾ ತಂತ್ರಜ್ಞಾನಗಳು, ದೂರಸಂಪರ್ಕ ವ್ಯವಸ್ಥೆಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿದೆ. ಡಿಜಿಟಲ್ ಯುಗದಲ್ಲಿ, ದೂರಸಂಪರ್ಕ ವ್ಯವಸ್ಥೆ ಕೇವಲ ಸಂದೇಶಗಳನ್ನು ಕಳುಹಿಸುವುದಕ್ಕೆ ಸೀಮಿತವಾಗಿಲ್ಲ, ಇದು ಶಿಕ್ಷಣ, ವ್ಯವಹಾರ, ಆರೋಗ್ಯ, ಸರ್ಕಾರಿ ಸೇವೆಗಳು ಮತ್ತು ಜಾಗತಿಕ ಸಹಕಾರದ ಅಡಿಪಾಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ದೈನಂದಿನ ಜೀವನದಲ್ಲಿ ಸಂವಹನ ತಂತ್ರಜ್ಞಾನಗಳ ನಿರ್ಣಾಯಕ ಪಾತ್ರ ಮತ್ತು ದೂರ ಸಂಪರ್ಕ ವ್ಯವಸ್ಥೆಗಳ ಬಗ್ಗೆ ಅರಿವನ್ನು ಮೂಡಿಸಲು ಪ್ರತಿವರ್ಷ ಮೇ 17 ರಂದು ವಿಶ್ವ ದೂರ ಸಂಪರ್ಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ದೂರಸಂಪರ್ಕ ದಿನದ ಇತಿಹಾಸವೇನು?

ಅಂತರಾಷ್ಟ್ರೀಯ ಟೆಲಿಗ್ರಾಫ್‌ ಒಕ್ಕೂಟ (ITU) ಸ್ಥಾಪನೆಯಾದ ಸ್ಮರಣಾರ್ಥವಾಗಿ 1969 ರ ಮೇ 17 ರಂದು ವಿಶ್ವ ದೂರಸಂಪರ್ಕ ದಿನದ ಆಚರಣೆಯನ್ನು ಸ್ಥಾಪಿಸಲಾಯಿತು. 1865 ರ ಮೇ  17 ರಂದು ಪ್ಯಾರಿಸ್‌ನಲ್ಲಿ ನಡೆದ ಸಮಾವೇಶದಲ್ಲಿ ಸಹಿ ಹಾಕುವ ಮೂಲಕ ಅಂತರಾಷ್ಟ್ರೀಯ ಟೆಲಿಗ್ರಾಫ್‌ ಒಕ್ಕೂಟವನ್ನು ರಚಿಸಲಾಯಿತು.  ನಂತರ 1932 ರಲ್ಲಿ ಇದರ ಹೆಸರನ್ನು ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ ಎಂದು ಮರು ನಾಮಕರಣ ಮಾಡಲಾಯಿತು. ನಂತರ 1947 ರಲ್ಲಿ ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಯಿತು.

ಇದರ ನಂತರ, 2005 ರಲ್ಲಿ , ವಿಶ್ವ ಶೃಂಗಸಭೆಯ ನಂತರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಪ್ರಸ್ತಾವನೆಯ ಮೇರೆಗೆ, ಮೇ 17 ಅನ್ನು ವಿಶ್ವ ಮಾಹಿತಿ ದಿನವೆಂದು ಘೋಷಿಸಲಾಯಿತು. 2006 ರ ನವೆಂಬರ್ ತಿಂಗಳಲ್ಲಿ  ಟರ್ಕಿಯ ಅಂಟಲ್ಯದಲ್ಲಿ ನಡೆದ ITU ಪ್ಲೆನಿಪೊಟೆನ್ಷಿಯರಿ ಸಮ್ಮೇಳನದಲ್ಲಿ, ಮೇ 17 ಅನ್ನು ವಿಶ್ವ ದೂರಸಂಪರ್ಕ ದಿನ ಮತ್ತು ವಿಶ್ವ ಮಾಹಿತಿ ಸೊಸೈಟಿ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ವಿಶೇಷ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಮೇ 15 ರಂದೇ ಅಂತಾರಾಷ್ಟ್ರೀಯ ಕುಟುಂಬ ದಿನ ಆಚರಿಸುವುದು ಏಕೆ?

ವಿಶ್ವ ದೂರಸಂಪರ್ಕ ದಿನದ ಮಹತ್ವವೇನು?

  • ಆರ್ಥಿಕತೆ, ಸಮಾಜ ಮತ್ತು ವೈಯಕ್ತಿಕ ಜೀವನವನ್ನು ರೂಪಿಸುವಲ್ಲಿ ಇಂಟರ್ನೆಟ್‌, ಮೊಬೈಲ್‌ ನೆಟ್‌ವರ್ಕ್‌ ಸೇರಿದಂತೆ ಇತದೆ ಡಿಜಿಟಲ್‌ ತಂತ್ರಜ್ಞಾನಗಳಂತಹ ಸಂವಹನ ಸಾಧನಗಳ ಮಹತ್ವದ ಬಗ್ಗೆ ಅರಿವು ಮೂಡಿಸಲು ಈ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.
  • ವಿಶ್ವ ದೂರಸಂಪರ್ಕ ದಿನವನ್ನು ಆಚರಿಸುವ ಹಿಂದಿನ ಉದ್ದೇಶವೆಂದರೆ ದೂರಸಂಪರ್ಕದ ಬಗ್ಗೆ ಜನರಿಗೆ ಅರಿವು ಮೂಡಿಸುವುದು.
  • ಡಿಜಿಟಲ್ ಯುಗದಲ್ಲಿ ಇಂಟರ್ನೆಟ್ ಮತ್ತು ಇತರ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳನ್ನು ಬಳಸುವ ಸಾಧ್ಯತೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
  • ಈ ದಿನ ಪರಸ್ಪರ ಸಂವಹನವನ್ನು ಕಾಪಾಡಿಕೊಳ್ಳಲು ತಂತ್ರಜ್ಞಾನದ ಬಳಕೆಗೆ ಇದು ಒತ್ತು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ