AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Tuberculosis Day 2024: ಟಿಬಿ ಬಗ್ಗೆ ಭಯಬೇಡ, ಈ ಚಿಕಿತ್ಸೆಯಿಂದ ಕ್ಷಯ ಶಮನ

ಒಂದು ಕಾಲದಲ್ಲಿ ಜನರನ್ನು ಭಯಭೀತರನ್ನಾಗಿಸಿದ್ದ ಕಾಯಿಲೆಗಳಲ್ಲಿ ಈ ಕ್ಷಯ ರೋಗ ಅಥವಾ ಟಿಬಿ ಕೂಡ ಒಂದು. ಒಬ್ಬರಿಂದ ಇನ್ನೊಬ್ಬರಿಗೆ ಸಾಂಕ್ರಾಮಿಕವಾಗಿ ಹರಡುವ ಈ ಕ್ಷಯರೋಗಕ್ಕೆ ಸರಿಯಾದ ಚಿಕಿತ್ಸೆ ಪಡೆದುಕೊಳ್ಳದೇ ಹೋದರೆ ಜೀವಕ್ಕೆ ಕಂಟಕ ಎದುರಾಗಬಹುದು. ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಮಾರ್ಚ್‌ 24ರಂದು ವಿಶ್ವದಾದ್ಯಂತ ಕ್ಷಯರೋಗ (ಟಿಬಿ) ದಿನವನ್ನು ಆಚರಿಸಲಾಗುತ್ತದೆ.

World Tuberculosis Day 2024: ಟಿಬಿ ಬಗ್ಗೆ ಭಯಬೇಡ, ಈ ಚಿಕಿತ್ಸೆಯಿಂದ ಕ್ಷಯ ಶಮನ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Mar 23, 2024 | 4:32 PM

Share

ಕ್ಷಯ ರೋಗವೆನ್ನುವುದು ಅತ್ಯಂತ ಭಯಾನಕ ಹಾಗೂ ನೋವನ್ನು ಉಂಟು ಮಾಡುವ ಸಾಂಕ್ರಾಮಿಕ ರೋಗಗಳಲ್ಲಿ ಒಂದು. ಇದು ‘ಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್’ ಎಂಬ ಬ್ಯಾಕ್ಟೀರಿಯಾದಿಂದ ರೋಗವು ಬರುತ್ತದೆ. ಸಾಂಕ್ರಾಮಿಕ ಕಾಯಿಲೆವಾಗಿರುವ ಈ ಕ್ಷಯರೋಗವು ಒಬ್ಬರಿನಿಂದ ಇನ್ನೊಬ್ಬರಿಗೆ ಸುಲಭವಾಗಿ ಹರಡಬಲ್ಲದು. ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ ಅಥವಾ ಆ ವ್ಯಕ್ತಿಯ ಕಫದಿಂದಲೂ ಹರಡುವ ಸಾಧ್ಯತೆಯಿದೆ. ಶ್ವಾಸಕೋಶದ ಮೇಲೆ ದೀರ್ಘ ಪರಿಣಾಮ ಬೀರುವ ಕಾರಣ ಪ್ರಾರಂಭದಲ್ಲಿಯೇ ಸರಿಯಾದ ಚಿಕಿತ್ಸೆಯನ್ನು ಮಾಡುವುದು ಒಳ್ಳೆಯದು. ರೋಗ ಲಕ್ಷಣಗಳು ಗಂಭೀರವಾದರೆ ದೇಹದ ಇತರ ಭಾಗಗಳಿಗೂ ಹಾನಿಯಾಗುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆಯಿರುವ ವ್ಯಕ್ತಿಗಳಲ್ಲಿ ಈ ರೋಗ ಬರುವ ಸಾಧ್ಯತೆಯೂ ಅಧಿಕವಾಗಿರುತ್ತದೆ. ಈ ಗಂಭೀರ ಆರೋಗ್ಯ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಕ್ಷಯ ರೋಗ ದಿನವನ್ನು ಆಚರಿಸಲಾಗುತ್ತದೆ

ವಿಶ್ವ ಕ್ಷಯ ರೋಗ ದಿನದ ಇತಿಹಾಸ

ಡಾ.ರಾಬರ್ಟ್ ಕೋಚ್ ಟಿಬಿಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು1882ರಲ್ಲಿ ಕಂಡುಹಿಡಿದರು. ವಿಜ್ಞಾನಿಯ ಈ ಆವಿಷ್ಕಾರವನ್ನು ನೆನಪಿಸಲು ಮಾರ್ಚ್ 24 ರಂದು ವಿಶ್ವ ಕ್ಷಯ ದಿನವೆಂದು ಆಚರಿಸಲಾಗುತ್ತದೆ.

ಇದನ್ನೂ ಓದಿ: ಕಾಮಾಲೆ ಬಂದರೆ ಆತಂಕ ಬೇಡ, ಶೀಘ್ರವಾಗಿ ಗುಣ ಪಡಿಸಿಕೊಳ್ಳುವುದು ಹೇಗೆ?

ವಿಶ್ವ ಕ್ಷಯ ರೋಗ ದಿನದ ಮಹತ್ವ

ಪ್ರತಿ ವರ್ಷ ಮಾರ್ಚ್ 26 ರಂದು ವಿಶ್ವದೆಲ್ಲೆಡೆಯಲ್ಲಿ ಟಿವಿ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದೆಲ್ಲೆಡೆ ಅನೇಕರು ಈ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಆರೋಗ್ಯದ ಮೇಲೆ ಗಂಭೀರ ಬ್ಯಾಕ್ಟೀರಿಯಾವು ಬೀರುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶವನ್ನು ಹೊಂದಿದೆ. ಈ ದಿನದಂದು ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ